AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಾಗ್ದಾಳಿ

ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಆರ್. ಧ್ರುವನಾರಾಯಣ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಾಗ್ದಾಳಿ
ಸಿಟಿ ರವಿ, ಆರ್ ಧ್ರುವನಾರಾಯಣ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 22, 2021 | 3:22 PM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಿ.ಟಿ. ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ. ಅವರು 4 ಬಾರಿ ಶಾಸಕ, 2 ಬಾರಿ ಸಚಿವರಾಗಿದ್ದರೂ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಬುಧವಾರ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಆರ್. ಧ್ರುವನಾರಾಯಣ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಬೆಂಕಿ ಹಚ್ಚುವ ಮನಸ್ಥಿತಿಯ ಪಕ್ಷವೆಂದು ಸಿ.ಟಿ ರವಿ ಆರೋಪಿಸಿದ್ದಾರೆ. ನಿಮಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಬಿಜೆಪಿ ಅಂದ್ರೆ ಬೆಂಕಿ ಹಚ್ಚುವ ಜನರ ಪಕ್ಷವೆಂದು ಹೇಳಬೇಕಾಗುತ್ತೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ 4 ತಿಂಗಳೊಳಗೆ 43 ಕೇಸ್​ ಹಿಂಪಡೆದಿದ್ದರು. 43 ಕೇಸ್​ಗಳ ಪೈಕಿ ಮೊದಲ ಪ್ರಕರಣವೇ ಸಿ.ಟಿ. ರವಿ ಅವರದು. ಬಿಜೆಪಿ ಶಾಸಕರ ಬೆಂಕಿ, ದೌರ್ಜನ್ಯ ಪ್ರಕರಣಗಳನ್ನು ಹಿಂಪಡೆದಿದ್ದರು. ಇದರಲ್ಲೇ ಗೊತ್ತಾಗುತ್ತೆ ಯಾರು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಯಾರು, ಯಾವ ಕೇಸ್​ ಹಿಂಪಡೆದರು ಎಂದು ಜನರಿಗೆ ಗೊತ್ತಿದೆ ಎಂದು ಧ್ರುವ ನಾರಾಯಣ್ ಟೀಕಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ 2 ವರ್ಷ ಜೈಲಿನಲ್ಲಿದ್ದರು. ನಮ್ಮ ರಾಜ್ಯದಲ್ಲಿ ಸಿಎಂ, ಸಚಿವರಾಗಿದ್ದವರು ಜೈಲುಪಾಲಾಗಿದ್ದರು. ನಿಮ್ಮ ಮನೆಯ ವಾತಾವರಣವೇ ಕೊಳೆತು ನಾರುತ್ತಿದೆ ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್​ ಬಗ್ಗೆ ನಿಮಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಭಿಕ್ಷಾಟನೆ; ಕ್ಷಮೆಯಾಚಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ

ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆಯ ಹಿಂದೆ ಕಾಂಗ್ರೆಸ್ ಪಕ್ಷ ಇದೆ, ಡಿಕೆ ಶಿವಕುಮಾರ್ ಈ ಪ್ರಕರಣದ ನಿರ್ಮಾಪಕ, ನಿರ್ದೇಶಕ; ಸಿಟಿ ರವಿ ಹೇಳಿಕೆ

Published On - 3:22 pm, Wed, 22 December 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ