AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CT Ravi: ಜಾತ್ಯಾತೀತ ಜನತಾದಳ ಅಲ್ಲ, ಜಾತಿಯ ದಳ ಎಂದು ಬದಲಿಸಿ: ಕುಮಾರಸ್ವಾಮಿಗೆ ಸಿ.ಟಿ. ರವಿ ಟಾಂಟ್

BJP National General Secretary at Kolar: ಜೆಡಿಎಸ್​ನ ಹೆಸರನ್ನು ಜಾತ್ಯತೀತ ಜನತಾ ದಳ ಎನ್ನುವ ಬದಲು ಜಾತಿಯ ದಳ ಎಂದು ಹೆಸರು ಬದಲಿಸಿದರೆ ಒಳ್ಳೆಯದು ಎಂದು ಹೆಚ್​ಡಿಕೆಗೆ ಸಿ.ಟಿ. ರವಿ ಸಲಹೆ ನೀಡಿದ್ದಾರೆ. ಹಾಗೆಯೇ, ಬಿಜೆಪಿ ಒಡೆಯರ್, ಸಾವರ್ಕರ್ ಸಿದ್ಧಾಂತ ಪ್ರತಿಪಾದಕವಾದರೆ, ಕಾಂಗ್ರೆಸ್ ಟಿಪ್ಪು ಸಮರ್ಥಕ ಎಂದು ಸಿ.ಟಿ. ರವಿ ಹೇಳಿದ್ದಾರೆ.

CT Ravi: ಜಾತ್ಯಾತೀತ ಜನತಾದಳ ಅಲ್ಲ, ಜಾತಿಯ ದಳ ಎಂದು ಬದಲಿಸಿ: ಕುಮಾರಸ್ವಾಮಿಗೆ ಸಿ.ಟಿ. ರವಿ ಟಾಂಟ್
ಕೋಲಾರದಲ್ಲಿ ಸಿಟಿ ರವಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 09, 2023 | 3:39 PM

Share

ಕೋಲಾರ: ಬ್ರಾಹ್ಮಣ ಸಿಎಂ ವಿಚಾರವನ್ನು ಎತ್ತಿದ ಮಾಜಿ ಸಿಎಂ ಕುಮಾರಸ್ವಾಮಿ (HDK Brahmin CM) ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಗುಡುಗಿದ್ದಾರೆ. ಜೆಡಿಎಸ್​ನ ಹೆಸರನ್ನು ಜಾತ್ಯತೀತ ಜನತಾ ದಳ ಎನ್ನುವ ಬದಲು ಜಾತಿಯ ದಳ ಎಂದು ಹೆಸರು ಬದಲಿಸಿದರೆ ಒಳ್ಳೆಯದು ಎಂದು ಹೆಚ್​ಡಿಕೆಗೆ ಸಿ.ಟಿ. ರವಿ ಸಲಹೆ ನೀಡಿದ್ದಾರೆ.

ಪ್ರತೀ ಬಾರಿ ಲಾಟರಿ ಹೊಡೆಯಲು ಸಾಧ್ಯವಿಲ್ಲ. ಈ ಹಿಂದೆ ಕುಮಾರಸ್ವಾಮಿಗೆ ಲಾಟರಿ ಹೊಡೆದಿತ್ತು, ಹಾಗಾಗಿ ಅದೇ ವಾದ ಅವರದ್ದಾಗಿದೆ. ಬಿಜೆಪಿ ಪಕ್ಷದಲ್ಲಿ ಬ್ರಾಹ್ಮಣ ಸಿಎಂ ವಿಚಾರ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಇಂಥ ಚರ್ಚೆಗಳು ಎದುರಾಗಿದ್ದವು. ಜಾತ್ಯತೀತ ನಾಯಕರೆನಿಸಿಕೊಂಡವರು ಜಾತಿ ಬಗ್ಗೆ ಮಾತನಾಡುವುದು ಸರಿಯಲ್ಲ. ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕೊಡುವುದು ಬಿಜೆಪಿಯ ಸಿದ್ಧಾಂತವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ಡಿಕೆಶಿಗೆ ಟಾಂಟ್

ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ ಹೇಳಿಕೆಗೆ ಸಿ.ಟಿ. ರವಿ ವ್ಯಂಗ್ಯದ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಒಂದು ಕಾಲದಲ್ಲಿ ಇಂದಿರಾ ಗಾಂಧಿ ಹೆಸರು ಹೇಳಿದರೆ ಬೇಲಿ ಗೂಟಕ್ಕೂ ಹೋಗಿ ವೋಟು ಹಾಕುತ್ತಿದ್ದರು. ಎಂಎಲ್​ಎ, ಎಂಪಿ ಆಗುತ್ತಿದ್ದರು. ಅದರೆ, ಈಗ ಕಾಂಗ್ರೆಸ್​ನವರಿಗೆ ರಾಹುಲ್ ಗಾಂಧಿ ಹೆಸರು ಹೇಳಿದರೆ ಬರುವ ವೋಟೂ ಹೋಗುತ್ತದೆ. ಅದೇ ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿದರೆ ಬಿಜೆಪಿಗೆ ವೋಟ್ ಬೀಳುತ್ತದೆ. ಇದು ಬಿಜೆಪಿಯ ಅದೃಷ್ಟ, ಕಾಂಗ್ರೆಸ್​ನವರ ದುರದೃಷ್ಟ ಎಂದು ಮಾಜಿ ಸಚಿವರು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: DK Shivakumar: ನನ್ನ ಮಗಳ ಫೀಸ್ ಬಗ್ಗೆ ಮಾಹಿತಿ ಬೇಕಂತೆ; ಸಿಬಿಐಗೆ ಬುದ್ಧಿ ಹೇಳುತ್ತೇನೆ ಎಂದ ಡಿಕೆ ಶಿವಕುಮಾರ್

ಟಿಪ್ಪು ಸುಲ್ತಾನ್ ವಿಚಾರ:

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತೊಮ್ಮೆ ಟಿಪ್ಪು ಸುಲ್ತಾನ್ ವಿಚಾರವನ್ನು ಕೆದಕಿ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ. ಬಿಜೆಪಿಯದ್ದು ಒಡೆಯರ್, ಸಾವರ್ಕರ್ ಸಿದ್ಧಾಂತವಾದರೆ, ಕಾಂಗ್ರೆಸ್​ನದ್ದು ಟಿಪ್ಪು ಸಿದ್ಧಾಂತದ ಪ್ರತಿಪಾದನೆ ಎಂದು ಟೀಕಿಸಿದ್ದಾರೆ.

ಟಿಪ್ಪು ಸುಲ್ತಾನ್ ಹುಟ್ಟು ರಾಜನಲ್ಲ. ಮೈಸೂರು ರಾಜ ಒಡೆಯರ್ ಅವರ ಸಂಸ್ಥಾನದಲ್ಲಿ ಟಿಪ್ಪುವಿನ ತಂದೆ ಒಬ್ಬ ಸಾಮಾನ್ಯ ಸೈನಿಕನಾಗಿದ್ದು ಸೇನಾಧಿಪತಿಯಾದವರು. ಸುಲ್ತಾನ್ ಮೋಸದಿಂದ ಒಡೆಯರ್ ಸಂಸ್ಥಾನ ಕಬಳಿಸಿದ್ದು ಟಿಪ್ಪು.

ಟಿಪ್ಪು ಸುಲ್ತಾನ್ ಪಾರ್ಸಿ ಭಾಷೆಯನ್ನು ಮೈಸೂರಿನಲ್ಲಿ ಬಲವಂತವಅಗಿ ಹೇರಿದವರು. ನಮಗೂ ಪಾರ್ಸಿಗೂ ಏನು ಸಂಬಂಧ? ಅದು ನಮ್ಮ ನೆರೆಹೊರೆಯ ಭಾಷೆಯೂ ಅಲ್ಲ. ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಡಿದ್ದು ಸತ್ಯ. ಅದೇ ರೀತಿ ಪೆರಂಬೂರಿನಲ್ಲಿ ಹಿಂದೂಗಳ ನರಮೇಧ ಮಾಡಿದ್ದೂ ಅಷ್ಟೇ ಸತ್ಯ. ಮಂಡ್ಯದ ಅಯ್ಯಂಗಾರ ಕುಟುಂಬಗಳನ್ನು ನರಮೇಧ ಮಾಡಿದ್ದು ಟಿಪ್ಪು. ರಾಜ ರಾಣಿಯರನ್ನು ಸೆರೆಮನೆಯಲ್ಲಿ ಇಟ್ಟಿದ್ದು ಟಿಪ್ಪುವಿನ ಸಿದ್ದಾಂತ. ಸತ್ಯದ ಪರ ಧ್ವನಿ ಎತ್ತಿದವರನ್ನು ನರಮೇಧ ಮಾಡಿದ್ದು ಟಿಪ್ಪು ಸಿದ್ಧಾಂತ. ಒಡೆಯರ್ ಕೊಡುಗೆ ಏನೆಂದು ಕೇಳಿದರೆ ಕನ್ನಂಬಾಡಿ ಕಟ್ಟೆ, ಮೈಸೂರು ಪೇಪರ್ ಮಿಲ್ಸ್ ಹೆಸರು ಹೇಳಬಹುದು. ಆದರೆ, ಟಿಪ್ಪು ಕೊಡುಗೆ ಏನು ಎಂದರೆ ಯಾರೂ ಹೇಳಲು ತಯಾರಿಲ್ಲ. ಒಡೆಯರ್, ಸಾವರ್ಕರ್ ಸಿದ್ಧಾಂತದ ಮೇಲೆ ಬಿಜೆಪಿ ನಡೆಯುತ್ತದೆ. ಟಿಪ್ಪುವಿನ ಸಿದ್ಧಾಂತದ ಪ್ರತಿಪಾದನೆ ಕಾಂಗ್ರೆಸ್​ನದ್ದು ಎಂದು ಸಿ.ಟಿ. ರವಿ ಅಭಿಪ್ರಾಯಪಟ್ಟಿದ್ದಾರೆ.

Published On - 3:39 pm, Thu, 9 February 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ