AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಶನ್ ಕಮಲವೇ ಬಿಜೆಪಿ ಸೋಲಿಗೆ ಕಾರಣ ಎಂದ ಈಶ್ವರಪ್ಪ; ಸಿಟಿ ರವಿ, ರವಿ ಕುಮಾರ್ ಹೇಳಿದ್ದೇನು ಗೊತ್ತಾ?

ಬಿಜೆಪಿ ಸೋಲಿಗೆ ಆಪರೇಷನ್ ಕಮಲವೇ ಕಾರಣ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಷರಿಷತ್ ಸದಸ್ಯ ಎನ್​ ರವಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಆಪರೇಶನ್ ಕಮಲವೇ ಬಿಜೆಪಿ ಸೋಲಿಗೆ ಕಾರಣ ಎಂದ ಈಶ್ವರಪ್ಪ; ಸಿಟಿ ರವಿ, ರವಿ ಕುಮಾರ್ ಹೇಳಿದ್ದೇನು ಗೊತ್ತಾ?
ಕೆಎಸ್ ಈಶ್ವರಪ್ಪ, ಎನ್ ರವಿಕುಮಾರ್ ಮತ್ತು ಸಿಟಿ ರವಿ
Rakesh Nayak Manchi
Rakesh Nayak Manchi|

Updated on: Jun 26, 2023 | 4:23 PM

Share

ಬೆಂಗಳೂರು: ಬಿಜೆಪಿಯಲ್ಲಿ ಶಿಸ್ತು ಹೋಗಿದೆ, ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ಅನುಭವಿಸುತ್ತಿದ್ದೇವೆ ಎಂದು ಹೇಳುವ ಮೂಲಕ ಬಿಜೆಪಿ ಸೋಲಿಗೆ ಆಪರೇಷನ್ ಕಮಲವೇ ಕಾರಣ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಪರೋಕ್ಷವಾಗಿ ಹೇಳಿದ್ದಾರೆ. ಇದು ಬಿಜೆಪಿಯಲ್ಲಿ ಆಂತರಿಕ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್​ ರವಿಕುಮಾರ್, ಕೆ.ಎಸ್.ಈಶ್ವರಪ್ಪ ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಕಾಂಗ್ರೆಸ್​​ನಿಂದ ಬಂದವರಿಂದಲೇ ನಾವು ಅಧಿಕಾರ ನಡೆಸಿದ್ದು. ಪಕ್ಷಕ್ಕೆ ಬಂದ ಬಹಳಷ್ಟು ವಲಸಿಗರು ಗೆದ್ದಿದ್ದಾರೆ. ಲೋಕಸಭೆ ಚುನಾವಣೆಯನ್ನು ಎಲ್ಲರೂ ಒಟ್ಟಾಗಿ ಎದುರಿಸುತ್ತೇವೆ. ಹೊರಗಿನವರು, ಒಳಗಿನವರು ಎಂಬ ಭೇದ ಇಲ್ಲ ಎಂದರು.

ಈಶ್ವರಪ್ಪ ಹೇಳಿಕೆ ಬಗ್ಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ನಾನು ಇದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಹೋಗುವುದಿಲ್ಲ. ನಾನು ಅಂದು ದೆಹಲಿಯಲ್ಲಿ ಕೇವಲ ಅರ್ಕಾವತಿಗೆ ಸಂಬಂಧಿಸಿದಂತೆ ಮಾತ್ರ ಹೇಳಿದ್ದೆ. ಅರ್ಕಾವತಿ ವಿಷಯದಲ್ಲಿ ನಾವು ಬಿಗಿ ನಿಲುವು ತೆಗೆದುಕೊಂಡಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಅಂತ ನಾನು ದೆಹಲಿಯಲ್ಲಿ ಹೇಳಿದ್ದೆ. ಹೀಗಾಗಿ ಎಲ್ಲವನ್ನೂ ಬಂದವರ ತಲೆ ಮೇಲೆ ಕಟ್ಟಲು ಇಷ್ಟ ಪಡುವುದಿಲ್ಲ. ಯಾರು ಸರಿ ಅಂತಲೂ ನಾವು ಹೇಳುವುದಿಲ್ಲ. ಆದರೆ ಪಕ್ಷದ ವೇದಿಕೆಯಲ್ಲಿ ಏನೇ ಇದ್ದರೂ ಮಾತಾಡುತ್ತೇನೆ. ನಮ್ಮಿಂದ ಏನೂ ತಪ್ಪು ಆಗಿಲ್ಲ ಅನ್ನೋದು ಬೇಡ, ಕೆಲವು ತಪ್ಪಾಗಳಾಗಿವೆ ಎಂದರು.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸಲು ಡಿಕೆ ಶಿವಕುಮಾರ್ ಆಟ: ಶಾಸಕ ಯತ್ನಾಳ್

ಇತ್ತ ಕಾಂಗ್ರೆಸ್​ ಹಿರಿಯ ನಾಯಕರೂ ಆಗಿರುವ ಸಚಿವ ಎಂಬಿ ಪಾಟೀಲ್ ಅವರು ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮುನಿರತ್ನ, ಸುಧಾಕರ, ಎಮ್‌‌ಟಿಬಿ ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್ ಸೇರಿದಂತೆ ಬಿಜೆಪಿ ಸೇರಿದ 17 ಮಂದಿ ಉತ್ತರ ಕೊಡಲಿ ಎಂದರು. ಅಲ್ಲದೆ, ಅವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೆ ಇಲ್ಲ ಎಂದರು.

ಅಡ್ಜೆಸ್ಟ್​ಮೆಂಟ್​ ರಾಜಕಾರಣ ಬಗ್ಗೆ ಬಹಿರಂಗವಾಗಿ ಮಾತಾಡಬಾರದು. ನಾಲ್ಕು ಗೋಡೆಗಳ ಮಧ್ಯೆ ಮಾತಾಡಬೇಕೆಂದು ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ. ಕರ್ನಾಟಕ ರಾಜಕಾರಣದ ಇತಿಹಾಸದಲ್ಲೇ ಹೊಂದಾಣಿಕೆ ನಡೆದಿಲ್ಲ. ಬಿಜೆಪಿಯಲ್ಲಿ ಶಿಸ್ತು ಹೋಗಿದೆ, ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ಅನುಭವಿಸುತ್ತಿದ್ದೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಆಪರೇಷನ್ ಕಮಲವೇ ಬಿಜೆಪಿ ಸೋಲಿಗೆ ಕಾರಣ ಎಂದು ಹುಬ್ಬಳ್ಳಿಯಲ್ಲಿ ಈಶ್ವರಪ್ಪ ಹೇಳಿಕೆ ನೀಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು