AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್ ಆರೋಪ: ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದ ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಸದ್ಯ ಈ ಎಲ್ಲದರ ಬಗ್ಗೆ ತುಮಕೂರು ಜಿಲ್ಲೆಯಲ್ಲಿರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದಿದ್ದಾರೆ.

ಕಮಿಷನ್ ಆರೋಪ: ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದ ಡಿಕೆ ಶಿವಕುಮಾರ್
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi|

Updated on: Aug 27, 2023 | 6:40 PM

Share

ತುಮಕೂರು, ಆಗಸ್ಟ್ 27: ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು 15 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಸದ್ಯ ಈ ಎಲ್ಲದರ ಬಗ್ಗೆ ತುಮಕೂರು (Tumkur) ಜಿಲ್ಲೆಯಲ್ಲಿರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲವು ರಾಜಕೀಯದವರು ಮಾಡಿದ್ದು ಎಂದಿದ್ದಾರೆ.

ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಇರುವ ನೊಣವಿನಕೆರೆ ಅಜ್ಜಯ್ಯನ ಮಠದ ಬಳಿ ಮಾತನಾಡಿದ ಡಿಕೆ ಶಿವಕುಮಾರ್, ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬಂದಾಗ ನನ್ನ ಎನರ್ಜಿ ಹೆಚ್ಚಾಗುತ್ತದೆ. ನಾನು ಅತಿ ಹೆಚ್ಚು ಪ್ರೀತಿಸುವ ಸ್ಥಳ ಇದು, ಶ್ರೀಗಳು ಆಶೀರ್ವದಿಸುತ್ತಾರೆ ಎಂದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಅವರ ಸಿಎಂ ಕನಸು ಬಿಚ್ಚಿಟ್ಟ ತಿಪಟೂರು ಶಾಸಕ ಷಡಕ್ಷರಿ

ಅಜ್ಜಯ್ಯನ ಮೇಲೆ ಪ್ರಮಾಣ ಮಾಡು ಅಂದವರೆಲ್ಲ ಈಗ ಏನಾದರು ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಅಜ್ಜಯ್ಯನ ಹೆಸರು ತೆಗೆದುಕೊಂಡವರು ಈಗ ಉಲ್ಟಾ ಹೊಡೆದಿದ್ದಾರೆ. ಅವರು ಯಾಕೆ ಉಲ್ಟಾ ಹೊಡೆದರು ಅಂದರೆ, ಅದೇ ಅಜ್ಜಯ್ಯನ ಶಕ್ತಿ. ನಾನೇನಾದರು ತಪ್ಪು ಮಾಡಿದ್ದರೆ ತಾನೆ ಯೋಚನೆ ಮಾಡಬೇಕಿರುತ್ತದೆ. ಪಾಪ, ಗುತ್ತಿಗೆದಾರರದ್ದು ತಪ್ಪಿಲ್ಲ, ಕೆಲ ರಾಜಕೀಯದವರು ಮಾಡಿದ್ದು. ರಾಜಕೀಯದವರು ಮಿಸ್​ ಗೈಡ್ ಮಾಡಿ ಗುತ್ತಿಗೆದಾರರ ದಿಕ್ಕು ತಪ್ಪಿಸಿದರು ಎಂದರು.

ಸದ್ಯ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಭಾರೀ ಕುತೂಹಲ ಕೆರಳಿಸಿದೆ. ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಬಲೆಗೆ ಬಿದ್ದಿದ್ದಾರೆ ಎಂಬ ವದಂತಿ ಹಬ್ಬುತ್ತಿದೆ. ಈ ನಡುವೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್ ಬರುತ್ತಾರೆ ಎಂಬ ಮಾತುಗಳು ಕೇಳಿಬರಲು ಆರಂಭವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವೆಲ್ಲ ಪಟ್ಟಿ ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ