ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.

ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
Follow us
| Updated By: Rakesh Nayak Manchi

Updated on:Nov 04, 2023 | 12:18 PM

ಬೆಂಗಳೂರು, ನ.4: ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (D.K.Shivakumar) ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.

ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ಈ ವೇಳೆ ನನ್ನಿಂದಲೇ ಟೇಪ್​ ಕಟ್​ ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್​ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿದ್ದರಾಮಯ್ಯ

ಈ ವೇಳೆ, ಹೌದಪ್ಪಾ ಅಧ್ಯಕ್ಷರು ಎಂದು ಡಿಕೆ ಶಿವಕುಮಾರ್​ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಈ ವೇಳೆ ಕೆ.ಎನ್​.ರಾಜಣ್ಣ ಎಲ್ಲಪ್ಪಾ ಮಿನಿಸ್ಟರ್ ಎಂದು ಕೇಳಿದಾಗ, ಏ ನಮ್ ಮಿನಿಸ್ಟರ್ ಎಲ್ಲಿದ್ದಾರೆ ನೋಡ್ರಿ ಎಂದು ಡಿ.ಕೆ. ಶಿವಕುಮಾರ್ ಕೇಳಿದರು.

ಈ ವೇಳೆ ಪರಮೇಶ್ವರ್ ಅವ​ರನ್ನ ಸಿದ್ದರಾಮಯ್ಯ ಅವರು ಹೆಗಲ ಮೇಲೆ ಕೈ ಹಾಕಿ ಮುಂದಕ್ಕೆ ಕರೆತಂದರು. ನಂತರ ಎಲ್ಲರೂ ಒಂದು ಚಪ್ಪಾಳೆ ಹೊಡೆಯಿರಿ ಎಂದು ಹೇಳಿದ ಡಿಕೆ ಶಿವಕುಮಾರ್ ಟೇಪ್ ಕತ್ತರಿಸಿ ಮೀಟಿಂಗ್ ಹಾಲ್ ಉದ್ಘಾಟಿಸಿದರು. ಈ ವೇಳೆ ಸಚಿವ ಎಂಬಿ ಪಾಟೀಲ್ ಅವರು ಡಿಕೆ ಶಿವಕುಮಾರ್ ಪಕ್ಕದಲ್ಲೇ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Sat, 4 November 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!