AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ವಿರುದ್ಧ ನಿತೀಶ್ ವಾಗ್ದಾಳಿ, ಈಗ ಬೇಕಿರುವುದು ಬಿಜೆಪಿ ಮುಕ್ತ ಭಾರತ ಎಂದ ಕೆಸಿಆರ್

ಉಳಿದೆಲ್ಲ ರಾಜಕೀಯ ಪಕ್ಷಗಳನ್ನು ಮುಗಿಸುತ್ತೇವೆ ಎಂದು ಆಡಳಿತ ಪಕ್ಷ ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಪಟನಾದಲ್ಲಿ ಮಾತನಾಡಿದ  ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್  ಹೇಳಿದ್ದಾರೆ.

ಕೇಂದ್ರ ವಿರುದ್ಧ ನಿತೀಶ್ ವಾಗ್ದಾಳಿ, ಈಗ ಬೇಕಿರುವುದು ಬಿಜೆಪಿ ಮುಕ್ತ ಭಾರತ ಎಂದ ಕೆಸಿಆರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 31, 2022 | 8:41 PM

Share

ಪಟನಾ: ಮೋದಿ ಸರ್ಕಾರದ ಮೊದಲು ರೂಪಾಯಿ ಮೌಲ್ಯ ಇಷ್ಟೊಂದು ಕುಸಿದಿರಲಿಲ್ಲ. ಒಂದು ವರ್ಷದಿಂದ ರೈತರು ಏಕೆ ಪ್ರತಿಭಟನೆ ನಡೆಸಬೇಕಾಯಿತು ?ಕೇಂದ್ರದ ವೈಫಲ್ಯದಿಂದ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ನಷ್ಟವನ್ನು ಎದುರಿಸುತ್ತಿದೆ. ಉಳಿದೆಲ್ಲ ರಾಜಕೀಯ ಪಕ್ಷಗಳನ್ನು ಮುಗಿಸುತ್ತೇವೆ ಎಂದು ಆಡಳಿತ ಪಕ್ಷ ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಪಟನಾದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ (KCR)  ಹೇಳಿದ್ದಾರೆ.  “ಕಾಂಗ್ರೆಸ್-ಮುಕ್ತ ಭಾರತ” ಎಂಬ ಘೋಷಣೆಯನ್ನು ತಿರುಚುವ ಮೂಲಕ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ರಾವ್ . “ನಮಗೆ ಈಗ ಬೇಕಾಗಿರುವುದು ಬಿಜೆಪಿ-ಮುಕ್ತ ಭಾರತ ಎಂದು ಹೇಳಿದ್ದಾರೆ. ದೇಶದ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ನಾವು ಪ್ರಯತ್ನಿಸುತ್ತೇವೆ ಎಂದು ರಾವ್ ಹೇಳಿದ್ದಾರೆ.ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಇಬ್ಬರು ನಾಯಕರು ವಾಗ್ದಾಳಿ ನಡೆಸಿದ್ದಾರೆ. 2024ರ ಲೋಕಸಭೆ ಚುನಾವಣೆಯ ವೇಳೆಗೆ ವಿರೋಧ ವಿರೋಧ ಪಕ್ಷವನ್ನು ಯಾರು ಮುನ್ನಡೆಸುತ್ತಾರೆ ಮತ್ತು ಕಾಂಗ್ರೆಸ್ ಪಕ್ಷವನ್ನು ಜತೆಗೆ ಸೇರಿಸಲಾಗುತ್ತಿದೆಯೇ ಎಂದು ಕೇಳಿದಾಗ ಟಿಆರ್ ಎಸ್ ಮುಖ್ಯಸ್ಥ ರಾವ್, ಈ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ಪ್ರಧಾನಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಪಾತ್ರದ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೆಸಿಆರ್, “ಈ ವಿಷಯಗಳನ್ನು ಸೂಕ್ತ ಸಮಯದಲ್ಲಿ ನಿರ್ಧರಿಸಲಾಗುತ್ತದೆ, ನಮಗೆ ಯಾವುದೇ ಆತುರವಿಲ್ಲ” ಎಂದು ಹೇಳಿದರು. ತೆಲಂಗಾಣ ಸಿಎಂ ನಿತೀಶ್ ಕುಮಾರ್ ಅವರನ್ನು ಪ್ರೀತಿಯಿಂದ “ಬಡೆ ಭಾಯ್” (ದೊಡ್ಡಣ್ಣ) ಎಂದು ಕರೆದರು.

ಜನತಾ ದಳ (ಯುನೈಟೆಡ್) ನಾಯಕರ ವಿರೋಧ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಪರಿಗಣಿಸಬಹುದೇ ಎಂಬ ಪ್ರಶ್ನೆಗೆ ಕೆಸಿಆರ್, ನಿತೀಶ್ ಕುಮಾರ್ ಅವರು ದೇಶದ ಹಿರಿಯ ಮತ್ತು ಅತ್ಯುತ್ತಮ ನಾಯಕರಲ್ಲಿ ಒಬ್ಬರು. ನಾವು ಇತರ ವಿಷಯಗಳ ಬಗ್ಗೆ ಆಮೇಲೆ ಚಿಂತಿಸುತ್ತೇವೆ ಎಂದಿದ್ದಾರೆ . “ಯಾವುದೇ ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ” ಮೋದಿ ಸರ್ಕಾರ ‘ಅಗ್ನಿಪಥ್’ ಯೋಜನೆ ಜಾರಿಗೆ ತಂದಿದೆ ಎಂದು ಟಿಆರ್‌ಎಸ್ ಮುಖ್ಯಸ್ಥರು ಟೀಕಿಸಿದರು.

ವಿಶೇಷ ವರ್ಗದ ಸ್ಥಾನಮಾನದ ಬಿಹಾರದ ಬೇಡಿಕೆಯನ್ನು “ತಿರಸ್ಕರಿಸಿದ” ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ದ ಅವರು ಕಿಡಿಕಾರಿದ್ದಾರೆ. ಇಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರ್, ಕೇಂದ್ರ ಸರ್ಕಾರ  ‘ಅತಿಯಾದ ಪ್ರಚಾರ-ಪ್ರಸಾರ’  ಮಾಡುತ್ತಿದೆ ಎಂದು ಆರೋಪಿಸಿದರು.

Published On - 5:56 pm, Wed, 31 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ