AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ಗಲಭೆಗಳಿಂದ ನಲುಗಿದ್ದ ಬಂಟ್ವಾಳದ ಚಿತ್ರಣ ನಾಲ್ಕೂವರೆ ವರ್ಷಗಳಿಂದ ಬದಲಾಗಿದೆ: ಅಣ್ಣಾ ಮಲೈ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ವಿಕಾಸ ಯಾತ್ರೆ ಕೈಗೊಂಡಿದ್ದು, ಇಂದು ಯಾತ್ರೆಯ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾ ಮಲೈ ಪಾಲ್ಗೊಂಡಿದ್ದರು.

ಕೋಮು ಗಲಭೆಗಳಿಂದ ನಲುಗಿದ್ದ ಬಂಟ್ವಾಳದ ಚಿತ್ರಣ ನಾಲ್ಕೂವರೆ ವರ್ಷಗಳಿಂದ ಬದಲಾಗಿದೆ: ಅಣ್ಣಾ ಮಲೈ
ಅಣ್ಣಾಮಲೈ
TV9 Web
| Edited By: |

Updated on: Jan 27, 2023 | 9:46 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶಾಸಕ ರಾಜೇಶ್ ನಾಯ್ಕ್ (MLA Rajesh Naik) ಅವರು ಗ್ರಾಮ ವಿಕಾಸ ಯಾತ್ರೆ (Grama Vikas Yatra) ಕೈಗೊಂಡಿದ್ದು, ಇಂದು ಯಾತ್ರೆಯ ಸಮಾರೋಪ ಸಮಾರಂಭ ಬಿ.ಸಿ ರೋಡ್​ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (K.Annamalai), ಈ ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ (Bantwal) ಕ್ಷೇತ್ರ ನಲುಗಿತ್ತು. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಬಂಟ್ವಾಳದ ಚಿತ್ರಣ ಬದಲಾಗಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸಂಪೂರ್ಣ ಸಾಮರಸ್ಯ ನೆಲೆಸಿದೆ ಎಂದರು.

ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ, ಕಾಂಗ್ರೆಸ್ ಹೇಳಿದ ಸುಳ್ಳುಗಳು ಮತ್ತೆ ರಿಪೀಟ್ ಆಗುತ್ತಿದೆ. ರೇಷನ್ ಕಾರ್ಡ್​ಗೆ ಪ್ರತಿ ತಿಂಗಳು 1000 ರೂಪಾಯಿ ನೀಡುವುದಾಗಿ ಹೇಳಿದ್ದರು. ಘೋಷಣೆ ಮಾಡಿ 21 ತಿಂಗಳಾಯಿತು, ಇದುವರೆಗೆ ಯಾರೊಬ್ಬರಿಗೂ 1 ರೂಪಾಯಿ ಕೊಟ್ಟಿಲ್ಲ. ಕೇವಲ ಸುಳ್ಳು ಹೇಳಿಕೊಂಡು ಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದಿದೆ. ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಗುಡುಗಿದರು.

ಇದನ್ನೂ ಓದಿ: BJP TV Channel: ತಮಿಳುನಾಡಿನಲ್ಲಿ ಟಿವಿ ಚಾನೆಲ್ ತೆರೆಯಲಿರುವ ಬಿಜೆಪಿ: ಉಸ್ತುವಾರಿ ಅಣ್ಣಾಮಲೈ ಹೆಗಲಿಗೆ

ಪ್ರಿಯಾಂಕಾ ಗಾಂಧಿ ಅವರು ಬಂದು ಪ್ರತಿ ಮನೆಯ ಮಹಿಳೆಗೆ 2000 ಸಾವಿರ ಕೊಡುತ್ತೇವೆ ಅಂತ ಹೇಳುತಿದ್ದಾರೆ‌. ಕರ್ನಾಟಕದ ಜನ ಕಾಂಗ್ರೆಸ್​ನ ಸುಳ್ಳು ಭರವಸೆಗಳನ್ನ ನಂಬಬೇಡಿ. ಸುಳ್ಳ ಭರವಸೆಗಳ ಬಗ್ಗೆ ಜಾಗರೂಕರಾಗಿರಬೇಕು. ಕಾಂಗ್ರೆಸ್​ ಹೈಕಮಾಂಡ್​ಗೆ ಕರ್ನಾಟಕ ಎಂಟಿಎಂ ಇದ್ದ ಹಾಗೆ. ಅಧಿಕಾರಕ್ಕೆ ಬಂದು ಎಟಿಎಂ ಬಳಸಿಕೊಳ್ಳಲು ಪ್ಲ್ಯಾನ್ ಮಾಡಿದೆ. ಲೋಕಸಭಾ ಚುನಾವಣೆಗೆ ಎಟಿಎಂ ಬಳಸಿಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು ಎಂದರು.

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕರು ತಮ್ಮ ಕ್ಷೇತ್ರ ಸುತ್ತಾಟದಲ್ಲಿ ಬ್ಯುಸಿಯಾಗಿ ಸಾಧನೆಗಳನ್ನು ಜನರತ್ತ ಕೊಂಡೊಯ್ಯುತ್ತಿದ್ದಾರೆ. ಮಂತ್ರಿಗಳು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಅದರಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ತಮ್ಮ ಸಾಧನೆ ಬಗ್ಗೆ ಜನರಿಗೆ ಅರಿವು ಮೂಡಿಸಲು ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಗ್ರಾಮ ವಿಕಾಸ ಯಾತ್ರೆ ಕೈಗೊಂಡಿದ್ದರು. ಜನವರಿ 14ರಿಂದ ಆರಂಭಗೊಂಡಿದ್ದ ಈ ಯಾತ್ರೆ ಇಂದು ಬಿ.ಸಿ.ರೋಡ್​ನಲ್ಲಿ ಸಮಾರೋಪಗೊಂಡಿದೆ. ಈ ಕಾರ್ಯಕ್ರಮದ ಮೂಲಕ ಶಾಸಕರು ಪ್ರತಿಯೊಂದು ಗ್ರಾಮಗಳಿಗೆ ಯಾತ್ರೆ ಕೈಗೊಂಡು ಸಾಧನೆಗಳನ್ನು ಜನರ ಮುಂದಿಟ್ಟಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ