AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಶಾಲೆ ಆರಂಭ: ಮೊದಲ ದಿನವೇ ಸೂಟ್ ಬೂಟ್ ಧರಿಸಿ ಸ್ಕೂಲ್​ಗೆ ಹೋದ ಡಿಕೆ ಶಿವಕುಮಾರ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೂಟ್ ಬೂಟು ಧರಿಸಿ ತಾವು ಕಲಿತಿದ್ದ ಶಾಲೆಗೆ ಭೇಟಿ ನೀಡಿ ಗಮನಸೆಳೆದಿದ್ದಾರೆ. ಇನ್ನು ಈ ಬಗ್ಗೆ ಅವರು ಹೇಳಿದ್ದಿಷ್ಟು.

ಇಂದಿನಿಂದ ಶಾಲೆ ಆರಂಭ: ಮೊದಲ ದಿನವೇ ಸೂಟ್ ಬೂಟ್ ಧರಿಸಿ ಸ್ಕೂಲ್​ಗೆ ಹೋದ ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on:May 29, 2023 | 12:46 PM

Share

ಮುಖ್ಯಾಂಶಗಳು

  • ಬೆಂಗಳೂರಿನ ರಾಜಾಜಿನಗರದ ಎನ್​ಪಿಎಸ್​ ಶಾಲೆಗೆ ಡಿಸಿಎಂ ಡಿಕೆ ಭೇಟಿ
  • ಎನ್​ಪಿಎಸ್ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ಡಿ.ಕೆ.ಶಿವಕುಮಾರ್​
  • ಸೌಹಾರ್ದಯುತವಾಗಿ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್​

ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಇಂದಿನಿಂದ ಕರ್ನಾಟಕದಾದ್ಯಂತೆ ಶಾಲೆಗಳು ಪ್ರಾರಂಭವಾಗಿವೆ. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಅವರು ಸೂಟ್ ಬೂಟ್ ಧರಿಸಿ ಶಾಲೆಗೆ (School)ಭೇಟಿ ನೀಡಿ ಎಲ್ಲರ ಗಮನಸೆಳೆದಿದ್ದಾರೆ. ಹೌದು…ಇಂದು(ಮೇ 29) ಬೆಳಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತಾವು ಓದಿದ್ದ ಬೆಂಗಳೂರಿನ(Bengaluru) ರಾಜಾಜಿನಗರದ ಎನ್​ಪಿಎಸ್​ ಶಾಲೆಗೆ ಭೇಟಿ ನೀಡಿದರು. ರಾಜಾಜಿನಗರದಲ್ಲಿರುವ ಎನ್​ಪಿಎಸ್​ ಶಾಲೆಯಲ್ಲೇ ಡಿಕೆ ಶಿವಕುಮಾರ್ ಹಾಗೂ ಅವರ ಮಕ್ಕಳು ವ್ಯಾಸಂಗ ಮಾಡಿದ್ದರು. ಇದೀಗ ತಾವು ಕಲಿತಿದ್ದ ಶಾಲೆಗೆ ಡಿಕೆ ಶಿವಕುಮಾರ್ ಸೌಹಾರ್ದವಾಗಿ ಭೇಟಿ ನೀಡಿದರು. ಇದೇ ವೇಳೆ ಎನ್​ಪಿಎಸ್​ ಶಾಲೆ ಸಂಸ್ಥಾಪಕ ಅಧ್ಯಕ್ಷ ಗೋಪಾಲಕೃಷ್ಣ ಜತೆ ಚರ್ಚಿಸಿದರು.

ಇದನ್ನೂ ಓದಿ: ಮಧ್ಯಾಹ್ನದ ಊಟದ ಜೊತೆಗೆ ಮಕ್ಕಳಿಗೆ ಸಿಹಿ ಹಂಚಿ; ಶಾಲೆಗಳ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾನು ಪ್ರೈಮರಿ ಶಾಲೆ ಓದಿದ್ದು ಇಲ್ಲೇ. ಭಾರತಕ್ಕೆ ಮೊದಲ ಅಟಾನಾಮಸ್ ಶಾಲೆ ಇದು. ದೊಡ್ಡ ಬೆಂಚ್ ಮಾರ್ಕ್ ಸ್ಥಾಪನೆ ಮಾಡಿದ ಶಾಲೆ ಇದು. ನನ್ನ ಮಕ್ಕಳು ಓದಿದ್ದು ಇದೇ ಶಾಲೆಯಲ್ಲಿ. ಈ ಶಾಲೆ ಬೆಲೆ ಏನು ಅಂತ ನನಗೆ ಗೊತ್ತಿದೆ ಎಂದು ತಾವು ವ್ಯಾಸಾಂಗ ಮಾಡಿದ ಶಾಲೆ ಬಗ್ಗೆ ಕೊಂಡಾಡಿದರು.

ನಮ್ಮ ಪ್ರಣಾಳಿಕೆಯಲ್ಲಿ ಪಂಚಾಯತಿ ಮಟ್ಟದಲ್ಲಿ ನವೋದಯ ಶಾಲೆ ಮಾದರಿಯಲ್ಲಿ ಶಾಲೆ ಸ್ಥಾಪನೆಗೆ ಭಾಷೆ ಕೊಟ್ಟಿದ್ದೇವೆ. ಇದನ್ನ ಯಾವ ರೀತಿ ಮಾಡಬೇಕು ಎಂದು ಗೋಪಾಲಕೃಷ್ಣ ಅವರ ಬಳಿ ಸಲಹೆ ನೀಡಲು ಚರ್ಚೆ ಮಾಡಿದ್ದೇನೆ. ನಾನು ಪರಮೇಶ್ವರ್, ಹೊಸ ಎಜುಕೇಶನ್ ಮಿನಿಸ್ಟರ್ ಇದರ ಬಗ್ಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಎಜುಕೇಶನ್ ಸಲುವಾಗಿ ವಲಸೆ ಬರುವ ಮಕ್ಕಳು ಜಾಸ್ತಿ ಇದ್ದಾರೆ. ಹೀಗಾಗಿ ಪಂಚಾಯಿತಿ ಮಟ್ಟದಲ್ಲಿ ಹಳ್ಳಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವುದು ನಮ್ಮ ಧ್ಯೇಯ. ರೈತರ ಮಕ್ಕಳಿಗೆ ಕ್ವಾಲಿಟಿ ಎಜುಕೇಶನ್ ಕೊಡುವುದು ನಮ್ಮ ಕನಸು. ಇದನ್ನ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ ಎಂದು ಹೇಳಿದರು.

ಬೆಂಗಳೂರಿಗೆ ಹೊಸ ರೂಪ ಕೊಡೋ ಯೋಚನೆ ಇದೆ. ಉತ್ತಮ ಶಿಕ್ಷಣ ಕೊಡುವುದು ನಮ್ಮ ಧ್ಯೇಯ. ನಮ್ಮ ಬಳಿ ಐಡಿಯಾಗಳು ಇವೆ. 20 ವರ್ಷದ ಕನಸು ನಮ್ಮ ಪ್ರಣಾಳಿಕೆ ಇಟ್ಡಿದ್ದೇವೆ. ಅದನ್ನ ಸಾಕಾರಾ ಮಾಡೋ ರೀತಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

Published On - 12:23 pm, Mon, 29 May 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ