AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಬಂಗಲೆಗೆ ಅಶೋಕ್ ಬೇಡಿಕೆ: ಇದರ ಬೆನ್ನಲ್ಲೇ 6 ತಿಂಗಳು ಬಳಿಕ ಸರ್ಕಾರಿ ನಿವಾಸಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್​​

ಡಿಕೆ ಶಿವಕುಮಾರ್ ಅವರು ಬರೋಬ್ಬರಿ ಆರು ತಿಂಗಳು ಬಳಿಕ ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ಸರ್ಕಾರಿ ನಿವಾಸಕ್ಕೆ ಕಾಲಿಟ್ಟಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಇದೇ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ಬಂಗಲೆ ಬೇಕೆಂದು ಸರ್ಕಾರಕ್ಕೆ ಪತ್ರ ಬರೆದ ಬೆನ್ನಲ್ಲೇ ಡಿಕೆ ಶಿವಕುಮಾರ್ ತಮಗೆ ಹಂಚಿಕೆಯಾಗಿರುವ ನಿವಾಸಕ್ಕೆ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಡಿಸಿಎಂ ಬಂಗಲೆಗೆ ಅಶೋಕ್  ಬೇಡಿಕೆ: ಇದರ ಬೆನ್ನಲ್ಲೇ 6 ತಿಂಗಳು ಬಳಿಕ ಸರ್ಕಾರಿ ನಿವಾಸಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್​​
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 25, 2024 | 9:21 PM

Share

ಬೆಂಗಳೂರು, (ಜನವರಿ 25) : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಬರೋಬ್ಬರಿ ಆರು ತಿಂಗಳು ಬಳಿಕ ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ಸರ್ಕಾರಿ ನಿವಾಸಕ್ಕೆ ಕಾಲಿಟ್ಟಿದ್ದಾರೆ. ಬಂಗಲೆ ನವೀಕರಣದ ಬಳಿಕ ಇಂದು ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಅಧಿಕೃತವಾಗಿ ಪ್ರವೇಶಿಸುವ ಮೊದಲೇ ಸರ್ಕಾರಿ ನಿವಾಸದಲ್ಲಿ ಕುಳಿತುಕೊಂಡು ಅಧಿಕಾರಿಗಳು ಹಾಗೂ ಶಾಸಕರ ಜತೆ ಚರ್ಚೆ ನಡೆಸಿದ್ದಾರೆ. ಇನ್ನುಇದೇ ನಿವಾಸಬೇಕೆಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಪತ್ರ ಬರೆದ ಬೆನ್ನಲ್ಲೇ ಡಿಕೆ ಶಿವಕುಮಾರ್ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.

ಈ ಹಿಂದೆ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಇದೇ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸದಲ್ಲಿ ವಾಸವಾಗಿದ್ದರು. ಇದೀಗ ಸಿದ್ದರಾಮಯ್ಯನವರು ಕಾವೇರಿ ನಿವಾಸಕ್ಕೆ ಶಿಫ್ಟ್​ ಆಗಿದ್ದರಿಂದ ಈ ಬಂಗಲೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೇಳಿ ಪಡೆದುಕೊಂಡಿದ್ದರು. ಆದ್ರೆ, ನವೀಕರಣ ಕಾರಣದಿಂದ ಅಧಿಕೃತವಾಗಿ ಮನೆಗೆ ಪ್ರವೇಶ ಮಾಡಿರಲಿಲ್ಲ.

ಇದನ್ನೂ ಓದಿ: ಸರ್ಕಾರಿ ನಿವಾಸಕ್ಕೆ ಆರ್ ಅಶೋಕ ಮನವಿ: ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ನಿವಾಸಕ್ಕೇ ಬೇಡಿಕೆ

ಇದೇ ನಿವಾಸದಲ್ಲಿದ್ದು ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಅದೃಷ್ಟವಿದೆ ಎನ್ನಲಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಸಹ ಜ್ಯೋತಿಷಿಗಳ ಸಲಹೆ ಪಡೆದುಕೊಂಡೇ ಇದೇ ನಿವಾಸ ಆಯ್ಕೆ ಮಾಡಿಕೊಂಡಿದ್ದಾರೆ. ಆದ್ರೆ, ಇದೀಗ ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಬೇಕೆಂದು ವಿರೋಧ ಪಕ್ಷದ ನಾಯಕರು ಆರ್,ಅಶೋಕ್​ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಇದರ ಜೊತೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ರೇಸ್ ವ್ಯೂ ಕಾಟೇಜ್​ನಲ್ಲಿ ನಂಬರ್ 1 ಮತ್ತು ನಂಬರ್ 3 ನಿವಾಸಕ್ಕೆ ಕೂಡಾ ಅಶೋಕ್ ಬೇಡಿಕೆ ಇಟ್ಟಿದ್ದಾರೆ. ಸದ್ಯ ರೇಸ್ ವ್ಯೂ ಕಾಟೇಜ್​​ನ ನಂಬರ್ 1 ನಿವಾಸ ಸಚಿವ ಎಂಬಿ ಪಾಟೀಲ್​​ಗೆ ಹಂಚಿಕೆಯಾಗಿದೆ. ಇನ್ನು ನಂಬರ್ 3 ನಿವಾಸ ಸಚಿವ ಪ್ರಿಯಾಂಕ್ ಖರ್ಗೆಗೆ ಹಂಚಿಕೆಯಾಗಿದೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು