AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸ್ಥಾನ ವಂಚಿತ ಶಾಸಕರಿಂದ ಬಿಡಿಎ ಚೇರ್ಮನ್ ಹುದ್ದೆಗೆ ಶುರುವಾಯ್ತು ಲಾಬಿ: ರೇಸ್​ನಲ್ಲಿ ಯಾರ್ಯಾರು?

ಸಚಿವ ಸ್ಥಾನ ವಂಚಿತ ಶಾಸಕರು ಮತ್ತೊಂದು ಮಹತ್ವದ ಹುದ್ದೆಗೆ ಪೈಪೋಟಿಗಿಳಿದಿದ್ದು, ಕಾಂಗ್ರೆಸ್​ಗೆ ಈಗ ಮತ್ತೊಂದು ಒಳಬೇಗುದಿ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ.

ಸಚಿವ ಸ್ಥಾನ ವಂಚಿತ ಶಾಸಕರಿಂದ ಬಿಡಿಎ ಚೇರ್ಮನ್ ಹುದ್ದೆಗೆ ಶುರುವಾಯ್ತು ಲಾಬಿ: ರೇಸ್​ನಲ್ಲಿ ಯಾರ್ಯಾರು?
ರಮೇಶ್ ಬಿ. ಜವಳಗೇರಾ
|

Updated on:May 29, 2023 | 2:56 PM

Share

ಮುಖ್ಯಾಂಶಗಳು

  • ಸಚಿವ ಸ್ಥಾನ‌ ಕಸರತ್ತು ಮುಗಿದ ಬೆನ್ನಲ್ಲೇ ಇದೀಗ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಲಾಬಿ
  • ಬಿಡಿಎ ಚೇರ್ಮನ್ ಹುದ್ದಗೆ ಕಾಂಗ್ರೆಸ್ ಶಾಸಕರಲ್ಲಿ ಶುರುವಾಯ್ತು ಪೈಪೋಟಿ
  • ಡಿಕೆ ಶಿವಕುಮಾರ್ ಮೇಲೆ ಒತ್ತಡ ಹಾಕುತ್ತಿರುವ ಶಾಸಕರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ನೂತನ ಕಾಂಗ್ರೆಸ್‌ ಸರ್ಕಾರದ(Congress Government) ಸಂಪುಟ ವಿಸ್ತರಣೆಯಾಗಿದೆ (Karnataka Cabinet expansion). ಮುಖ್ಯಮಂತ್ರಿ, ಸೇರಿ ಒಟ್ಟು 34 ಜನರ ಸಂಪುಟ ರಚನೆಯಾಗಿದೆ. ಸಾಮಾಜಿಕ ನ್ಯಾಯ. ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿಯನ್ನು ಫೈನಲ್ ಮಾಡಿದೆ. ಹಳಬರು ಹಾಗೂ ಹೊಸಬರನ್ನು ಒಳಗೊಂಡು ಸಿದ್ದರಾಮಯ್ಯನವ ಸಂಪುಟ ಫುಲ್ ಫಿಲ್ ಆಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ವಂಚಿತ ಶಾಸಕರು ಈಗ ಪ್ರಮುಖ ನಿಗಮ ಹಾಗೂ ಮಂಡಳಿಗಳ ಮೇಲೆ ಕಣ್ಣು ಬಿದ್ದಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (Bangalore Development Authority) ಅಧ್ಯಕ್ಷ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಕಾಂಗ್ರೆಸ್ ಈಗ ಮತ್ತೊಂದು ಒಳಬೇಗುದಿ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ.

ಇದನ್ನೂ ಓದಿ: ಖಾತೆ ನೀಡಿದ ಬೆನ್ನಲ್ಲೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಯಾರಿಗೆ ಯಾವುದು? ಇಲ್ಲಿದೆ ವಿವರ

ಹೌದು.. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಕೆಲ ಶಾಸಕರು ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಟಿಬಿ ಜಯಚಂದ್ರ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಜಯಚಂದ್ರ, ಬಿಡಿಎ ಚೇರ್ಮನ್ ಹುದ್ದೆ ನಿಡುವಂತೆ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಬಿಡಿಎ ನೀಡದಿದ್ದರೆ ದೆಹಲಿ ವಿಶೇಷ ಪ್ರತಿನಿಧಿಯನ್ನಾಗಿಯಾದರೂ ಮಾಡಿ ಟಿ.ಬಿ ಜಯಚಂದ್ರ ಮನವಿ ಮಾಡಿದ್ದಾರೆ. ಆದ್ರೆ, ಇತ್ತ ಸಿದ್ದರಾಮಯ್ಯನವರ ಆಪ್ತ ಶಾಸಕ ಬಸವರಾಜ ರಾಯರೆಡ್ಡಿ, ದೆಹಲಿ ವಿಶೇಷ ಪ್ರತಿನಿಧಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಜಯಚಂದ್ರ ಜೊತೆಗೆ ಬೆಂಗಳೂರಿನ ವಿಜಯನಗರ ಶಾಸಕ  ಪ್ರಿಯಾಕೃಷ್ಣ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್​ಎ ಹ್ಯಾರಿಸ್ ಸಹ ಬಿಡಿಎ ಚೇರ್ಮನ್ ​ ಬೇಕೆಂದು ಪಟ್ಟು ಹಿಡಿದಿದ್ದಾರೆ. ಬಿಡಿಎ ಚೇರ್ಮನ್ ಹುದ್ದೆಯನ್ನು ಸ್ಥಳೀಯ ಶಾಸಕರಿಗೇ ನೀಡಿ ಎಂದು ಬೆಂಗಳೂರು ಶಾಸಕರು ಡಿಕೆಶಿವಕುಮಾರ್ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸದ್ಯಕ್ಕೆ ಮೂರ್ನಾಲ್ಕು ಶಾಸಕರು ರೇಸ್​​ನಲ್ಲಿ ಇದ್ದಾರೆ. ದಿನ ಕಳೆದಂತೆ ಯಾವೆಲ್ಲ ಶಾಸಕರು ತಮಗೂ ಬಿಡಿಎ ಬೇಕೆಂದು ಮುಂದೆ ಬರುತ್ತಾರೋ ಗೊತ್ತಿಲ್ಲ.

ಎಲ್ಲಾ ಸಂಪುಟ ಪೂರ್ಣ ಪ್ರಮಾಣವಾಗಿ ಸರ್ಕಾರ ಇನ್ನೇನು ಟೇಕ್​ ಆಫ್​ ಆಗಬೇಕೆನ್ನುವಷ್ಟರಲ್ಲೇ ಇದೀಗ ನಿಗಮ ಮಂಡಳಿ ನೇಮಕ ಕಾಂಗ್ರೆಸ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂದಿನ ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾರ್ಯಕರ್ತರಿಗೆ ನಿಗಮ ಮಂಡಗಳಿಗಳನ್ನು ನಿಡಬೇಕೋ ಅಥವಾ ಶಾಸಕರಿಗೆ ನೀಡಬೇಕೋ ಎಂದು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ.   ಇನ್ನು ಪ್ರಬಲ ನಿಗಮ ಮಂಡಳಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ತಮ್ಮ ಆಪ್ತರಿಗೆ ಕೊಡಿಸಲು ಮತ್ತೊಂದು ಪೈಪೋಟಿಗಿಳಿದರೂ ಅಚ್ಚರಿ ಪಡಬೇಕಿಲ್ಲ. ಹೀಗಾಗಿ ಕಾಂಗ್ರೆಸ್​ಗೆ ಈಗ ಮತ್ತೊಂದು ಒಳಬೇಗುದಿ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಅಂತಿಮವಾಗಿ ಬಿಡಿಎ ಚೇರ್ಮನ್ ಯಾರ ಪಾಲಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಮತ್ತಷ್ಟು ರಾಜ್ಯ ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:56 pm, Mon, 29 May 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ