AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಾಗ್ದಾಳಿ

ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಆರ್. ಧ್ರುವನಾರಾಯಣ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಾಗ್ದಾಳಿ
ಸಿಟಿ ರವಿ, ಆರ್ ಧ್ರುವನಾರಾಯಣ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 22, 2021 | 3:22 PM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಿ.ಟಿ. ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ. ಅವರು 4 ಬಾರಿ ಶಾಸಕ, 2 ಬಾರಿ ಸಚಿವರಾಗಿದ್ದರೂ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಬುಧವಾರ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಆರ್. ಧ್ರುವನಾರಾಯಣ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಬೆಂಕಿ ಹಚ್ಚುವ ಮನಸ್ಥಿತಿಯ ಪಕ್ಷವೆಂದು ಸಿ.ಟಿ ರವಿ ಆರೋಪಿಸಿದ್ದಾರೆ. ನಿಮಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಬಿಜೆಪಿ ಅಂದ್ರೆ ಬೆಂಕಿ ಹಚ್ಚುವ ಜನರ ಪಕ್ಷವೆಂದು ಹೇಳಬೇಕಾಗುತ್ತೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ 4 ತಿಂಗಳೊಳಗೆ 43 ಕೇಸ್​ ಹಿಂಪಡೆದಿದ್ದರು. 43 ಕೇಸ್​ಗಳ ಪೈಕಿ ಮೊದಲ ಪ್ರಕರಣವೇ ಸಿ.ಟಿ. ರವಿ ಅವರದು. ಬಿಜೆಪಿ ಶಾಸಕರ ಬೆಂಕಿ, ದೌರ್ಜನ್ಯ ಪ್ರಕರಣಗಳನ್ನು ಹಿಂಪಡೆದಿದ್ದರು. ಇದರಲ್ಲೇ ಗೊತ್ತಾಗುತ್ತೆ ಯಾರು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಯಾರು, ಯಾವ ಕೇಸ್​ ಹಿಂಪಡೆದರು ಎಂದು ಜನರಿಗೆ ಗೊತ್ತಿದೆ ಎಂದು ಧ್ರುವ ನಾರಾಯಣ್ ಟೀಕಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ 2 ವರ್ಷ ಜೈಲಿನಲ್ಲಿದ್ದರು. ನಮ್ಮ ರಾಜ್ಯದಲ್ಲಿ ಸಿಎಂ, ಸಚಿವರಾಗಿದ್ದವರು ಜೈಲುಪಾಲಾಗಿದ್ದರು. ನಿಮ್ಮ ಮನೆಯ ವಾತಾವರಣವೇ ಕೊಳೆತು ನಾರುತ್ತಿದೆ ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್​ ಬಗ್ಗೆ ನಿಮಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಭಿಕ್ಷಾಟನೆ; ಕ್ಷಮೆಯಾಚಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ

ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆಯ ಹಿಂದೆ ಕಾಂಗ್ರೆಸ್ ಪಕ್ಷ ಇದೆ, ಡಿಕೆ ಶಿವಕುಮಾರ್ ಈ ಪ್ರಕರಣದ ನಿರ್ಮಾಪಕ, ನಿರ್ದೇಶಕ; ಸಿಟಿ ರವಿ ಹೇಳಿಕೆ

Published On - 3:22 pm, Wed, 22 December 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ