AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.

ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on:Nov 04, 2023 | 12:18 PM

Share

ಬೆಂಗಳೂರು, ನ.4: ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (D.K.Shivakumar) ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.

ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ಈ ವೇಳೆ ನನ್ನಿಂದಲೇ ಟೇಪ್​ ಕಟ್​ ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್​ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿದ್ದರಾಮಯ್ಯ

ಈ ವೇಳೆ, ಹೌದಪ್ಪಾ ಅಧ್ಯಕ್ಷರು ಎಂದು ಡಿಕೆ ಶಿವಕುಮಾರ್​ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಈ ವೇಳೆ ಕೆ.ಎನ್​.ರಾಜಣ್ಣ ಎಲ್ಲಪ್ಪಾ ಮಿನಿಸ್ಟರ್ ಎಂದು ಕೇಳಿದಾಗ, ಏ ನಮ್ ಮಿನಿಸ್ಟರ್ ಎಲ್ಲಿದ್ದಾರೆ ನೋಡ್ರಿ ಎಂದು ಡಿ.ಕೆ. ಶಿವಕುಮಾರ್ ಕೇಳಿದರು.

ಈ ವೇಳೆ ಪರಮೇಶ್ವರ್ ಅವ​ರನ್ನ ಸಿದ್ದರಾಮಯ್ಯ ಅವರು ಹೆಗಲ ಮೇಲೆ ಕೈ ಹಾಕಿ ಮುಂದಕ್ಕೆ ಕರೆತಂದರು. ನಂತರ ಎಲ್ಲರೂ ಒಂದು ಚಪ್ಪಾಳೆ ಹೊಡೆಯಿರಿ ಎಂದು ಹೇಳಿದ ಡಿಕೆ ಶಿವಕುಮಾರ್ ಟೇಪ್ ಕತ್ತರಿಸಿ ಮೀಟಿಂಗ್ ಹಾಲ್ ಉದ್ಘಾಟಿಸಿದರು. ಈ ವೇಳೆ ಸಚಿವ ಎಂಬಿ ಪಾಟೀಲ್ ಅವರು ಡಿಕೆ ಶಿವಕುಮಾರ್ ಪಕ್ಕದಲ್ಲೇ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Sat, 4 November 23

Follow Us
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!