AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಜಮೀರ್ ಅಚ್ಚರಿಯ ನಡೆ: ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ ಜಮೀರ್, ಕುತೂಹಲ ಮೂಡಿಸಿದ ಚರ್ಚೆ!

ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದಿಂದ ಕರ್ನಾಟಕ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳು ನಡೆದಿವೆ. ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬಳಿಕ, ಸಚಿವ ಜಮೀರ್ ಅಹ್ಮದ್ ಖಾನ್ ನಸೀರ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದಾರೆ. ಈ ಭೇಟಿಗೂ ಮುನ್ನ ಸಿಎಂ ಸಿದ್ಧರಾಮಯ್ಯ ಜಮೀರ್‌ಗೆ ಹೈಕಮಾಂಡ್ ಪ್ರಶ್ನೆಗಳಿಗೆ ಉತ್ತರ ನೀಡಿ ಎಂದು ತಾಕೀತು ಮಾಡಿದ್ದರು. ಇದು ಸಮಾಧಾನ ಸಂಧಾನವೋ ಅಥವಾ ಮುಂದಿನ ಹೋರಾಟದ ಸಂಕೇತವೋ ಎಂಬ ಕುತೂಹಲ ಮೂಡಿಸಿದೆ.

ಸಚಿವ ಜಮೀರ್ ಅಚ್ಚರಿಯ ನಡೆ: ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ  ಜಮೀರ್, ಕುತೂಹಲ ಮೂಡಿಸಿದ ಚರ್ಚೆ!
ಕರ್ನಾಟಕ ರಾಜಕೀಯ ಬಿಕ್ಕಟ್ಟು
ಪ್ರಸನ್ನ ಗಾಂವ್ಕರ್​
| Edited By: |

Updated on:Apr 15, 2026 | 10:53 AM

Share

ಬೆಂಗಳೂರು, ಏ.15: ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಅವರನ್ನು ವಜಾ ಮಾಡಿದ ನಂತರ, ಸಚಿವ ಜಮೀರ್​​​ ಜತೆ ಸಿಎಂ ಸಿದ್ಧರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಈ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗರಂ ಆಗಿದ್ದರು. ಹೈಕಮಾಂಡ್​ ಕೇಳುವ ಎಲ್ಲ ಪ್ರಶ್ನೆಗೂ ನೀನೇ ಉತ್ತರ ನೀಡುಬೇಕು ಎಂದು ಹೇಳಿದ್ದರು ಎಂದು ಹೇಳಲಾಗಿದೆ. ಇದರ ಬೆನ್ನಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಂದು ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ನಸೀರ್ ಅಹ್ಮದ್ ಅವರ ಸರ್ಕಾರಿ ನಿವಾಸಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ನಸೀರ್ ಅಹ್ಮದ್ ಅವರ ವಜಾ ಬಳಿಕ ನಡೆದ ಮೊದಲ ಭೇಟಿ ಇದಾಗಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಅವರಿಗೆ “ಹೈಕಮಾಂಡ್ ದೂರುಗಳ ಬಗ್ಗೆ ನೀನೇ ಉತ್ತರ ನೀಡಬೇಕು” ಎಂದು ತಾಕೀತು ಮಾಡಿದ್ದರು. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಅವರು ಅಸಮಾಧಾನಗೊಂಡಿರುವ ನಾಯಕರನ್ನು ಭೇಟಿ ಮಾಡುತ್ತಿರುವುದು ಮಹತ್ವ ಪಡೆದಿದೆ.

ಇದನ್ನೂ ಓದಿ: ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್!: ಹೈಕಮಾಂಡ್ ನಿನ್ನ ಮೇಲೆ ಸಿಟ್ಟಾಗಿದೆ, ನೀನೇ ಸಮಜಾಯಿಷಿ ನೀಡಬೇಕು

ದಾವಣಗೆರೆಯಲ್ಲಿ ಎದ್ದಿರುವ ಬಂಡಾಯದ ಕಿಚ್ಚು ಹೈಕಮಾಂಡ್ ಮಟ್ಟಕ್ಕೆ ತಲುಪಿದ್ದು, ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ಅವರ ಅಸಮಾಧಾನವನ್ನು ಶಮನಗೊಳಿಸಲು ಜಮೀರ್ ಅಹ್ಮದ್ ಸಂಧಾನಕ್ಕೆ ಇಳಿದಿದ್ದಾರೆಯೇ ಅಥವಾ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ದಾವಣಗೆರೆ ಚುನಾವಣೆಯಲ್ಲಿ ಆಗಿರುವ ಗೊಂದಲದಿಂದ ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್​​​​​​​​​​​​​​​​​ ಮುಸ್ಲಿಂ ನಾಯಕರ ತಲೆದಂಡ ಮಾಡುತ್ತಿದೆ ಎಂದು ಹೇಳಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 am, Wed, 15 April 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ