AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲೇ ತುಂಬಿ ತುಳುಕುತ್ತಿದ್ದಾರೆ ಲಿಂಗಾಯತ ಅಧಿಕಾರಿಗಳು: ಪಟ್ಟಿ ವೈರಲ್

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ರಾಜ್ಯ ರಾಜಕಾರಣದಲ್ಲಿ ಲಿಂಗಾಯತ ಅಧಿಕಾರಿಗಳು ಕಿಡಿ ಹೊತ್ತಿಸಿದ್ದಾರೆ. ಇದು ಕಾಂಗ್ರೆಸ್​ನಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಈ ಬಗ್ಗೆ ಕೆಲವರು ವಿರೋಧಿಸಿದ್ದರೆ, ಇನ್ನೂ ಕೆಲವರು ಶಾಮನೂರು ಶಿವಕಂರಪ್ಪ ಪರ ವ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನು ಇದರ ಮಧ್ಯೆ ದಾವಣಗೆರೆಯಲ್ಲಿರುವ ಲಿಂಗಾಯತ ಅಧಿಕಾರಿ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಶಮನೂರು ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ, ದಾವಣೆರೆಯ ಯಾವೆಲ್ಲ ಇಲಾಖೆಗಳಲ್ಲಿ ಲಿಂಗಾಯತ ಅಧಿಕಾರಿಗಳು ಇದ್ದಾರೆ ಎನ್ನುವ ವಿವರ ಇಲ್ಲಿದೆ.

ದಾವಣಗೆರೆಯಲ್ಲೇ ತುಂಬಿ ತುಳುಕುತ್ತಿದ್ದಾರೆ ಲಿಂಗಾಯತ ಅಧಿಕಾರಿಗಳು: ಪಟ್ಟಿ ವೈರಲ್
ಶಾಮನೂರು ಶಿವಶಂಕರಪ್ಪ
TV9 Web
| Edited By: |

Updated on:Oct 05, 2023 | 2:49 PM

Share

ಬೆಂಗಳೂರು, (ಅಕ್ಟೋಬರ್ 05): ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೇರಿ ಕೇವಲ ನಾಲ್ಕು ತಿಂಗಳಾಗಿವೆ. ಅಷ್ಟರಲ್ಲೇ ಕೈಯೊಳಗೆ ಅಸಮಾಧಾನದ ಬೆಂಕಿ ಧಗಧಗಿಸುತ್ತಿದೆ. ಬಿ.ಕೆ.ಹರಿಪ್ರಸಾದ್, ಬಸವರಾಜ ರಾಯರೆಡ್ಡಿ ಸರ್ಕಾರದ ವಿರುದ್ಧ ಬಹಿರಂಗವಾಗಿ ತೊಡೆ ತಟ್ಟಿದ್ರು. ಇದರ ಬೆನ್ನಲ್ಲೇ ಈಗ ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರದ ಮಟ್ಟದಲ್ಲಿ ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಶಾಮನೂರು ಶಿವಶಂಕರಪ್ಪಸ್ವಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ಇದು ಇದೀಗ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್​ಎಬ್ಬಿಸಿದೆ. ಇನ್ನು ಇದಕ್ಕೆ ಸ್ವಪಕ್ಷದ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಶಾಮನೂರು ಪರ ಬ್ಯಾಟಿಂಗ್ ಮಾಡಿದ್ದಾರೆ. ಇವೆಲ್ಲದರ ಮಧ್ಯೆ  ಶಾಮನೂರು ಶಿವಶಂಕರಪ್ಪ ತವರು ಜಿಲ್ಲೆ ದಾವಣಗೆರೆಯಲ್ಲಿ ಲಿಂಗಾಯತ ಅಧಿಕಾರಿಗಳ ಪಟ್ಟಿ‌ ಬಿಡುಗಡೆ ಮಾಡಲಾಗಿದ್ದು, ಇದೀಗ ಇದು ಎಲ್ಲೆಡೆ ವೈರಲ್ ಆಗಿದೆ.

ದಾವಣಗೆರೆಯಲ್ಲಿ ಲಿಂಗಾಯತ ಅಧಿಕಾರಿಗಳದ್ದೇ ದರ್ಬಾರ್

ಹೌದು…ಲಿಂಗಾಯತ ಅಧಿಕಾರಿಗಳಿಗೆ ಮನ್ನಣೆ ನೀಡುತ್ತಿಲ್ಲ. ಆಯಾಕಟ್ಟಿನ ಪ್ರಮುಖ ಹುದ್ದೆಗಳಿಗೆ ಬೇರೆ-ಬೇರೆ ಸಮುದಾಯದ ಅಧಿಕಾರಿಗಳನ್ನೇ ಕೂರಿಸಲಾಗಿದೆ. ಇದರಿಂದಿಗೆ ಲಿಂಗಾಯತ ಅಧಿಕಾರಿಗಳನ್ನು ಮೂಲೆ ಗುಂಪು ಮಾಡಲಾಗುತ್ತಿದೆ ಎಂದು ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಂಯ್ಯನವರ ಅಭಿಮಾನಿಗಳು ಶಮನೂರು ಜಿಲ್ಲೆಯಲ್ಲಿ ಎಷ್ಟು ಲಿಂಗಾಯತ ಅಧಿಕಾರಿಗಳು ಯಾವೆಲ್ಲ ಹುದ್ದೆಯಲ್ಲಿ ಇದ್ದಾರೆ ಎನ್ನುವ ಪಟ್ಟಿ ಬಿಡುಗಡೆ ಮಾಡಿ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ: ಈ ಸಂಬಂಧ ನಾನು ನೀಡಿರುವ ಹೇಳಿಕೆಗೆ ಬದ್ಧ: ಶಾಸಕ ಶಾಮನೂರು

ಈ ಪಟ್ಟಿಯನ್ನು ನೋಡಿದರೆ, ಶಾಸಕ ಶಾಮನೂರು ಶಿವಶಂಕರಪ್ಪ ತವರು ಜಿಲ್ಲೆ ದಾವಣಗೆರೆಯಲ್ಲಿ ಲಿಂಗಾಯತ ಅಧಿಕಾರಿಗಳದ್ದೇ ದರ್ಬಾರ್. ಎಸ್ಪಿ, ಜಿಪಂ‌ ಸಿಇಓ ಸೇರಿ ಜಿಲ್ಲೆಯ 28 ಇಲಾಖೆಯ ಮುಖ್ಯಸ್ಥರು ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಗಳೇ ಇದ್ದಾರೆ, ಬಿಜೆಪಿ ಇರಲಿ ಕಾಂಗ್ರೆಸ್ ಇರಲಿ ಕೆಲ ಲಿಂಗಾಯತ ಅಧಿಕಾರಿಗಳು ಆಯಾ ಇಲಾಖೆಗಳಲ್ಲಿ ಖಾಯಂ ಠಿಕಾಣಿ ಹೂಡಿದ್ದಾರೆ. ಲಿಂಗಾಯತರ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಶಾಮನೂರು ಶಿವಶಂಕರಪ್ಪ ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಲು ಸಹ ನಿರಾಕರಿಸಿದ್ದಾರೆ. ಇನ್ನು ದಾವಣಗೆರೆಯಲ್ಲಿ ಯಾವೆಲ್ಲ ಇಲಾಖೆಯಲ್ಲಿ ಲಿಂಗಾಯತ ಅಧಿಕಾರಿಗಳು ಇದ್ದಾರೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.

ದಾವಣಗೆರೆ ಜಿಲ್ಲೆಯೊಂದರಲ್ಲಿ ಇರುವ ಲಿಂಗಾಯತ ಅಧಿಕಾರಿಗಳ ಪಟ್ಟಿ

  • 1)CEO – ಸುರೇಶ ಹಿಟ್ನಾಳ್(IAS)
  • 2) SP – ಉಮಾ ಪ್ರಶಾಂತ್( IPS)
  • 3) SMART City MD – ವೀರೇಶ್ ಕುಮಾರ್(KAS Jr.Sc)
  • 4) DHUDA Commissioner –  ಕೋಟೂರು ಬಸವನಗೌಡ(KAS Jr.Sc)
  • 5) DD Food – ಸಿದ್ರಾಮ್ ಮಾರಿಹಾಳ
  • 6) Tahsildar –  ಅಶ್ವಥ್
  • 7) DO BCM –  ಗಾಯತ್ರಿ,
  • 8) DO Minority – ಮಹಾಂತೇಶ ಮಠದ
  • 9) DHO – ಡಾ.ಶಣ್ಮುಖಪ್ಪ
  • 10) District Surgeon ಡಾ.ನಾಗೇಂದ್ರಪ್ಪ
  • 11) RCHO –  ಡಾ.ರೇಣುಕಾರಾಧ್ಯ
  • 12) ಶಿವಣ್ಣ
  • 13) EE PWD ನರೇಂದ್ರ ಬಾಬು
  • 14) EE MI – ಮಂಜುನಾಥ
  • 15) EE KRIDL – ಸುನೀಲ್
  • 16) District Skill Development Officer – ಬಸವನಗೌಡ
  • 17) DD Veterinory – ಚಂದ್ರಶೇಖರ ಸುಂಕದ್
  • 18) DD Horticulture –  ರಾಘವೇಂದ್ರ
  • 19) JD Agriculture –  ಶ್ರೀನಿವಾಸ ಚಿಂತಾಲ್
  • 20) DD Agriculture –  ತಿಪ್ಪೇಸ್ವಾಮಿ
  • 21) PD Nirmithi – ರವಿ
  • 22) SLAO Railway-  ಉದಯ ಕುಂಬಾರ
  • 23) EE BESCOM – ಶರಣ ಪಾಟೀಲ 24) JD Industries-
  • 25) DD Textile – ಶಿವು ಕುಂಬಾರ
  • 26) District Family Welfare Officer(FWO)  Dr.ರುದ್ರಸ್ವಾಮಿ
  • 27) District Leprosy Officer- ಡಾ.ಮಂಜುನಾಥ ಪಾಟೀಲ
  • 28)Disignated Officer for food safety ( DO food)  ಡಾ.ನಾಗರಾಜ.
  • 29) Medical superintendent (ESI hopital davangere)- ಡಾ ಬಸನಗೌಡ.

Published On - 2:45 pm, Thu, 5 October 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ