ಬೆಂಗಳೂರು, (ಅಕ್ಟೋಬರ್ 05): ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೇರಿ ಕೇವಲ ನಾಲ್ಕು ತಿಂಗಳಾಗಿವೆ. ಅಷ್ಟರಲ್ಲೇ ಕೈಯೊಳಗೆ ಅಸಮಾಧಾನದ ಬೆಂಕಿ ಧಗಧಗಿಸುತ್ತಿದೆ. ಬಿ.ಕೆ.ಹರಿಪ್ರಸಾದ್, ಬಸವರಾಜ ರಾಯರೆಡ್ಡಿ ಸರ್ಕಾರದ ವಿರುದ್ಧ ಬಹಿರಂಗವಾಗಿ ತೊಡೆ ತಟ್ಟಿದ್ರು. ಇದರ ಬೆನ್ನಲ್ಲೇ ಈಗ ಕಾಂಗ್ರೆಸ್ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರದ ಮಟ್ಟದಲ್ಲಿ ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಶಾಮನೂರು ಶಿವಶಂಕರಪ್ಪಸ್ವಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ಇದು ಇದೀಗ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ಎಬ್ಬಿಸಿದೆ. ಇನ್ನು ಇದಕ್ಕೆ ಸ್ವಪಕ್ಷದ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಶಾಮನೂರು ಪರ ಬ್ಯಾಟಿಂಗ್ ಮಾಡಿದ್ದಾರೆ. ಇವೆಲ್ಲದರ ಮಧ್ಯೆ ಶಾಮನೂರು ಶಿವಶಂಕರಪ್ಪ ತವರು ಜಿಲ್ಲೆ ದಾವಣಗೆರೆಯಲ್ಲಿ ಲಿಂಗಾಯತ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಇದೀಗ ಇದು ಎಲ್ಲೆಡೆ ವೈರಲ್ ಆಗಿದೆ.
ಹೌದು…ಲಿಂಗಾಯತ ಅಧಿಕಾರಿಗಳಿಗೆ ಮನ್ನಣೆ ನೀಡುತ್ತಿಲ್ಲ. ಆಯಾಕಟ್ಟಿನ ಪ್ರಮುಖ ಹುದ್ದೆಗಳಿಗೆ ಬೇರೆ-ಬೇರೆ ಸಮುದಾಯದ ಅಧಿಕಾರಿಗಳನ್ನೇ ಕೂರಿಸಲಾಗಿದೆ. ಇದರಿಂದಿಗೆ ಲಿಂಗಾಯತ ಅಧಿಕಾರಿಗಳನ್ನು ಮೂಲೆ ಗುಂಪು ಮಾಡಲಾಗುತ್ತಿದೆ ಎಂದು ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಂಯ್ಯನವರ ಅಭಿಮಾನಿಗಳು ಶಮನೂರು ಜಿಲ್ಲೆಯಲ್ಲಿ ಎಷ್ಟು ಲಿಂಗಾಯತ ಅಧಿಕಾರಿಗಳು ಯಾವೆಲ್ಲ ಹುದ್ದೆಯಲ್ಲಿ ಇದ್ದಾರೆ ಎನ್ನುವ ಪಟ್ಟಿ ಬಿಡುಗಡೆ ಮಾಡಿ ಟಾಂಗ್ ಕೊಟ್ಟಿದ್ದಾರೆ.
ಈ ಪಟ್ಟಿಯನ್ನು ನೋಡಿದರೆ, ಶಾಸಕ ಶಾಮನೂರು ಶಿವಶಂಕರಪ್ಪ ತವರು ಜಿಲ್ಲೆ ದಾವಣಗೆರೆಯಲ್ಲಿ ಲಿಂಗಾಯತ ಅಧಿಕಾರಿಗಳದ್ದೇ ದರ್ಬಾರ್. ಎಸ್ಪಿ, ಜಿಪಂ ಸಿಇಓ ಸೇರಿ ಜಿಲ್ಲೆಯ 28 ಇಲಾಖೆಯ ಮುಖ್ಯಸ್ಥರು ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಗಳೇ ಇದ್ದಾರೆ, ಬಿಜೆಪಿ ಇರಲಿ ಕಾಂಗ್ರೆಸ್ ಇರಲಿ ಕೆಲ ಲಿಂಗಾಯತ ಅಧಿಕಾರಿಗಳು ಆಯಾ ಇಲಾಖೆಗಳಲ್ಲಿ ಖಾಯಂ ಠಿಕಾಣಿ ಹೂಡಿದ್ದಾರೆ. ಲಿಂಗಾಯತರ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಶಾಮನೂರು ಶಿವಶಂಕರಪ್ಪ ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಲು ಸಹ ನಿರಾಕರಿಸಿದ್ದಾರೆ. ಇನ್ನು ದಾವಣಗೆರೆಯಲ್ಲಿ ಯಾವೆಲ್ಲ ಇಲಾಖೆಯಲ್ಲಿ ಲಿಂಗಾಯತ ಅಧಿಕಾರಿಗಳು ಇದ್ದಾರೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.
Published On - 2:45 pm, Thu, 5 October 23