AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಾಗ್ದಾಳಿ

ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಆರ್. ಧ್ರುವನಾರಾಯಣ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಾಗ್ದಾಳಿ
ಸಿಟಿ ರವಿ, ಆರ್ ಧ್ರುವನಾರಾಯಣ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 22, 2021 | 3:22 PM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಿ.ಟಿ. ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ. ಅವರು 4 ಬಾರಿ ಶಾಸಕ, 2 ಬಾರಿ ಸಚಿವರಾಗಿದ್ದರೂ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಬುಧವಾರ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಆರ್. ಧ್ರುವನಾರಾಯಣ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಬೆಂಕಿ ಹಚ್ಚುವ ಮನಸ್ಥಿತಿಯ ಪಕ್ಷವೆಂದು ಸಿ.ಟಿ ರವಿ ಆರೋಪಿಸಿದ್ದಾರೆ. ನಿಮಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಬಿಜೆಪಿ ಅಂದ್ರೆ ಬೆಂಕಿ ಹಚ್ಚುವ ಜನರ ಪಕ್ಷವೆಂದು ಹೇಳಬೇಕಾಗುತ್ತೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ 4 ತಿಂಗಳೊಳಗೆ 43 ಕೇಸ್​ ಹಿಂಪಡೆದಿದ್ದರು. 43 ಕೇಸ್​ಗಳ ಪೈಕಿ ಮೊದಲ ಪ್ರಕರಣವೇ ಸಿ.ಟಿ. ರವಿ ಅವರದು. ಬಿಜೆಪಿ ಶಾಸಕರ ಬೆಂಕಿ, ದೌರ್ಜನ್ಯ ಪ್ರಕರಣಗಳನ್ನು ಹಿಂಪಡೆದಿದ್ದರು. ಇದರಲ್ಲೇ ಗೊತ್ತಾಗುತ್ತೆ ಯಾರು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಯಾರು, ಯಾವ ಕೇಸ್​ ಹಿಂಪಡೆದರು ಎಂದು ಜನರಿಗೆ ಗೊತ್ತಿದೆ ಎಂದು ಧ್ರುವ ನಾರಾಯಣ್ ಟೀಕಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ 2 ವರ್ಷ ಜೈಲಿನಲ್ಲಿದ್ದರು. ನಮ್ಮ ರಾಜ್ಯದಲ್ಲಿ ಸಿಎಂ, ಸಚಿವರಾಗಿದ್ದವರು ಜೈಲುಪಾಲಾಗಿದ್ದರು. ನಿಮ್ಮ ಮನೆಯ ವಾತಾವರಣವೇ ಕೊಳೆತು ನಾರುತ್ತಿದೆ ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್​ ಬಗ್ಗೆ ನಿಮಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಭಿಕ್ಷಾಟನೆ; ಕ್ಷಮೆಯಾಚಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ

ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆಯ ಹಿಂದೆ ಕಾಂಗ್ರೆಸ್ ಪಕ್ಷ ಇದೆ, ಡಿಕೆ ಶಿವಕುಮಾರ್ ಈ ಪ್ರಕರಣದ ನಿರ್ಮಾಪಕ, ನಿರ್ದೇಶಕ; ಸಿಟಿ ರವಿ ಹೇಳಿಕೆ

Published On - 3:22 pm, Wed, 22 December 21

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ