AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಾಗ್ದಾಳಿ

ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಆರ್. ಧ್ರುವನಾರಾಯಣ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಾಗ್ದಾಳಿ
ಸಿಟಿ ರವಿ, ಆರ್ ಧ್ರುವನಾರಾಯಣ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 22, 2021 | 3:22 PM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಿ.ಟಿ. ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ. ಅವರು 4 ಬಾರಿ ಶಾಸಕ, 2 ಬಾರಿ ಸಚಿವರಾಗಿದ್ದರೂ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಬುಧವಾರ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಆರ್. ಧ್ರುವನಾರಾಯಣ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಬೆಂಕಿ ಹಚ್ಚುವ ಮನಸ್ಥಿತಿಯ ಪಕ್ಷವೆಂದು ಸಿ.ಟಿ ರವಿ ಆರೋಪಿಸಿದ್ದಾರೆ. ನಿಮಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಬಿಜೆಪಿ ಅಂದ್ರೆ ಬೆಂಕಿ ಹಚ್ಚುವ ಜನರ ಪಕ್ಷವೆಂದು ಹೇಳಬೇಕಾಗುತ್ತೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ 4 ತಿಂಗಳೊಳಗೆ 43 ಕೇಸ್​ ಹಿಂಪಡೆದಿದ್ದರು. 43 ಕೇಸ್​ಗಳ ಪೈಕಿ ಮೊದಲ ಪ್ರಕರಣವೇ ಸಿ.ಟಿ. ರವಿ ಅವರದು. ಬಿಜೆಪಿ ಶಾಸಕರ ಬೆಂಕಿ, ದೌರ್ಜನ್ಯ ಪ್ರಕರಣಗಳನ್ನು ಹಿಂಪಡೆದಿದ್ದರು. ಇದರಲ್ಲೇ ಗೊತ್ತಾಗುತ್ತೆ ಯಾರು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಯಾರು, ಯಾವ ಕೇಸ್​ ಹಿಂಪಡೆದರು ಎಂದು ಜನರಿಗೆ ಗೊತ್ತಿದೆ ಎಂದು ಧ್ರುವ ನಾರಾಯಣ್ ಟೀಕಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ 2 ವರ್ಷ ಜೈಲಿನಲ್ಲಿದ್ದರು. ನಮ್ಮ ರಾಜ್ಯದಲ್ಲಿ ಸಿಎಂ, ಸಚಿವರಾಗಿದ್ದವರು ಜೈಲುಪಾಲಾಗಿದ್ದರು. ನಿಮ್ಮ ಮನೆಯ ವಾತಾವರಣವೇ ಕೊಳೆತು ನಾರುತ್ತಿದೆ ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್​ ಬಗ್ಗೆ ನಿಮಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಭಿಕ್ಷಾಟನೆ; ಕ್ಷಮೆಯಾಚಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ

ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆಯ ಹಿಂದೆ ಕಾಂಗ್ರೆಸ್ ಪಕ್ಷ ಇದೆ, ಡಿಕೆ ಶಿವಕುಮಾರ್ ಈ ಪ್ರಕರಣದ ನಿರ್ಮಾಪಕ, ನಿರ್ದೇಶಕ; ಸಿಟಿ ರವಿ ಹೇಳಿಕೆ

Published On - 3:22 pm, Wed, 22 December 21

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ