AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿನ ಮುಸ್ಲಿಮರು ಘಜನಿ, ಘೋರಿ, ಬಾಬರ್ ಮಾನಸಿಕತೆಯಿಂದ ಹೊರ ಬರಬೇಕು: ಸಿಟಿ ರವಿ

ಭಾರತೀಯ ಮುಸಲ್ಮಾನರು ಆ ದಾಳಿಕೋರರ ಜೊತೆ ತಮ್ಮ ಅಸ್ಮಿತೆಯನ್ನು ಗುರುತಿಸಿಕೊಳ್ಳುವುದಿಲ್ಲ. ಇವರು ಭಾರತೀಯ ಸನಾತನ ಪರಂಪರೆಗೆ ವಿಶ್ವಾಸವಿಟ್ಟು ಭಾರತದಲ್ಲಿ ಉಳಿದುಕೊಂಡಿದ್ದಾರೆ ಎಂದು ಸಿಟಿ ರವಿ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.

ಇಲ್ಲಿನ ಮುಸ್ಲಿಮರು ಘಜನಿ, ಘೋರಿ, ಬಾಬರ್ ಮಾನಸಿಕತೆಯಿಂದ ಹೊರ ಬರಬೇಕು: ಸಿಟಿ ರವಿ
ಸಿಟಿ ರವಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 16, 2024 | 11:04 AM

Share

ಚಿಕ್ಕಮಗಳೂರು, ಜನವರಿ 16: ಘಜನಿ, ಘೋರಿ, ಬಾಬರ್ ಮಾನಸಿಕತೆ ಬಹಳ ಅಪಾಯಕಾರಿ. ಇಲ್ಲಿನ ಮುಸ್ಲಿಮರು (Indian Muslims) ಅದರಿಂದ ಹೊರ ಬರಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ (CT Ravi) ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಘಜನಿ, ಕಿಲ್ಜಿ, ಘೋರಿ, ಔರಂಗಜೇಬ್, ಮೊಘಲರು, ಟಿಪ್ಪು ಕಾಲದಲ್ಲಿ 42 ಸಾವಿರ ದೇಗುಲ ಧ್ವಂಸ ಮಾಡಲಾಗಿತ್ತು. ಭಾರತೀಯ ಮುಸಲ್ಮಾನರು ಆ ದಾಳಿಕೋರರ ಜೊತೆ ತಮ್ಮ ಅಸ್ಮಿತೆಯನ್ನ ಗುರುತಿಸಿಕೊಳ್ಳುವುದಿಲ್ಲ. ಎಲ್ಲಾ ಮುಸ್ಲಿಮರನ್ನು ಒಂದೇ ತಕ್ಕಡಿಯಲ್ಲಿಟ್ಟು ನಾವು ನೋಡುವುದಿಲ್ಲ. ಇಲ್ಲಿನ ಮುಸ್ಲಿಮರಿಗೆ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಆದರ್ಶವಾಗಬೇಕು. ಆಗ ನಮ್ಮಲ್ಲಿ ಸಹೋದರತ್ವ ಭಾವನೆ ಗಟ್ಟಿಯಾಗುತ್ತದೆ ಎಂದು ಹೇಳಿದ್ದಾರೆ.

ಭಾರತೀಯ ಮುಸಲ್ಮಾನರು ಆ ದಾಳಿಕೋರರ ಜೊತೆ ತಮ್ಮ ಅಸ್ಮಿತೆಯನ್ನು ಗುರುತಿಸಿಕೊಳ್ಳುವುದಿಲ್ಲ. ಇವರು ಭಾರತೀಯ ಸನಾತನ ಪರಂಪರೆಗೆ ವಿಶ್ವಾಸವಿಟ್ಟು ಭಾರತದಲ್ಲಿ ಉಳಿದುಕೊಂಡಿದ್ದಾರೆ. ಅವರಿಗೂ ಮನಃಪರಿವರ್ತನೆಯ ದಿನ ಬರಬಹುದು. ಮಂದಿರ ಕೆಡವಿ ಕಟ್ಟಿದ ಮಸೀದಿಯಲ್ಲಿ ನಮಾಜ್ ಮಾಡಿದ್ರೆ ಅದು ಹರಾಮ್ ಆಗುತ್ತೆ ಅನ್ನಿಸಬಹುದು. ಹರಾಮ್ ಆಗುತ್ತೆ ಅನ್ನಿಸಿದ ದಿನ ಅವರು ಉದಾರತೆಯನ್ನು ಪ್ರದರ್ಶನ ಮಾಡಬಹುದು ಎಂದು ರವಿ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಿಟಿ ರವಿ, ಹಿರಿಯರು ಮತ್ತು ಸ್ಥಾನಕ್ಕೆ ಕೊಡಬೇಕಾದ ಗೌರವ ಕೊಡಲೇಬೇಕು. ಹೆಗಡೆಯವರ ಕಾರ್ಯಶೈಲಿ ಭಿನ್ನವಿದೆ. ಹಾಗಂತ ಮತ್ತೊಬ್ಬರನ್ನ ನೋಯಿಸಬಾರದು. ಅವರ ಹೇಳಿಕೆಯನ್ನ ನಾವು ಸಮರ್ಥಿಸಿಕೊಳ್ಳುವುದಿಲ್ಲ. ರಾಮ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವನು. ಅವರು ಏಕವಚನದಲ್ಲಿ ಮಾತನಾಡಿರುವುದ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸ್ಕೃತಿ, ಸಭ್ಯತೆ ಅಂದ್ರೆ ಏನು ಅಂತ ಸಿದ್ಧರಾಮಯ್ಯಗೆ ನಾನು ಪಾಠ ಮಾಡುತ್ತೇನೆ: ಅನಂತ ಕುಮಾರ್​ ಹೆಗಡೆ

ಯಾರೇ ಆದರೂ ಏಕವಚನದಲ್ಲಿ ಮಾತನಾಡುವುದು, ಅಗೌರವದಿಂದ ನಡೆದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಮಾತನಾಡುವ ಭರದಲ್ಲಿ ಶಿವರಾಜ್ ತಂಗಡಗಿಯವರು ನಾಯಿಗೆ ಹೋಲಿಸಿರುವುದು ಕೂಡ ತಪ್ಪೇ. ಪ್ರಧಾನಿ ಮೋದಿ ಅವರ ಬಗ್ಗೆ ಸಿಎಂ ಸಿದ್ದರಾಮಯ್ಯ ಈ ಹಿಂದೆ ಏಕವಚನದಲ್ಲಿ ಮಾತನಾಡಿದ್ದು ಕೂಡ ಸರಿಯಲ್ಲ. ‘ಅವ್ನು ಹೋಗಿದ್ನ ಸರ್ಜಿಕಲ್ ಸ್ಟ್ರೈಕ್ ಮಾಡೋಕೆ’ ಎಂದು ಪ್ರಧಾನಿಯನ್ನು ಸಿದ್ದರಾಮಯ್ಯನವರು ಕೇಳಿದ್ದರು. ಹಿರಿಯರಾಗಿ, ಹೇಳುವಂಥವರಾಗಿ ಅವರೇ ಪ್ರಧಾನಿಗೆ ಏಕವಚನದಲ್ಲಿ ನಿಂದಿಸುವುದು ಎಷ್ಟು ಸರಿ. ಹಿರಿಯರು ದೊಡ್ಡತನದಲ್ಲಿ ನಡೆದುಕೊಳ್ಳಬೇಕು, ಆಗ ಉಳಿದವರಿಗೆ ಮಾದರಿಯಾಗಲಿದೆ ಎಂದು ರವಿ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?