ಕಾಂಗ್ರೆಸ್ ಪದಾಧಿಕಾರಿಗಳ ಜತೆ ​ಏನೇನು ಚರ್ಚೆ ನಡೆಸಿದರು ಡಿಕೆ ಶಿವಕುಮಾರ್? ಇಲ್ಲಿದೆ ವಿವರ

ಒಂದೆಡೆ ಕೆಎನ್​ ರಾಜಣ್ಣ ಸೇರಿದಂತೆ ಹಲವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಬಹಿರಂಗ ಹೇಳಿಕೆಗಳನ್ನು ನೀಡಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದರೂ ಕೆಲವರು ಕ್ಯಾರೇ ಮಾಡಿಲ್ಲ. ಇದೀಗ ಟಕ್ಕರ್ ಕೊಡಲು ಮುಂದಾಗಿರುವ ಡಿಕೆಶಿವಕುಮಾರ್, ಪಕ್ಷ ಸಂಘಟನೆಯ ನೆಪದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್​ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಏನೇನು ಚರ್ಚೆ ನಡೆಯಿತೆಂಬ ಮಾಹಿತಿ ಇಲ್ಲಿದೆ.

ಕಾಂಗ್ರೆಸ್ ಪದಾಧಿಕಾರಿಗಳ ಜತೆ ​ಏನೇನು ಚರ್ಚೆ ನಡೆಸಿದರು ಡಿಕೆ ಶಿವಕುಮಾರ್? ಇಲ್ಲಿದೆ ವಿವರ
ಡಿಕೆ ಶಿವಕುಮಾರ್
Follow us
| Updated By: ಗಣಪತಿ ಶರ್ಮ

Updated on: Jul 01, 2024 | 1:06 PM

ಬೆಂಗಳೂರು, ಜುಲೈ 1: ಕಾಂಗ್ರೆಸ್ ಪದಾಧಿಕಾರಿಗಳ ಜತೆ ಸೋಮವಾರ ನಡೆಸಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ದೃಷ್ಟಿಯಿಂದ ಹಾಗೂ ಚುನಾವಣೆ ದೃಷ್ಟಿಯಿಂದ ಪ್ರತ್ಯೇಕ ಆ್ಯಕ್ಷನ್ ಪ್ಲ್ಯಾನ್ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಫೈಟ್​ ಹೈಕಮಾಂಡ್​ ಅಂಗಳಕ್ಕೂ ತಲುಪಿದ ಬೆನ್ನಲ್ಲೇ, ಪದಾಧಿಕಾರಿಗಳ ಜತೆ ಸಭೆ ನಡೆಸಿರುವ ಡಿಕೆ ಶಿವಕುಮಾರ್ ಈ ಮೂಲಕ ಟಕ್ಕರ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಪದಾಧಿಕಾರಿಗಳ ಜತೆ ಡಿಕೆ ಶಿವಕುಮಾರ್ ನಡೆಸಿರುವ ಚರ್ಚೆ ಮತ್ತು ಆ್ಯಕ್ಷನ್ ಪ್ಲ್ಯಾನ್ ಸಂಬಂಧಿಸಿದ ವಿವರ ಇಲ್ಲಿದೆ.

  • ವಲಯವಾರು ಸತ್ಯ ಶೋಧನಾ ಸಮಿತಿ ರಚನೆಗೆ ನಿರ್ಧಾರ.
  • ಲೋಕಸಭೆ ಫಲಿತಾಂಶದ ಹಿನ್ನಡೆ ಬಗ್ಗೆ ವಿಚಾರಣೆ ನಡೆಸಲು ವಲಯವಾರು ಪ್ರತ್ಯೇಕ ಸಮಿತಿ ರಚನೆಗೆ ನಿರ್ಧಾರ.
  • ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿದ ವಿಧಾನಸಭಾ ಕ್ಷೇತ್ರಗಳ ಪ್ರಗತಿ ಪರಿಶೀಲನೆ/ ಕಾರಣಗಳ ಪತ್ತೆ ಹಚ್ಚುವುದು.
  • ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ರೂಪುರೇಷೆ ಸಿದ್ದಪಡಿಸಲು ವಲಯವಾರು ಸಮಿತಿ.
  • ಬಿಬಿಎಂಪಿ, ಜಿಪಂ, ತಾಪಂ ಚುನಾವಣೆಗೆ ಹಾಗೂ ಉಪ ಚುನಾವಣೆಯಲ್ಲಿ ಸಕ್ರಿಯ ಕೆಲಸ ಮಾಡುವಂತೆ ಸೂಚನೆ.
  • ಪ್ರತಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರವಾರು ಸಂಚಾಲನ ಸಮತಿ ರಚನೆಗೂ ನಿರ್ಧಾರ.
  • ಮಾಜಿ ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಸದಸ್ಯರ ಪ್ರತ್ಯೇಕ ಸಭೆ ನಡೆಸಲಿರುವ ಡಿಕೆಶಿವಕುಮಾರ್.
  • ಕೆಳಹಂತದಲ್ಲಿ ಪಕ್ಷ ಬಲವರ್ಧನೆ ಗೆ ಸಲಹೆ ನೀಡಲು ಪದಾಧಿಕಾರಿಗಳಿಗೆ ಸೂಚನೆ.
  • ಬೂತ್ ಮಟ್ಟದ ಸಮಸ್ಯೆ ಬಗೆಹರಿಸಲು ವಾರ್ಡ್ ಸಮಿತಿ/ ಪಂಚಾಯತ್ ಸಮಿತಿಗಳ ರಚನೆಗೆ ತೀರ್ಮಾನ.
  • ಗ್ಯಾರಂಟಿ ಫಲಾನುಭವಿಗಳ ದಾಖಲೆ ಹಾಗೂ ಮೊಬೈಲ್ ಸಂಖ್ಯೆ ಸಂಗ್ರಹಿಸಲು ಸೂಚನೆ.
  • ಕೆಪಿಸಿಸಿ ಮಟ್ಟದಲ್ಲಿ ಅಪಾರ್ಟ್ಮೆಂಟ್ ಸೆಲ್ ಹಾಗೂ ರೆಸಿಡೆಂಟ್ ವೆಲ್ಫೆರ್ ಅಸೋಸಿಯೇಷನ್ ಗೆ ಪುನಶ್ಚೇತನ.
  • ಉಪ ಚುನಾವಣೆಗಳಿಗೆ ಸಚಿವರು, ಶಾಸಕರನ್ನು ಹೋಬಳಿ ಮಟ್ಟದಲ್ಲಿ ನಿಯೋಜನೆಗೆ ನಿರ್ಧಾರ.
  • ಸ್ಥಳೀಯ ಶಾಸಕರು, ಹಿರಿಯ ನಾಯಕರ ನೇತೃತ್ವದಲ್ಲಿ ಇಲೆಕ್ಷನ್ ಕ್ಯಾಂಪ್ ಆಫೀಸ್, ವಾರ್ ರೂಂ ಸ್ಥಾಪನೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​​ಗೆ ಶಾಕ್: ಕೆಪಿಸಿಸಿ ಅಧ್ಯಕ್ಷ ಬದಲಾವಣೆಗೆ ಹೈಕಮಾಂಡ್ ಬಿಗ್‌ ಪ್ಲ್ಯಾನ್!

ಪ್ರಚಂಡ ಬಹುಮತಗಳಿಂದ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿತ್ತು. ಜೋಡೆತ್ತುಗಳಂತೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದರು. ಎಲ್ಲಾ ಅಂದುಕೊಂಡಂತೆಯೇ ಸಾಗುತ್ತಿದ್ದರೂ ಕೇವಲ ಒಂದು ವರ್ಷ ಆಗುಷ್ಟರಲ್ಲೇ ಇದೀಗ ಕಾಂಗ್ರೆಸ್​​​ನಲ್ಲಿ ಸಿಎಂ, ಡಿಸಿಎಂ, ಕೆಪಿಸಿಸಿ ಹುದ್ದೆಯ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಿದೆ. ಸಚಿವ ಕೆಎನ್​ ರಾಜಣ್ಣ ಸೇರಿದಂತೆ ಹಲವರು ಒನ್​ ಮ್ಯಾನ್​ ಒನ್​ ಪೋಸ್ಟ್​ ಸಂದೇಶ ರವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಫೈಟ್​ ಹೈಕಮಾಂಡ್​ ಅಂಗಳಕ್ಕೂ ತಲುಪಿತ್ತು. ಇದೀಗ ಈ ಎಲ್ಲೆ ಬೆಳವಣಿಗೆಗೆ ಕಾಂಗ್ರೆಸ್​ ಪದಾಧಿಕಾರಿಗಳ ಸಭೆಯ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಟಕ್ಕರ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’