AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.

ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on:Nov 04, 2023 | 12:18 PM

Share

ಬೆಂಗಳೂರು, ನ.4: ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (D.K.Shivakumar) ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.

ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ಈ ವೇಳೆ ನನ್ನಿಂದಲೇ ಟೇಪ್​ ಕಟ್​ ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್​ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿದ್ದರಾಮಯ್ಯ

ಈ ವೇಳೆ, ಹೌದಪ್ಪಾ ಅಧ್ಯಕ್ಷರು ಎಂದು ಡಿಕೆ ಶಿವಕುಮಾರ್​ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಈ ವೇಳೆ ಕೆ.ಎನ್​.ರಾಜಣ್ಣ ಎಲ್ಲಪ್ಪಾ ಮಿನಿಸ್ಟರ್ ಎಂದು ಕೇಳಿದಾಗ, ಏ ನಮ್ ಮಿನಿಸ್ಟರ್ ಎಲ್ಲಿದ್ದಾರೆ ನೋಡ್ರಿ ಎಂದು ಡಿ.ಕೆ. ಶಿವಕುಮಾರ್ ಕೇಳಿದರು.

ಈ ವೇಳೆ ಪರಮೇಶ್ವರ್ ಅವ​ರನ್ನ ಸಿದ್ದರಾಮಯ್ಯ ಅವರು ಹೆಗಲ ಮೇಲೆ ಕೈ ಹಾಕಿ ಮುಂದಕ್ಕೆ ಕರೆತಂದರು. ನಂತರ ಎಲ್ಲರೂ ಒಂದು ಚಪ್ಪಾಳೆ ಹೊಡೆಯಿರಿ ಎಂದು ಹೇಳಿದ ಡಿಕೆ ಶಿವಕುಮಾರ್ ಟೇಪ್ ಕತ್ತರಿಸಿ ಮೀಟಿಂಗ್ ಹಾಲ್ ಉದ್ಘಾಟಿಸಿದರು. ಈ ವೇಳೆ ಸಚಿವ ಎಂಬಿ ಪಾಟೀಲ್ ಅವರು ಡಿಕೆ ಶಿವಕುಮಾರ್ ಪಕ್ಕದಲ್ಲೇ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Sat, 4 November 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ