AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತ ಯಾಚಿಸಲಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ವಿಪಕ್ಷಗಳಿಗೆ ಸೆಡ್ಡು ಹೊಡೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.

ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತ ಯಾಚಿಸಲಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
TV9 Web
| Edited By: |

Updated on:Aug 29, 2022 | 8:15 AM

Share

ದೆಹಲಿ: ವಿಪಕ್ಷಗಳಿಗೆ ಸೆಡ್ಡು ಹೊಡೆದಿರುವ ದೆಹಲಿ ಆಡಳಿತರೂಢ ಪಕ್ಷ ಆಮ್ ಆದ್ಮಿ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರು ಇಂದು (ಆ.29) ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭಗೊಳ್ಳಲಿರುವ ವಿಧಾನಸಭೆ ಅಧಿವೇಶನದಲ್ಲಿ ಆಮ್​ ಆದ್ಮಿ ಪಕ್ಷ ವಿಶ್ವಾಸ ನಿರ್ಣಯವನ್ನು ಮಂಡಿಸಲಿದೆ. ಬಿಜೆಪಿ ಪಕ್ಷವು ಪಕ್ಷದ ಯಾವುದೇ ಶಾಸಕರನ್ನು ಸೆಳೆಯಲು ವಿಫಲವಾಗಿದೆ ಎಂಬೂದನ್ನು ಸಾಬೀತುಪಡಿಸಲು ಆಮ್​ ಆದ್ಮಿ ಪಕ್ಷ ಈ ನಿರ್ಧಾರ ಕೈಗೊಂಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ವಿಧಾನಸಭೆಯಲ್ಲಿ ಭಾಷಣ ಮಾಡುತ್ತಾ, ನಮ್ಮ ಪಕ್ಷದ ಶಾಸಕರನ್ನು ಸೆಳೆಯುವಲ್ಲ ಬಿಜೆಪಿ ವಿಫಲವಾಗಿದೆ ಎಂದು ದೆಹಲಿ ನಿವಾಸಿಗಳಿಗೆ ಸಾಬೀತುಪಡಿಸಲು ಸದನದಲ್ಲಿ ‘ವಿಶ್ವಾಸ ನಿರ್ಣಯ’ ತರುವುದಾಗಿ ಹೇಳಿದರು. ಆದರೆ ಎಎಪಿಗೆ ಜಾಟಿ ಬೀಸಿದ ವಿರೋಧ ಪಕ್ಷ ಬಿಜೆಪಿ, ದೆಹಲಿಯ ಆಡಳಿತ ಪಕ್ಷವು ಸಿಬಿಐ ತನಿಖೆಯಲ್ಲಿರುವ ಅಬಕಾರಿ ನೀತಿಯ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವ ಬದಲು ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದೆ.

“ಬಿಜೆಪಿಯು ಹಲವಾರು ಶಾಸಕರನ್ನು ಸೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ. ನನಗೆ ದೂರವಾಣಿ ಕರೆಗಳು ಬಂದವು, ಎಲ್ಲವೂ ಸರಿಯಾಗಿದೆಯೇ ಎಂದು ಜನರು ನನ್ನನ್ನು ಕೇಳಿದರು. ಬಿಜೆಪಿಯ ಆಪರೇಷನ್ ಕಮಲವು ದೆಹಲಿಯಲ್ಲಿ ‘ಆಪರೇಷನ್ ಕೆಸರು’ ಆಗಿ ಮಾರ್ಪಟ್ಟಿದೆ ಎಂಬುದನ್ನು ಜನರಿಗೆ ತೋರಿಸಲು ನಾನು ಸದನದಲ್ಲಿ ವಿಶ್ವಾಸ ನಿರ್ಣಯವನ್ನು ತರಲು ಬಯಸುತ್ತೇನೆ” ಎಂದು ಕೇಜ್ರಿವಾಲ್ ಶುಕ್ರವಾರ ಸದನದಲ್ಲಿ ಹೇಳಿದ್ದರು.

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ ಅವರು ಶುಕ್ರವಾರ ಮಾತನಾಡಿ, ಆಡಳಿತ ಪಕ್ಷವು ಸದನದಲ್ಲಿ ಬಹುಮತವನ್ನು ಕಳೆದುಕೊಂಡಿದೆ ಎಂದು ಪರಿಗಣಿಸಿದಾಗ ಸಾಮಾನ್ಯವಾಗಿ ಪ್ರತಿಪಕ್ಷಗಳು ಸದನದಲ್ಲಿ ಅವಿಶ್ವಾಸ ನಿರ್ಣಯವನ್ನು ತರುತ್ತವೆ. ಆದರೆ, ಆಡಳಿತ ಪಕ್ಷವೂ ಸದನದಲ್ಲಿ ವಿಶ್ವಾಸಮತ ಯಾಚನೆ ತರಬಹುದು ಎಂದರು.

ಸರಕಾರವು ಯಾವಾಗ ಬೇಕಾದರೂ ಸದನದಲ್ಲಿ ವಿಶ್ವಾಸಮತ ಯಾಚನೆಯನ್ನು ತರಬಹುದು. ಸಾಮಾನ್ಯವಾಗಿ ಸದನದಲ್ಲಿ ಆಡಳಿತ ಪಕ್ಷದ ಬಹುಮತ ಅನುಮಾನವಾದಾಗ ಅವಿಶ್ವಾಸ ನಿರ್ಣಯ ಮಂಡಿಸಲಾಗುತ್ತದೆ. ಸದನದ ಒಟ್ಟು 70 ಸದಸ್ಯರಲ್ಲಿ ಎಎಪಿ 62 ಸದಸ್ಯರನ್ನು ಹೊಂದಿರುವುದರಿಂದ ಅದು ಸುಲಭವಾಗಿ ತನ್ನ ಬಹುಮತವನ್ನು ಸ್ಥಾಪಿಸುತ್ತದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Mon, 29 August 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ