AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್​ಗೆ ಬಂಡಾಯದ ಬಿಸಿ; ಯಡಿಯೂರಪ್ಪ ಭೇಟಿಯಾದ ಮಾಜಿ ಶಾಸಕರ ನಿಯೋಗ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಲಾಭಿ ಆರಂಭವಾಗಿದೆ. ದಾವಣಗೆರೆ ಸಂಸದರ ವಿರುದ್ಧ ಬಂಡಾಯವೆದ್ದಿರುವ ಮಾಜಿ ಶಾಸಕರು ಹಾಗೂ ಸ್ಥಳೀಯ ನಾಯಕರು ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ಬಾರಿ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.

ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್​ಗೆ ಬಂಡಾಯದ ಬಿಸಿ; ಯಡಿಯೂರಪ್ಪ ಭೇಟಿಯಾದ ಮಾಜಿ ಶಾಸಕರ ನಿಯೋಗ
ಜಿಎಂ ಸಿದ್ದೇಶ್ವರ್ ಮತ್ತು ಎಸ್​ಎ ರವೀಂದ್ರನಾಥ್
ಕಿರಣ್​ ಹನಿಯಡ್ಕ
| Updated By: Rakesh Nayak Manchi|

Updated on: Jan 26, 2024 | 3:03 PM

Share

ಬೆಂಗಳೂರು, ಜ.26: ದಾವಣಗೆರೆ ಜಿಲ್ಲೆಯಲ್ಲಿ ಹಾಲಿ ಸಂಸದರಾಗಿರುವ ಜಿಎಂ ಸಿದ್ದೇಶ್ವರ್ (GM Siddeshwar) ವಿರುದ್ಧ ಮಾಜಿ ಶಾಸಕರು ಹಾಗೂ ಸ್ಥಳೀಯ ನಾಯಕರು ಬಂಡಾಯವೆದಿದ್ದಾರೆ. ಸಿದ್ದೇಶ್ವರ್ ಅವರಿಗೆ ಟಿಕೆಟ್ ನೀಡದಂತೆ ಹಾಗೂ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಮಾಜಿ ಶಾಸಕರ ನಿಯೋಗ ಬಿಎಸ್ ಯಡಿಯೂರಪ್ಪ (BS Yediyurappa) ಅವರನ್ನು ಭೇಟಿಯಾಗಿ ಮನವಿ ಮಾಡಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸ ಪವರ್​ ಸೆಂಟರ್​ ಆಗಿದೆ. ಟಿಕೆಟ್ ವಿಚಾರವಾಗಿ ನಾಯಕರು ಯಡಿಯೂರಪ್ಪರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಅದರಂತೆ ದಾವಣಗೆರೆ ಜಿಲ್ಲೆಯ ಬಿಜೆಪಿ ಮುಖಂಡರು ಕೂಡ ಆಗಮಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಮಾಜಿ ಸಚಿವ ರೇಣುಕಾಚಾರ್ಯ, ಎಸ್​ಎ ರವೀಂದ್ರನಾಥ್, ಪರಿಷತ್​ ಮಾಜಿ ಸದಸ್ಯ ಶಿವಯೋಗಿ ಸ್ವಾಮಿ, ಗುರುಸಿದ್ದನಗೌಡ, ಕರುಣಾಕರ, ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಸೇರಿದಂತೆ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಆಗಮಿಸಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇದನ್ನೂ ಓದಿ: ಬಿಜೆಪಿಯಿಂದಲೇ ಸ್ಪರ್ಧೆಗೆ ತೀರ್ಮಾನ, ಮಂಡ್ಯ ಬಿಟ್ಟು ಬೇರೆ ಕಡೆ ಟಿಕೆಟ್‌ ನೀಡಿದ್ರೆ ರಾಜಕೀಯವೇ ಬೇಡವೆಂದ ಸುಮಲತಾ

ಸಂಸದ ಜಿ.ಎಂ.ಸಿದ್ದೇಶ್ವರ್ ಚಿತ್ರದುರ್ಗದವರಾಗಿದ್ದು, ಅವರಿಗೆ ದಾವಣಗೆರೆ ಕ್ಷೇತ್ರದ ಟಿಕೆಟ್ ನೀಡದಂತೆ ಒತ್ತಾಯಿಸದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್ ಕೊಡುವಂತೆ ಮನವಿ ಮಾಡಿದ ನಾಯಕರು, ಸರ್ವೆ ಮಾಡಿಸಿ ಯಾರ ಹೆಸರು ಬರುತ್ತದೋ ಅವರಿಗೆ ಟಿಕೆಟ್ ಕೊಡಿ ಎಂದು ಮನವಿ ಮಾಡಿದ್ದಾರೆ.

ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಮಾಜಿ ಶಾಸಕ ಎಸ್​ಎ ರವೀಂದ್ರನಾಥ್, ಸ್ಥಳೀಯರಿಗೆ ಬಿಜೆಪಿ ಟಿಕೆಟ್​ ಕೊಡುವಂತೆ ನಾವು ಮನವಿ ಮಾಡಿದ್ದೇವೆ. ಕೊಟ್ರೇಶ್, ರವಿ, ಶಿವಯೋಗಿ ಸ್ವಾಮಿ, ರೇಣುಕಾಚಾರ್ಯ ಆಕಾಂಕ್ಷಿಗಳಾಗಿದ್ದಾರೆ. ನಾನು ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿ ಅಲ್ಲ. ಯಾರೇ ನಿಂತರೂ ಗೆಲ್ಲುತ್ತಾರೆ, ಸಿದ್ದೇಶ್ವರ್​ಗೆ ಟಿಕೆಟ್ ನೀಡದಂತೆ ಮನವಿ ಮಾಡಲಾಗಿದೆ ಎಂದರು.

ದಾವಣಗೆರೆ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ದಾವಣಗೆರೆಯಲ್ಲಿ ಚುನಾವಣೆ ಪೂರ್ವ ಪಾರದರ್ಶಕ ಸಮೀಕ್ಷೆ ಮಾಡಲಿ. ನನಗೆ ಟಿಕೆಟ್​​ ಕೋಡಿ ಅಂದಿಲ್ಲ, ಸಮೀಕ್ಷೆ ಮಾಡಿ ಯಾರಿಗಾದರೂ ಕೊಡಲಿ. ಯಡಿಯೂರಪ್ಪ ಬಳಿ ಕಾರ್ಯಕರ್ತರ ಭಾವನೆಯನ್ನು ತಿಳಿಸುತ್ತೇನೆ ಎಂದರು. ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಬಳಿಕ ಮಾಜಿ ಸಚಿವ ಕರುಣಾಕರ ರೆಡ್ಡಿ, ಯಾರಿಗೂ ಟಿಕೆಟ್ ಕೊಡಬಾರದು ಅಂತಾ ಹೇಳಿಲ್ಲ. ಸಮೀಕ್ಷೆ ಮಾಡಿ ಟಿಕೆಟ್ ಕೊಡಿ ಎಂದು ಹೇಳಿದ್ದಾಗಿ ತಿಳಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ