AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಶಾಲೆ ಆರಂಭ: ಮೊದಲ ದಿನವೇ ಸೂಟ್ ಬೂಟ್ ಧರಿಸಿ ಸ್ಕೂಲ್​ಗೆ ಹೋದ ಡಿಕೆ ಶಿವಕುಮಾರ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೂಟ್ ಬೂಟು ಧರಿಸಿ ತಾವು ಕಲಿತಿದ್ದ ಶಾಲೆಗೆ ಭೇಟಿ ನೀಡಿ ಗಮನಸೆಳೆದಿದ್ದಾರೆ. ಇನ್ನು ಈ ಬಗ್ಗೆ ಅವರು ಹೇಳಿದ್ದಿಷ್ಟು.

ಇಂದಿನಿಂದ ಶಾಲೆ ಆರಂಭ: ಮೊದಲ ದಿನವೇ ಸೂಟ್ ಬೂಟ್ ಧರಿಸಿ ಸ್ಕೂಲ್​ಗೆ ಹೋದ ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on:May 29, 2023 | 12:46 PM

Share

ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಇಂದಿನಿಂದ ಕರ್ನಾಟಕದಾದ್ಯಂತೆ ಶಾಲೆಗಳು ಪ್ರಾರಂಭವಾಗಿವೆ. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಅವರು ಸೂಟ್ ಬೂಟ್ ಧರಿಸಿ ಶಾಲೆಗೆ (School)ಭೇಟಿ ನೀಡಿ ಎಲ್ಲರ ಗಮನಸೆಳೆದಿದ್ದಾರೆ. ಹೌದು…ಇಂದು(ಮೇ 29) ಬೆಳಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತಾವು ಓದಿದ್ದ ಬೆಂಗಳೂರಿನ(Bengaluru) ರಾಜಾಜಿನಗರದ ಎನ್​ಪಿಎಸ್​ ಶಾಲೆಗೆ ಭೇಟಿ ನೀಡಿದರು. ರಾಜಾಜಿನಗರದಲ್ಲಿರುವ ಎನ್​ಪಿಎಸ್​ ಶಾಲೆಯಲ್ಲೇ ಡಿಕೆ ಶಿವಕುಮಾರ್ ಹಾಗೂ ಅವರ ಮಕ್ಕಳು ವ್ಯಾಸಂಗ ಮಾಡಿದ್ದರು. ಇದೀಗ ತಾವು ಕಲಿತಿದ್ದ ಶಾಲೆಗೆ ಡಿಕೆ ಶಿವಕುಮಾರ್ ಸೌಹಾರ್ದವಾಗಿ ಭೇಟಿ ನೀಡಿದರು. ಇದೇ ವೇಳೆ ಎನ್​ಪಿಎಸ್​ ಶಾಲೆ ಸಂಸ್ಥಾಪಕ ಅಧ್ಯಕ್ಷ ಗೋಪಾಲಕೃಷ್ಣ ಜತೆ ಚರ್ಚಿಸಿದರು.

ಇದನ್ನೂ ಓದಿ: ಮಧ್ಯಾಹ್ನದ ಊಟದ ಜೊತೆಗೆ ಮಕ್ಕಳಿಗೆ ಸಿಹಿ ಹಂಚಿ; ಶಾಲೆಗಳ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾನು ಪ್ರೈಮರಿ ಶಾಲೆ ಓದಿದ್ದು ಇಲ್ಲೇ. ಭಾರತಕ್ಕೆ ಮೊದಲ ಅಟಾನಾಮಸ್ ಶಾಲೆ ಇದು. ದೊಡ್ಡ ಬೆಂಚ್ ಮಾರ್ಕ್ ಸ್ಥಾಪನೆ ಮಾಡಿದ ಶಾಲೆ ಇದು. ನನ್ನ ಮಕ್ಕಳು ಓದಿದ್ದು ಇದೇ ಶಾಲೆಯಲ್ಲಿ. ಈ ಶಾಲೆ ಬೆಲೆ ಏನು ಅಂತ ನನಗೆ ಗೊತ್ತಿದೆ ಎಂದು ತಾವು ವ್ಯಾಸಾಂಗ ಮಾಡಿದ ಶಾಲೆ ಬಗ್ಗೆ ಕೊಂಡಾಡಿದರು.

ನಮ್ಮ ಪ್ರಣಾಳಿಕೆಯಲ್ಲಿ ಪಂಚಾಯತಿ ಮಟ್ಟದಲ್ಲಿ ನವೋದಯ ಶಾಲೆ ಮಾದರಿಯಲ್ಲಿ ಶಾಲೆ ಸ್ಥಾಪನೆಗೆ ಭಾಷೆ ಕೊಟ್ಟಿದ್ದೇವೆ. ಇದನ್ನ ಯಾವ ರೀತಿ ಮಾಡಬೇಕು ಎಂದು ಗೋಪಾಲಕೃಷ್ಣ ಅವರ ಬಳಿ ಸಲಹೆ ನೀಡಲು ಚರ್ಚೆ ಮಾಡಿದ್ದೇನೆ. ನಾನು ಪರಮೇಶ್ವರ್, ಹೊಸ ಎಜುಕೇಶನ್ ಮಿನಿಸ್ಟರ್ ಇದರ ಬಗ್ಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಎಜುಕೇಶನ್ ಸಲುವಾಗಿ ವಲಸೆ ಬರುವ ಮಕ್ಕಳು ಜಾಸ್ತಿ ಇದ್ದಾರೆ. ಹೀಗಾಗಿ ಪಂಚಾಯಿತಿ ಮಟ್ಟದಲ್ಲಿ ಹಳ್ಳಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವುದು ನಮ್ಮ ಧ್ಯೇಯ. ರೈತರ ಮಕ್ಕಳಿಗೆ ಕ್ವಾಲಿಟಿ ಎಜುಕೇಶನ್ ಕೊಡುವುದು ನಮ್ಮ ಕನಸು. ಇದನ್ನ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ ಎಂದು ಹೇಳಿದರು.

ಬೆಂಗಳೂರಿಗೆ ಹೊಸ ರೂಪ ಕೊಡೋ ಯೋಚನೆ ಇದೆ. ಉತ್ತಮ ಶಿಕ್ಷಣ ಕೊಡುವುದು ನಮ್ಮ ಧ್ಯೇಯ. ನಮ್ಮ ಬಳಿ ಐಡಿಯಾಗಳು ಇವೆ. 20 ವರ್ಷದ ಕನಸು ನಮ್ಮ ಪ್ರಣಾಳಿಕೆ ಇಟ್ಡಿದ್ದೇವೆ. ಅದನ್ನ ಸಾಕಾರಾ ಮಾಡೋ ರೀತಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

Published On - 12:23 pm, Mon, 29 May 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ