AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್ ಆರೋಪ: ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದ ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಸದ್ಯ ಈ ಎಲ್ಲದರ ಬಗ್ಗೆ ತುಮಕೂರು ಜಿಲ್ಲೆಯಲ್ಲಿರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದಿದ್ದಾರೆ.

ಕಮಿಷನ್ ಆರೋಪ: ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದ ಡಿಕೆ ಶಿವಕುಮಾರ್
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Aug 27, 2023 | 6:40 PM

Share

ತುಮಕೂರು, ಆಗಸ್ಟ್ 27: ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಸದ್ಯ ಈ ಎಲ್ಲದರ ಬಗ್ಗೆ ತುಮಕೂರು (Tumkur) ಜಿಲ್ಲೆಯಲ್ಲಿರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದಿದ್ದಾರೆ.

ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಇರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬಂದಾಗ ನನ್ನ ಎನರ್ಜಿ ಹೆಚ್ಚಾಗುತ್ತದೆ. ನಾನು ಅತಿ ಹೆಚ್ಚು ಪ್ರೀತಿಸುವ ಸ್ಥಳ ಇದು, ಶ್ರೀಗಳು ಆಶೀರ್ವದಿಸುತ್ತಾರೆ ಎಂದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಅವರ ಸಿಎಂ ಕನಸು ಬಿಚ್ಚಿಟ್ಟ ತಿಪಟೂರು ಶಾಸಕ ಷಡಕ್ಷರಿ

ಅಜ್ಜಯ್ಯನ ಮೇಲೆ ಪ್ರಮಾಣ ಮಾಡು ಅಂದವರೆಲ್ಲ ಈಗ ಏನಾದರು ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಅಜ್ಜಯ್ಯನ ಹೆಸರು ತೆಗೆದುಕೊಂಡವರು ಈಗ ಉಲ್ಟಾ ಹೊಡೆದಿದ್ದಾರೆ. ಅವರು ಯಾಕೆ ಉಲ್ಟಾ ಹೊಡೆದರು ಅಂದರೆ, ಅದೇ ಅಜ್ಜಯ್ಯನ ಶಕ್ತಿ. ನಾನೇನಾದರು ತಪ್ಪು ಮಾಡಿದ್ದರೆ ತಾನೆ ಯೋಚನೆ ಮಾಡಬೇಕಿರುತ್ತದೆ. ಪಾಪ, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲ ರಾಜಕೀಯದವರು ಮಾಡಿದ್ದು. ರಾಜಕೀಯದವರು ಮಿಸ್​ ಗೈಡ್ ಮಾಡಿ ಗುತ್ತಿಗೆದಾರರ ದಿಕ್ಕು ತಪ್ಪಿಸಿದರು ಎಂದರು.

ಸದ್ಯ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಭಾರೀ ಕುತೂಹಲ ಕೆರಳಿಸಿದೆ. ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಬಲೆಗೆ ಬಿದ್ದಿದ್ದಾರೆ ಎಂಬ ವದಂತಿ ಹಬ್ಬುತ್ತಿದೆ. ಈ ನಡುವೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್ ಬರುತ್ತಾರೆ ಎಂಬ ಮಾತುಗಳು ಕೇಳಿಬರಲು ಆರಂಭವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವೆಲ್ಲ ಪಟ್ಟಿ ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ