AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್ ಆರೋಪ: ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದ ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಸದ್ಯ ಈ ಎಲ್ಲದರ ಬಗ್ಗೆ ತುಮಕೂರು ಜಿಲ್ಲೆಯಲ್ಲಿರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದಿದ್ದಾರೆ.

ಕಮಿಷನ್ ಆರೋಪ: ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದ ಡಿಕೆ ಶಿವಕುಮಾರ್
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Aug 27, 2023 | 6:40 PM

Share

ತುಮಕೂರು, ಆಗಸ್ಟ್ 27: ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಸದ್ಯ ಈ ಎಲ್ಲದರ ಬಗ್ಗೆ ತುಮಕೂರು (Tumkur) ಜಿಲ್ಲೆಯಲ್ಲಿರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದಿದ್ದಾರೆ.

ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಇರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬಂದಾಗ ನನ್ನ ಎನರ್ಜಿ ಹೆಚ್ಚಾಗುತ್ತದೆ. ನಾನು ಅತಿ ಹೆಚ್ಚು ಪ್ರೀತಿಸುವ ಸ್ಥಳ ಇದು, ಶ್ರೀಗಳು ಆಶೀರ್ವದಿಸುತ್ತಾರೆ ಎಂದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಅವರ ಸಿಎಂ ಕನಸು ಬಿಚ್ಚಿಟ್ಟ ತಿಪಟೂರು ಶಾಸಕ ಷಡಕ್ಷರಿ

ಅಜ್ಜಯ್ಯನ ಮೇಲೆ ಪ್ರಮಾಣ ಮಾಡು ಅಂದವರೆಲ್ಲ ಈಗ ಏನಾದರು ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಅಜ್ಜಯ್ಯನ ಹೆಸರು ತೆಗೆದುಕೊಂಡವರು ಈಗ ಉಲ್ಟಾ ಹೊಡೆದಿದ್ದಾರೆ. ಅವರು ಯಾಕೆ ಉಲ್ಟಾ ಹೊಡೆದರು ಅಂದರೆ, ಅದೇ ಅಜ್ಜಯ್ಯನ ಶಕ್ತಿ. ನಾನೇನಾದರು ತಪ್ಪು ಮಾಡಿದ್ದರೆ ತಾನೆ ಯೋಚನೆ ಮಾಡಬೇಕಿರುತ್ತದೆ. ಪಾಪ, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲ ರಾಜಕೀಯದವರು ಮಾಡಿದ್ದು. ರಾಜಕೀಯದವರು ಮಿಸ್​ ಗೈಡ್ ಮಾಡಿ ಗುತ್ತಿಗೆದಾರರ ದಿಕ್ಕು ತಪ್ಪಿಸಿದರು ಎಂದರು.

ಸದ್ಯ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಭಾರೀ ಕುತೂಹಲ ಕೆರಳಿಸಿದೆ. ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಬಲೆಗೆ ಬಿದ್ದಿದ್ದಾರೆ ಎಂಬ ವದಂತಿ ಹಬ್ಬುತ್ತಿದೆ. ಈ ನಡುವೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್ ಬರುತ್ತಾರೆ ಎಂಬ ಮಾತುಗಳು ಕೇಳಿಬರಲು ಆರಂಭವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವೆಲ್ಲ ಪಟ್ಟಿ ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ