Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಿಂದೆ ಕೂಡ ಚರ್ಚೆ ಮಾಡಿ ಕ್ಷಮೆ ಕೇಳಿದ್ದ ಹೆಚ್​ಡಿ ಕುಮಾರಸ್ವಾಮಿ: ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ರಾಮನಗರ ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಹಾಕಿರುವ ಸವಾಲನ್ನು ಹೆಚ್​ಡಿ ಕುಮಾರಸ್ವಾಮಿ ಸ್ವೀಕರಿಸಿದ್ದರು. ಅಲ್ಲದೇ ನಾನು ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಎಂದು ಹೇಳಿದ್ದರು. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಈ ಹಿಂದೆ ಕೂಡ ಚರ್ಚೆ ಮಾಡಿ ಕ್ಷಮೆ ಕೇಳಿದ್ದ ಹೆಚ್​ಡಿ ಕುಮಾರಸ್ವಾಮಿ: ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್
ಡಿಕೆ ಶಿವಕುಮಾರ್ & ಹೆಚ್​ಡಿ ಕುಮಾರಸ್ವಾಮಿ
Follow us
Malatesh Jaggin
| Updated By: Ganapathi Sharma

Updated on: Oct 26, 2023 | 6:23 PM

ಬೆಂಗಳೂರು, ಅಕ್ಟೋಬರ್ 26: ರಾಮನಗರ ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಆಹ್ವಾನ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಬಹಳ ಸಂತೋಷ ಎಂದು ಹೇಳಿದ್ದಾರೆ. ಚರ್ಚೆ ಎಲ್ಲಿ ನಡೆಯುತ್ತೆ ಎಂಬುದನ್ನು ಅವರೇ ತೀರ್ಮಾನ ಮಾಡಲಿ. ಹಿಂದೆ ಕೂಡ ಇದೇ ರೀತಿ ಚರ್ಚೆ ನಿಗದಿ ಮಾಡಿದ್ರು. ಆಗ ಉತ್ತರ ಕೊಟ್ಟಿದ್ದೆ. ನಂತರ ಕುಮಾರಸ್ವಾಮಿ ಬಂದು ಕ್ಷಮೆ ಕೇಳಿದ್ದು ನಿಮಗೆ ಗೊತ್ತಿದೆ ಎಂದು ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಅಸೆಂಬ್ಲಿಯಲ್ಲಿ ಎಲ್ಲಾ ಮಾಧ್ಯಮಗಳಿಗೂ ಅವಕಾಶ ಸಿಗಲಿದೆ. ಅವರು (ಕುಮಾರಸ್ವಾಮಿ) ಎಲ್ಲಾ ದಾಖಲೆಗಳನ್ನು ಅಸೆಂಬ್ಲಿಗೆ ತರಲಿ, ನಾನು ಉತ್ತರ ಕೊಡ್ತೀನಿ. ಅವರು ಸವಾಲು ಸ್ವೀಕಾರ ಮಾಡಿರೋದಕ್ಕೆ ಬಹಳ ಸಂತೋಷವಾಗಿದೆ. ಹಿಂದೆ ಕೂಡ ಚರ್ಚೆ ನಿಗದಿ ಮಾಡಿದ್ದರು, ಅಲ್ಲೇ ಉತ್ತರ ಕೊಟ್ಟಿದ್ದೆ. ಬಳಿಕ ಅವರು ಬಂದು ಕ್ಷಮೆ ಕೇಳಿದ್ದು ನಿಮಗೆ ಗೊತ್ತಿದೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ರಾಮನಗರ ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಹಾಕಿರುವ ಸವಾಲನ್ನು ಹೆಚ್​ಡಿ ಕುಮಾರಸ್ವಾಮಿ ಸ್ವೀಕರಿಸಿದ್ದರು. ಅಲ್ಲದೇ ನಾನು ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಎಂದು ಹೇಳಿದ್ದರು. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸವಾಲು ಸ್ವೀಕರಿಸಿದ ಹೆಚ್​ಡಿ ಕುಮಾರಸ್ವಾಮಿ, ಉಭಯ ನಾಯಕರ ರಾಜಕೀಯ ಯುದ್ಧ ಶುರು

ಉಭಯ ನಾಯಕರ ಮಧ್ಯೆ ಕಳೆದ ಕೆಲವು ದಿನಗಳಿಂದ ವಾಕ್ಸಮರ ಜೋರಾಗಿದೆ. ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುಮಾರಸ್ವಾಮಿ ಅವರನ್ನು ಕೆರಳಿಸಿತ್ತು. ಈ ವಿಚಾರವಾಗಿ ಉಭಯ ನಾಯಕರು ವಾಕ್ಸಮರ ನಡೆಸುತ್ತಿರುವ ಬೆನ್ನಲ್ಲೇ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಇದು ಕುಮಾರಸ್ವಾಮಿ ಅವರನ್ನು ಮತ್ತಷ್ಟು ಕೆರಳಿಸಿತ್ತು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ