AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರಿಗೆ ಸಿಟಿ ರವಿ ದೂರು: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ, ಸೂಕ್ತ ಭದ್ರತೆಗೆ ಮನವಿ

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ರಾಜ್ಯಪಾಲರಿಗೆ 8 ಪುಟಗಳ ದೂರು ಸಲ್ಲಿಸಿದ್ದಾರೆ. ಪೊಲೀಸ್ ದೌರ್ಜನ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೇಕ್ ಎನ್‌ಕೌಂಟರ್ ಸಂಚು ಮತ್ತು ಅಕ್ರಮ ಬಂಧನದ ಬಗ್ಗೆಯೂ ದೂರಿನಲ್ಲಿ ವಿವರಿಸಲಾಗಿದೆ. ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ತನಗೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯಪಾಲರಿಗೆ ಸಿಟಿ ರವಿ ದೂರು: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ, ಸೂಕ್ತ ಭದ್ರತೆಗೆ ಮನವಿ
ರಾಜ್ಯಪಾಲರಿಗೆ ಸಿಟಿ ರವಿ ದೂರು: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ, ಸೂಕ್ತ ಭದ್ರತೆಗೆ ಮನವಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 30, 2024 | 4:29 PM

ಬೆಂಗಳೂರು, ಡಿಸೆಂಬರ್​ 30: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ (CT Ravi) ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳ ತಲುಪಿದೆ. ಇಂದು ಗರ್ವನರ್ ಅವರನ್ನು ಭೇಟಿ ಮಾಡಿದ ಸಿಟಿ ರವಿ, ಅಂದು ಪರಿಷತ್​ನಲ್ಲಿ ಏನೆಲ್ಲಾ ಆಯ್ತು, ತಮ್ಮ ಬಂಧನದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ಇಂಚಿಂಚು ಮಾಹಿತಿ ನೀಡಿ ಬಂದಿದ್ದಾರೆ ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ್ದು, ತಮ್ಮ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ಡಿಜಿ & ಐಜಿಪಿಯಿಂದ ಸ್ಪಷ್ಟನೆ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸಿ.ಟಿ.ರವಿ ದೂರಿನಲ್ಲೇನಿದೆ?

ಡಿ.19ರಂದು ಇಡೀ ರಾತ್ರಿ ನಡೆದ ಪೊಲೀಸರ ಅಮಾನವೀಯ ವರ್ತನೆ ಮಾಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಯಡಾ ಮಾರ್ಟಿನ್​, ಎಸ್‌ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ರಾಜಭವನದ ಅಂಗಳಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಟಿ ರವಿ ಪ್ರಕರಣದ ಚೆಂಡು!

ದೂರಿನಲ್ಲಿ ಫೇಕ್ ಎನ್‌ಕೌಂಟರ್ ವಿಚಾರ ಪ್ರಸ್ತಾಪಿಸಿರುವ ಸಿ.ಟಿ.ರವಿ, ಡಿಕೆ ಶಿವಕುಮಾರ್​ ಸೂಚನೆ ಮೇರೆಗೆ ಪೊಲೀಸರು ಸುಪಾರಿ ಕಿಲ್ಲರ್ ರೀತಿ ವರ್ತಿಸಿದರು. ನಿಗೂಢ ಸ್ಥಳಗಳಿಗೆ ಕರೆದೊಯ್ದು ಫೇಕ್ ಎನ್‌ಕೌಂಟರ್ ಮಾಡಲು ಸಂಚು ರೂಪಿಸಿದ್ದರು. ಪೊಲೀಸರು ಸುವರ್ಣಸೌಧದೊಳಗೆ ಪ್ರವೇಶ ಮಾಡಿ ಬಂಧಿಸಿದ್ದು, ಅಕ್ರಮ ನನ್ನ ಹಕ್ಕು ಚ್ಯುತಿ ಆಗಿದೆ ಎಂದಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕೊಲೆ ಮಾಡಿವುದಾಗಿ ಧಮ್ಕಿ ಹಾಕಿದ್ದು, ಅವರ ಬಂಟರಿಂದಲು ಕೂಡ ಫೇಕ್ ಎನ್‌ಕೌಂಟರ್ ಸಂಚು ಆರೋಪ ಮಾಡಿದ್ದಾರೆ. ಸದನದ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಐಡಿಗಿಲ್ಲ. ಘಟನೆ ನಡೆದ ಸ್ಥಳ ಸಿಐಡಿ ವ್ಯಾಪ್ತಿಗೂ ಬರುವುದಿಲ್ಲ. ನನ್ನ ಬಂಧನ ಅಕ್ರಮ, ಕಾನೂನು ವಿರೋಧಿ ಅಂತ ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಸುದೀರ್ಘ ದೂರಿನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಹೆಬ್ಬಾಳ್ಕರ್-ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ, ಆದರೆ ಎಲ್ಲರೂ ತಮ್ಮ ನಿಲುವುಗಳಿಗೆ ಬದ್ಧರಾಗಿದ್ದಾರೆ: ಬಸವರಾಜ ಹೊರಟ್ಟಿ, ಸಭಾಪತಿ

ಇನ್ನು ಗವರ್ನರ್ ಭೇಟಿ ಬಳಿಕ ಮಾತಾಡಿದ್ದ ಸಿ.ಟಿ.ರವಿ, ನನ್ನ ಕಬ್ಬಿನ ಗದ್ದೆ, ಕ್ರಷರ್​ಗೆ ಕರ್ಕೊಂಡು ಹೋಗಿ ಎನ್​ಕೌಂಟರ್ ಮಾಡಲು ಯತ್ನಿಸಿದ್ದರು. ಒಂದೋ ಹತ್ಯೆ ಮಾಡಬೇಕು, ಇಲ್ಲವೇ ಆತ್ಮಹತ್ಯೆಗೆ ಶರಣಾಗಬೇಕು ಅನ್ನುವಂತೆ ಕಾಟ ಕೊಟ್ಟರು ಅಂತಾ ಆರೋಪಿಸಿದ್ದಾರೆ. ಇತ್ತ ಎಂಎಲ್​ಸಿ ರವಿಕುಮಾರ್ ಸಹಾ ಆಕ್ರೋಶ ಹೊರ ಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್