AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಛಿದ್ರ ಮಾಡಿದವರು ನಾವಲ್ಲ, ಹೆಚ್​​ಡಿ ಕುಮಾರಸ್ವಾಮಿ: ಡಿಕೆ ಶಿವಕುಮಾರ್​​​ ಆರೋಪ

ರಾಮನಗರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆಸ್ತಿ ಮಾಡಿಲ್ವೇ? ಜಮೀನು ರೇಟ್ ಎಷ್ಟಿದೆ ಕೇಳಿ. ರಾಮನಗರಕ್ಕೆ ನನ್ನ ಕೊಡುಗೆ ಏನು, ನಿಮ್ಮ ಕೊಡುಗೆ ಏನು ಎಂಬುವುದರ ಬಗ್ಗೆ ವಿಧಾನಸೌಧಕ್ಕೆ ಬನ್ನಿ ಚರ್ಚೆ ಮಾಡೋಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಬಹಿರಂಗ ಚರ್ಚೆಗೆ ಆಹ್ವಾನಿಸಿದರು.

ರಾಮನಗರ ಛಿದ್ರ ಮಾಡಿದವರು ನಾವಲ್ಲ, ಹೆಚ್​​ಡಿ ಕುಮಾರಸ್ವಾಮಿ: ಡಿಕೆ ಶಿವಕುಮಾರ್​​​ ಆರೋಪ
ಡಿಕೆ ಶಿವಕುಮಾರ್​, ಹೆಚ್​​.ಡಿ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Oct 25, 2023 | 3:05 PM

Share

ಬೆಂಗಳೂರು ಅ.24: ಕನಕಪುರವನ್ನು (Kanakapura) ಬೆಂಗಳೂರಿಗೆ (Bengaluru) ಸೇರಿಸುವ ಬಗ್ಗೆ ಜನರನ್ನು ಕೇಳುತ್ತಿದ್ದೇನೆ. ಬುದ್ದಿವಂತಿಕೆ ಇಲ್ಲದಿದ್ದರೂ ನಡೆಯುತ್ತದೆ ಪ್ರಜ್ಞಾವಂತಿಕೆ ಇರಬೇಕು. ನಾವು ಬೆಂಗಳೂರಿನವರು, ಬೆಂಗಳೂರಲ್ಲೇ ಇರಬೇಕು. ರಾಮನಗರ (Ramnagar) ಛಿದ್ರ ಮಾಡಿದವರು ನಾವಲ್ಲ, ಹೆಚ್​. ಡಿ.ಕುಮಾರಸ್ವಾಮಿ (HD Kumaraswamy) ಎಂದು ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ (DK Shivakumar)​ ಆರೋಪ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ. ರಾಮನಗರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆಸ್ತಿ ಮಾಡಿಲ್ವೇ? ಜಮೀನು ರೇಟ್ ಎಷ್ಟಿದೆ ಕೇಳಿ. ರಾಮನಗರಕ್ಕೆ ನನ್ನ ಕೊಡುಗೆ ಏನು, ನಿಮ್ಮ ಕೊಡುಗೆ ಏನು ಎಂಬುವುದರ ಬಗ್ಗೆ ವಿಧಾನಸೌಧಕ್ಕೆ ಬನ್ನಿ ಚರ್ಚೆ ಮಾಡೋಣ. ಏಕಾಂಗಿಯಾಗಿ ಚರ್ಚೆಗೆ ಬನ್ನಿ ಅಂತ ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಬಹಿರಂಗ ಚರ್ಚೆಗೆ ಆಹ್ವಾನಿಸಿದರು.

ಸಮಿಶ್ರ ಸರ್ಕಾರ ಪತನ ವಿಚಾರವಾಗಿ ಮಾತನಾಡಿದ ಅವರು ಮಾಜಿ ಸಿಎಂ ಕುಮಾರಸ್ವಾಮಿಗೆ ಬಹಳ ನಮ್ರತೆಯಿಂದ ಹೇಳುತ್ತೇನೆ. ನಿಮ್ಮ ನುಡಿಮುತ್ತುಗಳನ್ನು ಅಸೆಂಬ್ಲಿಯಲ್ಲಿ ಉದುರಿಸಿದ್ದೀರಾ. ನಿಮ್ಮ ಸರ್ಕಾರ, ನಮ್ಮ ಸರ್ಕಾರವನ್ನು ಯಾರು ಬೀಳಿಸಿದರು ಅಂತ ಹೇಳಿದ್ರಿ. ಕೆಲ ಬಾರಿ ನನ್ನ ಹೆಸರು, ಕೆಲ ಬಾರಿ ಸಿದ್ದರಾಮಯ್ಯ ಹೆಸರು ಹೇಳಿದ್ರಿ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹಣ ನೀಡಿ ಸರ್ಕಾರ ಬೀಳಿಸಿದರು ಅಂತ ನೀವೇ ಹೇಳಿದ್ದೀರಿ. ವಿಧಾನಸಭೆಯಲ್ಲೇ ಹೆಚ್ ​ಡಿ ಕುಮಾರಸ್ವಾಮಿಯವರು ಮಾತನಾಡಿದ ಸಾಕ್ಷಿಗಳು ಸಾಕಷ್ಟಿವೆ ಎಂದರು.

ಇದನ್ನೂ ಓದಿ: ಕನಕಪುರ ಗಲಾಟೆ: ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ ಎಂದು ಜಾಡಿಸಿದ ಡಿಕೆ ಶಿವಕುಮಾರ್

ನಾವು ಕೊಟ್ಟ ಬೆಂಬಲವನ್ನು ನಿಮಗೆ ಉಳಿಸಿಕೊಳ್ಳಲು ಆಗಲಿಲ್ಲ. ಒಬ್ಬರು ಬೆಳಗಾವಿಯವರು, ಒಬ್ಬ ಚನ್ನಪಟ್ಟಣದವರು ಮತ್ತೊಬ್ಬರು ಬೆಂಗಳೂರಿನವರು ನಿಮ್ಮ ಸರ್ಕಾರ ತೆಗೆಯಲು ಶ್ರಮ ಹಾಕಿ ಯಶಸ್ವಿ ಆದರಲ್ಲ, ಅವರನ್ನೇ ಈಗ ತಬ್ಬಿಕೊಂಡಿದ್ದೀರಾ? ಆಗ ಹಗಲೂ, ರಾತ್ರಿ ನಿಮ್ಮ ಜೊತೆಗೆ ನಿಂತವರು ಯಾರು? ಅನೇಕ ಕಹಿ ಘಟನೆ ಸಹಿಸಿಕೊಂಡು ಅವರ ಜೊತೆಗೆ ಕೈಜೋಡಿಸಿದ್ದೇನೆ. ಅಂದು ಸಿದ್ದರಾಮಯ್ಯ ಅವರು ಹೈಕಮಾಂಡ್​​ ಹೇಳಿದರೂ ಅಂತ ಬೇಷರತ್ ಆಶೀರ್ವಾದ ಮಾಡಿದರು. ಮಾನವೀಯತೆ ಬೇಡವೇ? ಉಪಕಾರ ಸ್ಮರಣೆ ಬೇಡವೇ? ಸರ್ಕಾರ ನೀವು ಉಳಿಸಿಕೊಳ್ಳಬೇಕಿತ್ತು. ಅಂದು ಸರ್ಕಾರ ಬೀಳಿಸಿದವರ ಜೊತೆಗೆ ಈಗ ಕೈ ಜೋಡಿಸಿದ್ದೀರಿ. ಸಿದ್ದರಾಮಯ್ಯ ಅವರಿಗೆ ಯಾಕೆ ಮೀರ್ ಸಾದಿಕ್ ಅಂತೀರಿ? ಬೆಳಗಾವಿ ಅಧಿವೇಶನದಲ್ಲಿ ದಾಖಲೆ ಸಮೇತ ಮಾತನಾಡಿ ಎಂದು ಸವಾಲು ಹಾಕಿದರು.

ನಾವು ಬೆಂಗಳೂರಿನವರು. ಹೊಸಕೋಟೆ, ನೆಲಮಂಗಲ, ಮಾಗಡಿ, ಚನ್ನಪಟ್ಟಣ, ರಾಮನಗರ ಮತ್ತು ಕನಕಪುರದವರೆಲ್ಲಾ ಬೆಂಗಳೂರಿನವರೇ. ನಾನು ನನ್ನ ಜನರಿಗೆ ತಿಳಿವಳಿಕೆ ಹೇಳುತ್ತೇನಪ್ಪ. ನೀವೂ ಆಸ್ತಿ ಮಾಡಿಲ್ಲವೇ, ನಾವೇನಾದರೂ ತಕರಾರು ಮಾಡ್ತಿದ್ದೀವಾ? ವಿದ್ಯೆಗೋಸ್ಕರ ಎಷ್ಟು ಜಮೀನು ದಾನ ಮಾಡಿದ್ದೇನೆ ಎಂಬ ಅರಿವಿದೆಯಾ? ರಾಮನಗರ ಜಿಲ್ಲೆಯಲ್ಲಿ ಮೂರು ಬಿಲ್ಡಿಂಗ್ ಕಟ್ಟಿದ್ದೀರಿ ಶುಭ ಹಾರೈಸುತ್ತೇನೆ. ಕ್ಷೇತ್ರದ ಶ್ರೇಯಸ್ಸು ಬೆಳೆಸಬೇಕಾದ್ದು ನಮ್ಮ ಕರ್ತವ್ಯ ಎಂದು ವಾಗ್ದಾಳಿ ಮಾಡಿದರು.

ಕುಮಾರಸ್ವಾಮಿ-ಡಿಕೆ ಶಿವಕುಮಾರ್​ ಮಧ್ಯೆ ಕಿತ್ತಾಟ ಏಕೆ?

ಕನಕಪುರ ಜಿಲ್ಲೆಯನ್ನು ಬೆಂಗಳೂರು ನಗರ ಜಿಲ್ಲೆಗೆ ಸೇರಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಕನಕಪುರ ತಾಲೂಕಿನ ಶಿವನಹಳ್ಳಿಯಲ್ಲಿ ವೀರಭದ್ರಸ್ವಾಮಿ ದೇವಸ್ಥಾನ ಶಿಲಾ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಹೇಳಿದರು. ಡಿಕೆ ಶಿವಕುಮಾರ್​ ಅವರ ಈ ಹೇಳಿಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಡಿಕೆ ಶಿವಕುಮಾರ್ ಆ ಹೇಳಿಕೆ ನೀಡಿದ್ದಾರೆ ಆಕ್ರೋಶ ವ್ಯಕ್ತಪಿಡಸಿದ್ದರು.

ಇನ್ನು ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರ ಬೀಳಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​​ ಕಾರಣ ಎಂದು ಹೆಚ್​ಡಿ ಕುಮಾರಸ್ವಾಮಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ಯುದ್ಧ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Wed, 25 October 23

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!