AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚೆಯೊಳಗೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ ಎಂದ ಕಾಂಗ್ರೆಸ್, ಇದನ್ನು ಸಿದ್ದರಾಮಯ್ಯರಿಗೆ ತಳುಕು ಹಾಕಿದ ಸಿಟಿ ರವಿ

ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಇದಕ್ಕೆ ತಿರುಗೇಟು ನೀಡಿದ ಸಿಟಿ ರವಿ, ಇದನ್ನು ಸಿದ್ದರಾಮಯ್ಯ ಅವರಿಗೆ ತಳುಕು ಹಾಕಿದ್ದಾರೆ.

ಪಂಚೆಯೊಳಗೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ ಎಂದ ಕಾಂಗ್ರೆಸ್, ಇದನ್ನು ಸಿದ್ದರಾಮಯ್ಯರಿಗೆ ತಳುಕು ಹಾಕಿದ ಸಿಟಿ ರವಿ
ಸಿಟಿ ರವಿ ಮತ್ತು ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on:Jun 30, 2023 | 5:04 PM

Share

ಬೆಂಗಳೂರು: ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಕಂಗೆಟ್ಟ ಕೆಲವು ಬಿಜೆಪಿ ನಾಯಕರು ಪಕ್ಷದ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santhosh), ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ವ್ಯಂಗ್ಯವಾಡಿದ ರಾಜ್ಯ ಕಾಂಗ್ರೆಸ್ (Congress), ಇಡೀ ಬಿಜೆಪಿ (BJP) ಒಂದು ಪಂಚೆಯೊಳಗೆ (ಬಿಎಲ್ ಸಂತೋಷ್) ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ ಎಂದು ಹೇಳಿದೆ.

“ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ. ಬಂಧನದಿಂದ ಹೊರಬರಬೇಕು ಎಂದರೆ ಆ “ಪಂಚೆ”ಯನ್ನು ಹರಿಯಲೇಬೇಕು. ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ ‘ಸಂಘ’ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ರೇಣುಕಾಚಾರ್ಯ. ಬಿಜೆಪಿಯಲ್ಲಿ ಅವರು ಬದುಕುಳಿಯಲು ಸಾಧ್ಯವೇ ಎಂದು ಕಾದು ನೋಡಬೇಕು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಸಿಟಿ ರವಿ

ಪಂಚೆಯೊಳಗೆ ಬಿಜೆಪಿ ಸಿಲುಕಿ ವಿಲವಿಲ ಎಂದು ಒದ್ದಾಡುತ್ತಿದೆ ಎಂಬ ಕಾಂಗ್ರೆಸ್ ಟ್ವೀಟ್​ಗೆ ತಿರುಗೇಟು ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅದನ್ನು ಸಿದ್ದರಾಮಯ್ಯ (ಸಿದ್ದರಾಮಯ್ಯ ಪಂಚೆಯನ್ನೇ ಧರಿಸುವುದು) ಅವರಿಗೆ ಹೇಳಿರಬೇಕು ಎಂದು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಕಡೆಯವರು ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದಾರೆ ಅನ್ನಿಸುತ್ತದೆ. ಅದಕ್ಕೆ ಸಿದ್ದರಾಮಯ್ಯಗೆ ಸ್ವಲ್ಪ ಹುಷಾರಾಗಿ ಇರಲು ಹೇಳಿ. ಅವರಲ್ಲೇ ಒಳಬೇಗುದಿ ಜಾಸ್ತಿಯಾಗಿದೆ, ಅವರ ಬಗ್ಗೆ ಹೇಳಿಕೊಂಡಿರಬೇಕು ಎಂದರು.

ಇದನ್ನೂ ಓದಿ: ಹೇಳಿದ್ದೊಂದು ಮಾಡ್ತಿರೋದು ಇನ್ನೊಂದು, ಅದಕ್ಕೆ ಷರತ್ತುಗಳು ಬೇರೆ! ಜುಲೈ 4 ರಂದು ಧರಣಿಗೆ ಬಿಜೆಪಿ ನಿರ್ಧಾರ

ಬಿಜೆಪಿ 20 ಬಣವಾಗಿದೆ, ಫೆವಿಕಾಲ್ ಹಾಕಿದರೂ ಅಂಟಲ್ಲ ಎಂಬ ಎಂ.ಬಿ. ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ ಸಿಟಿ ರವಿ, ಯಾರು ಯಾರು ಎಲ್ಲೆಲ್ಲಿ ಹರಿದುಕೊಂಡು ಹೋಗುತ್ತದೆ ಎಂದು ಸ್ವಲ್ಪ ದಿನ ಕಾಯಿರಿ. ಈ ಸರ್ಕಾರ ಬಂದು ಬರೀ 1.5 ತಿಂಗಳು ಮಾತ್ರ ಆಗಿದೆ. ಆಗಲೇ ಸ್ವಲ್ಪ ಸ್ವಲ್ಪ ಹರಿಯಲು ಶುರುವಾಗಿದೆ. ಮುಂದೆ ಯಾರು ಯಾರದ್ದು ಎಲ್ಲೆಲ್ಲಿ ಹರಿದುಕೊಂಡು ಹೋಗುತ್ತದೆ ಸ್ವಲ್ಪ ದಿನ ಕಾಯಿರಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Fri, 30 June 23

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ