AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಛಿದ್ರ ಮಾಡಿದವರು ನಾವಲ್ಲ, ಹೆಚ್​​ಡಿ ಕುಮಾರಸ್ವಾಮಿ: ಡಿಕೆ ಶಿವಕುಮಾರ್​​​ ಆರೋಪ

ರಾಮನಗರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆಸ್ತಿ ಮಾಡಿಲ್ವೇ? ಜಮೀನು ರೇಟ್ ಎಷ್ಟಿದೆ ಕೇಳಿ. ರಾಮನಗರಕ್ಕೆ ನನ್ನ ಕೊಡುಗೆ ಏನು, ನಿಮ್ಮ ಕೊಡುಗೆ ಏನು ಎಂಬುವುದರ ಬಗ್ಗೆ ವಿಧಾನಸೌಧಕ್ಕೆ ಬನ್ನಿ ಚರ್ಚೆ ಮಾಡೋಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಬಹಿರಂಗ ಚರ್ಚೆಗೆ ಆಹ್ವಾನಿಸಿದರು.

ರಾಮನಗರ ಛಿದ್ರ ಮಾಡಿದವರು ನಾವಲ್ಲ, ಹೆಚ್​​ಡಿ ಕುಮಾರಸ್ವಾಮಿ: ಡಿಕೆ ಶಿವಕುಮಾರ್​​​ ಆರೋಪ
ಡಿಕೆ ಶಿವಕುಮಾರ್​, ಹೆಚ್​​.ಡಿ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ|

Updated on:Oct 25, 2023 | 3:05 PM

Share

ಬೆಂಗಳೂರು ಅ.24: ಕನಕಪುರವನ್ನು (Kanakapura) ಬೆಂಗಳೂರಿಗೆ (Bengaluru) ಸೇರಿಸುವ ಬಗ್ಗೆ ಜನರನ್ನು ಕೇಳುತ್ತಿದ್ದೇನೆ. ಬುದ್ದಿವಂತಿಕೆ ಇಲ್ಲದಿದ್ದರೂ ನಡೆಯುತ್ತದೆ ಪ್ರಜ್ಞಾವಂತಿಕೆ ಇರಬೇಕು. ನಾವು ಬೆಂಗಳೂರಿನವರು, ಬೆಂಗಳೂರಲ್ಲೇ ಇರಬೇಕು. ರಾಮನಗರ (Ramnagar) ಛಿದ್ರ ಮಾಡಿದವರು ನಾವಲ್ಲ, ಹೆಚ್​. ಡಿ.ಕುಮಾರಸ್ವಾಮಿ (HD Kumaraswamy) ಎಂದು ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ (DK Shivakumar)​ ಆರೋಪ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ. ರಾಮನಗರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆಸ್ತಿ ಮಾಡಿಲ್ವೇ? ಜಮೀನು ರೇಟ್ ಎಷ್ಟಿದೆ ಕೇಳಿ. ರಾಮನಗರಕ್ಕೆ ನನ್ನ ಕೊಡುಗೆ ಏನು, ನಿಮ್ಮ ಕೊಡುಗೆ ಏನು ಎಂಬುವುದರ ಬಗ್ಗೆ ವಿಧಾನಸೌಧಕ್ಕೆ ಬನ್ನಿ ಚರ್ಚೆ ಮಾಡೋಣ. ಏಕಾಂಗಿಯಾಗಿ ಚರ್ಚೆಗೆ ಬನ್ನಿ ಅಂತ ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಬಹಿರಂಗ ಚರ್ಚೆಗೆ ಆಹ್ವಾನಿಸಿದರು.

ಸಮಿಶ್ರ ಸರ್ಕಾರ ಪತನ ವಿಚಾರವಾಗಿ ಮಾತನಾಡಿದ ಅವರು ಮಾಜಿ ಸಿಎಂ ಕುಮಾರಸ್ವಾಮಿಗೆ ಬಹಳ ನಮ್ರತೆಯಿಂದ ಹೇಳುತ್ತೇನೆ. ನಿಮ್ಮ ನುಡಿಮುತ್ತುಗಳನ್ನು ಅಸೆಂಬ್ಲಿಯಲ್ಲಿ ಉದುರಿಸಿದ್ದೀರಾ. ನಿಮ್ಮ ಸರ್ಕಾರ, ನಮ್ಮ ಸರ್ಕಾರವನ್ನು ಯಾರು ಬೀಳಿಸಿದರು ಅಂತ ಹೇಳಿದ್ರಿ. ಕೆಲ ಬಾರಿ ನನ್ನ ಹೆಸರು, ಕೆಲ ಬಾರಿ ಸಿದ್ದರಾಮಯ್ಯ ಹೆಸರು ಹೇಳಿದ್ರಿ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹಣ ನೀಡಿ ಸರ್ಕಾರ ಬೀಳಿಸಿದರು ಅಂತ ನೀವೇ ಹೇಳಿದ್ದೀರಿ. ವಿಧಾನಸಭೆಯಲ್ಲೇ ಹೆಚ್ ​ಡಿ ಕುಮಾರಸ್ವಾಮಿಯವರು ಮಾತನಾಡಿದ ಸಾಕ್ಷಿಗಳು ಸಾಕಷ್ಟಿವೆ ಎಂದರು.

ಇದನ್ನೂ ಓದಿ: ಕನಕಪುರ ಗಲಾಟೆ: ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ ಎಂದು ಜಾಡಿಸಿದ ಡಿಕೆ ಶಿವಕುಮಾರ್

ನಾವು ಕೊಟ್ಟ ಬೆಂಬಲವನ್ನು ನಿಮಗೆ ಉಳಿಸಿಕೊಳ್ಳಲು ಆಗಲಿಲ್ಲ. ಒಬ್ಬರು ಬೆಳಗಾವಿಯವರು, ಒಬ್ಬ ಚನ್ನಪಟ್ಟಣದವರು ಮತ್ತೊಬ್ಬರು ಬೆಂಗಳೂರಿನವರು ನಿಮ್ಮ ಸರ್ಕಾರ ತೆಗೆಯಲು ಶ್ರಮ ಹಾಕಿ ಯಶಸ್ವಿ ಆದರಲ್ಲ, ಅವರನ್ನೇ ಈಗ ತಬ್ಬಿಕೊಂಡಿದ್ದೀರಾ? ಆಗ ಹಗಲೂ, ರಾತ್ರಿ ನಿಮ್ಮ ಜೊತೆಗೆ ನಿಂತವರು ಯಾರು? ಅನೇಕ ಕಹಿ ಘಟನೆ ಸಹಿಸಿಕೊಂಡು ಅವರ ಜೊತೆಗೆ ಕೈಜೋಡಿಸಿದ್ದೇನೆ. ಅಂದು ಸಿದ್ದರಾಮಯ್ಯ ಅವರು ಹೈಕಮಾಂಡ್​​ ಹೇಳಿದರೂ ಅಂತ ಬೇಷರತ್ ಆಶೀರ್ವಾದ ಮಾಡಿದರು. ಮಾನವೀಯತೆ ಬೇಡವೇ? ಉಪಕಾರ ಸ್ಮರಣೆ ಬೇಡವೇ? ಸರ್ಕಾರ ನೀವು ಉಳಿಸಿಕೊಳ್ಳಬೇಕಿತ್ತು. ಅಂದು ಸರ್ಕಾರ ಬೀಳಿಸಿದವರ ಜೊತೆಗೆ ಈಗ ಕೈ ಜೋಡಿಸಿದ್ದೀರಿ. ಸಿದ್ದರಾಮಯ್ಯ ಅವರಿಗೆ ಯಾಕೆ ಮೀರ್ ಸಾದಿಕ್ ಅಂತೀರಿ? ಬೆಳಗಾವಿ ಅಧಿವೇಶನದಲ್ಲಿ ದಾಖಲೆ ಸಮೇತ ಮಾತನಾಡಿ ಎಂದು ಸವಾಲು ಹಾಕಿದರು.

ನಾವು ಬೆಂಗಳೂರಿನವರು. ಹೊಸಕೋಟೆ, ನೆಲಮಂಗಲ, ಮಾಗಡಿ, ಚನ್ನಪಟ್ಟಣ, ರಾಮನಗರ ಮತ್ತು ಕನಕಪುರದವರೆಲ್ಲಾ ಬೆಂಗಳೂರಿನವರೇ. ನಾನು ನನ್ನ ಜನರಿಗೆ ತಿಳಿವಳಿಕೆ ಹೇಳುತ್ತೇನಪ್ಪ. ನೀವೂ ಆಸ್ತಿ ಮಾಡಿಲ್ಲವೇ, ನಾವೇನಾದರೂ ತಕರಾರು ಮಾಡ್ತಿದ್ದೀವಾ? ವಿದ್ಯೆಗೋಸ್ಕರ ಎಷ್ಟು ಜಮೀನು ದಾನ ಮಾಡಿದ್ದೇನೆ ಎಂಬ ಅರಿವಿದೆಯಾ? ರಾಮನಗರ ಜಿಲ್ಲೆಯಲ್ಲಿ ಮೂರು ಬಿಲ್ಡಿಂಗ್ ಕಟ್ಟಿದ್ದೀರಿ ಶುಭ ಹಾರೈಸುತ್ತೇನೆ. ಕ್ಷೇತ್ರದ ಶ್ರೇಯಸ್ಸು ಬೆಳೆಸಬೇಕಾದ್ದು ನಮ್ಮ ಕರ್ತವ್ಯ ಎಂದು ವಾಗ್ದಾಳಿ ಮಾಡಿದರು.

ಕುಮಾರಸ್ವಾಮಿ-ಡಿಕೆ ಶಿವಕುಮಾರ್​ ಮಧ್ಯೆ ಕಿತ್ತಾಟ ಏಕೆ?

ಕನಕಪುರ ಜಿಲ್ಲೆಯನ್ನು ಬೆಂಗಳೂರು ನಗರ ಜಿಲ್ಲೆಗೆ ಸೇರಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಕನಕಪುರ ತಾಲೂಕಿನ ಶಿವನಹಳ್ಳಿಯಲ್ಲಿ ವೀರಭದ್ರಸ್ವಾಮಿ ದೇವಸ್ಥಾನ ಶಿಲಾ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಹೇಳಿದರು. ಡಿಕೆ ಶಿವಕುಮಾರ್​ ಅವರ ಈ ಹೇಳಿಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಡಿಕೆ ಶಿವಕುಮಾರ್ ಆ ಹೇಳಿಕೆ ನೀಡಿದ್ದಾರೆ ಆಕ್ರೋಶ ವ್ಯಕ್ತಪಿಡಸಿದ್ದರು.

ಇನ್ನು ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರ ಬೀಳಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​​ ಕಾರಣ ಎಂದು ಹೆಚ್​ಡಿ ಕುಮಾರಸ್ವಾಮಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ಯುದ್ಧ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Wed, 25 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ