AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನೆಗೆ ಊಟಕ್ಕೆ ಬನ್ನಿ ಎಂದು ಆಮಂತ್ರಿಸಿದ ಗುಜರಾತಿನ ಆಟೋ ಚಾಲಕ; ಖಂಡಿತಾ ಬರುವೆ ಎಂದ ಕೇಜ್ರಿವಾಲ್

ನಾನು ನಿಮ್ಮ ದೊಡ್ಡ ಅಭಿಮಾನಿ. ಪಂಜಾಬ್‌ನ ಆಟೋ ಡ್ರೈವರ್‌ನ ಮನೆಯಲ್ಲಿ ನೀವು ರಾತ್ರಿ ಊಟ ಮಾಡುತ್ತಿರುವ ವಿಡಿಯೊವನ್ನು ನಾನು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೇನೆ. ನೀವೂ ನನ್ನ ಮನೆಗೆ ಊಟಕ್ಕೆ ಬರುತ್ತೀರಾ?...

ನಮ್ಮನೆಗೆ ಊಟಕ್ಕೆ ಬನ್ನಿ ಎಂದು ಆಮಂತ್ರಿಸಿದ ಗುಜರಾತಿನ ಆಟೋ ಚಾಲಕ; ಖಂಡಿತಾ ಬರುವೆ ಎಂದ ಕೇಜ್ರಿವಾಲ್
ಕೇಜ್ರಿವಾಲ್
TV9 Web
| Edited By: |

Updated on:Sep 12, 2022 | 7:40 PM

Share

ಅಹಮದಾಬಾದ್: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ಸಂಚಾಲಕ ಅರವಿಂದ ಕೇಜ್ರಿವಾಲ್ (Arvind Kejriwal) ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ (Ahmedabad) ಆಟೋರಿಕ್ಷಾ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು ದೆಹಲಿಯಲ್ಲಿ ತಮ್ಮ ಪಕ್ಷಕ್ಕೆ ಸಹಾಯ ಮಾಡಿದ ರೀತಿಯಲ್ಲಿ ತಮ್ಮ ಪ್ರಯಾಣಿಕರಲ್ಲಿ ಅದನ್ನು ಪ್ರಚಾರ ಮಾಡುವ ಮೂಲಕ ಗುಜರಾತ್‌ನಲ್ಲಿ ಎಎಪಿ ಗೆಲ್ಲಲು ಸಹಾಯ ಮಾಡುವಂತೆ ಒತ್ತಾಯಿಸಿದರು. ಕೇಜ್ರಿವಾಲ್ ಅವರ ಸಂವಾದದ ನಂತರ ಸಭಿಕರಲ್ಲಿ ಒಬ್ಬ ಆಟೋ ಡ್ರೈವರ್ ನನ್ನ ಮನೆಗೆ ಊಟಕ್ಕೆ ಬನ್ನಿ ಎಂದು ಕೇಜ್ರಿವಾಲ್ ಅವರನ್ನು ಆಮಂತ್ರಿಸಿದ್ದಾರೆ. ಈ ಆಮಂತ್ರಣವನ್ನು ಕೇಜ್ರಿವಾಲ್ ಅವರು ತಕ್ಷಣವೇ ಸ್ವೀಕರಿಸಿ, ಆಯ್ತು ಊಟಕ್ಕೆ ಬರುವೆ ಎಂದಿದ್ದಾರೆ. ಎಎಪಿ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಹಂಚಿಕೊಂಡ ವಿಡಿಯೊದಲ್ಲಿ ಆಟೋ ಚಾಲಕ ಕೇಜ್ರಿವಾಲ್ ಅವರನ್ನು ಊಟಕ್ಕೆ ಆಹ್ವಾನಿಸುತ್ತಿರುವುದನ್ನು ಕಾಣಬಹುದು.

ನಾನು ನಿಮ್ಮ ದೊಡ್ಡ ಅಭಿಮಾನಿ. ಪಂಜಾಬ್‌ನ ಆಟೋ ಡ್ರೈವರ್‌ನ ಮನೆಯಲ್ಲಿ ನೀವು ರಾತ್ರಿ ಊಟ ಮಾಡುತ್ತಿರುವ ವಿಡಿಯೊವನ್ನು ನಾನು ಸಾಮಾಜಿಕ ಮಾಧ್ಯಮದಲ್ಲಿ ನೋಡಿದ್ದೇನೆ. ನೀವೂ ನನ್ನ ಮನೆಗೆ ಊಟಕ್ಕೆ ಬರುತ್ತೀರಾ?” ಎಂದು ಕೇಳುತ್ತಾನೆ. ಇದಕ್ಕೆ ಕೇಜ್ರಿವಾಲ್ ಖಂಡಿತಾ, ನಾನು ನನ್ನ ಪಕ್ಷದ ಇಬ್ಬರು ಪಕ್ಷದ ಸಹೋದ್ಯೋಗಿಗಳೊಂದಿಗೆ ಭೋಜನಕ್ಕೆ ಬರುವುದಾಗಿ ಹೇಳಿದ್ದಾರೆ.

ನಾವು ಎಷ್ಟು ಗಂಟೆಗೆ ಬರಬೇಕು? ನಿಮ್ಮ ಆಟೋದಲ್ಲಿ ನನ್ನನ್ನು ಕರೆದುಕೊಂಡು ಹೋಗಲು ನೀವು ಇಂದು ರಾತ್ರಿ ನನ್ನ ಹೋಟೆಲ್‌ಗೆ ಬರುತ್ತೀರಾ? ಎಂದು ಕೇಜ್ರಿವಾಲ್ ಅವರಲ್ಲಿ ಕೇಳಿದಾಗ ಆಟೋ ಚಾಲಕ ಹೂಂ ಅಂದಿದ್ದಾರೆ. ರಾತ್ರಿ 8 ಗಂಟೆಗೆ ಭೋಜನವನ್ನು ನಿಗದಿಪಡಿಸಲಾಗಿದೆ.

ಇದಾದ ನಂತರ  ಕೇಜ್ರಿವಾಲ್ ಅವರು ಇಂದು ಅಹಮದಾಬಾದ್‌ನಲ್ಲಿ ಪೌರ ಕಾರ್ಮಿಕರ ಇದೇ ರೀತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.

ಕಳೆದ ಕೆಲವು ತಿಂಗಳುಗಳ ಹಿಂದೆ ಗುಜರಾತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ,  ಕೇಜ್ರಿವಾಲ್ ಅವರು ಮಹಿಳೆಯರು ಮತ್ತು ನಿರುದ್ಯೋಗಿ ಯುವಕರಿಗೆ ಭತ್ಯೆಗಳು, ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಮತ್ತು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಸೇರಿದಂತೆ ಹಲವಾರು “ಘೋಷಣೆ”ಗಳನ್ನು ಮಾಡಿದ್ದರು.

Published On - 7:36 pm, Mon, 12 September 22

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!
ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!
ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ?
ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ?
ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ
ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್