ಭೀಮಾನಾಯ್ಕ್, ಪರಮೇಶ್ವರ್ ನಾಯ್ಕ್ ನಡುವೆ ಜಟಾಪಟಿ: ಕೆಪಿಎಸ್‌ಸಿ ಸದಸ್ಯನ ನೇಮಕ ಜಟಿಲ

ಮಾಜಿ ಶಾಸಕ ಪಿ.ಟಿ.ಪರಮೇಶ್ವರ್‌ ನಾಯ್ಕ್‌ ಮನವಿ ಮೇರೆಗೆ ಶಿರಗಾನಹಳ್ಳಿ ಶಾಂತನಾಯ್ಕ್‌ ಅವರನ್ನು ಕೆಪಿಎಸ್​ಸಿ ಸದಸ್ಯರನ್ನಾಗಿ ನೇಮಿಸಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ, ಶಾಂತನಾಯಕ್ ನೇಮಕಾತಿ ಬೇಡವೆಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ಹರಪನಹಳ್ಳಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೊಟ್ರೇಶ್ ದೂರು ನೀಡಿದ್ದರು. ಮಾಜಿ ಶಾಸಕ ಭೀಮಾನಾಯ್ಕ್‌ ಇದರ ಹಿಂದಿದ್ದಾರೆ. ಮಾಜಿ ಶಾಸಕರ ಜಟಾಪಟಿ ಹಿನ್ನೆಲೆ ಕೆಪಿಎಸ್​ಸಿ ಸದಸ್ಯನ ನೇಮಕಾತಿ ಕಾಂಗ್ರೆಸ್​ಗೆ ಜಟಿಲವಾಗಿದೆ.

ಭೀಮಾನಾಯ್ಕ್, ಪರಮೇಶ್ವರ್ ನಾಯ್ಕ್ ನಡುವೆ ಜಟಾಪಟಿ: ಕೆಪಿಎಸ್‌ಸಿ ಸದಸ್ಯನ ನೇಮಕ ಜಟಿಲ
ಭೀಮಾನಾಯ್ಕ್, ಪರಮೇಶ್ವರ್ ನಾಯ್ಕ್ ನಡುವೆ ಜಟಾಪಟಿ: ಕೆಪಿಎಸ್‌ಸಿ ಸದಸ್ಯ ಸ್ಥಾನಕ್ಕೆ ಶಾಂತನಾಯಕ್ ಅವರ ನೇಮಕಾತಿಗೆ ತಡೆ
Edited By: Rakesh Nayak Manchi

Updated on: Jan 20, 2024 | 5:26 PM

ಬೆಂಗಳೂರು, ಜ.20: ಕರ್ನಾಟಕ ಲೋಕಸೇವಾ ಆಯೋಗದ (KPSC) ಸದಸ್ಯ ಸ್ಥಾನಕ್ಕೆ ಶಿರಗಾನಹಳ್ಳಿ ಶಾಂತನಾಯಕ್ ಎನ್ ಅವರ ನೇಮಕಾತಿಯನ್ನು ರಾಜ್ಯ ಸರ್ಕಾರ ತಡೆ ನೀಡಿದೆ. ಇದಕ್ಕೆ ಕಾರಣ, ಮಾಜಿ ಶಾಸಕರಾದ ಭೀಮಾನಾಯ್ಕ್‌ (Bhimanaik) ಮತ್ತು ಪಿ.ಟಿ.ಪರಮೇಶ್ವರ್‌ ನಾಯ್ಕ್‌ (PT Parameshwar Naik) ನಡುವಿನ ಜಟಾಪಟಿ. ಶಾಂತನಾಯ್ಕ್‌ ಅವರನ್ನು ಕೆಪಿಎಸ್​​ಸಿ ಸದಸ್ಯರನ್ನಾಗಿ ನೇಮಿಸುವಂತೆ ಪರಮೇಶ್ವರ್ ಮನವಿ ಮಾಡಿದರೆ, ಇತ್ತ, ಶಾಂತನಾಯ್ಕ್ ನೇಮಕ ಮಾಡದಂತೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕೋಟ್ರೇಶ್ ಮೂಲಕ ಭಿಮಾನಾಯ್ಕ್ ದೂರು ನೀಡಿದ್ದಾರೆ.

ಶಿರಗಾನಹಳ್ಳಿ ಶಾಂತನಾಯ್ಕ್ ಪರ ನಿಂತಿರುವ ಮಾಜಿ ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ಅವರು ಶಾಂತನಾಯಕ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದ್ಯಸರನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದರು. ಅದರಂತೆ ರಾಜ್ಯ ಸರ್ಕಾರ ಶಾಂತನಾಯ್ಕ್ ಅವರನ್ನು ಕೆಪಿಎಸ್​ಸಿ ಸದಸ್ಯರನ್ನಾಗಿ ನೇಮಿಸಲು ಮುಂದಾಗಿತ್ತು.

ಈ ನಡುವೆ, ಹರಪನಹಳ್ಳಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎನ್.ಕೊಟ್ರೇಶ್ ಅವರು ಶಾಂತನಾಯಕ್ ನೇಮಕಾತಿ ತಡೆಯುವಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ದೂರು ನೀಡಿದ್ದಾರೆ. ಇದರ ಹಿಂದೆ ಮಾಜಿ ಶಾಸಕ ಭೀಮಾನಾಯ್ಕ್ ಇದ್ದಾರೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ, ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಭೀಮಾನಾಯ್ಕ್ ದೂರು ನೀಡಿದ್ದಾರೆ.

ಇದನ್ನೂ ಓದಿ: ವಲಸಿಗ ನಾಯಕರು ನೀತಿಗೆಟ್ಟವರಲ್ಲ, ಅವರಿಂದಾಗೇ ಕಾಂಗ್ರೆಸ್ ಪಕ್ಷದ ವರ್ಚಸ್ಸು ಹೆಚ್ಚಾಗಿದ್ದು: ಕೆಎಂ ಶಿವಲಿಂಗೇಗೌಡ, ಶಾಸಕ

ಶಾಂತನಾಯಕ್ ‌ನೇಮಕಾತಿ ತಡೆಯಬೇಕು ಎಂದು ದೂರಿನಲ್ಲಿ ಮನವಿ ಮಾಡಿದ ಭೀಮಾನಾಯ್ಕ್, ಶಾಂತನಾಯಕ್ ವಿರುದ್ಧ ವಿವಿಧ ಕ್ರಿಮಿನಲ್ ಆರೋಪಗಳಿವೆ. ಮೂಲತಃ ಬಿಜೆಪಿ ಹಾಗೂ ಸಂಘ ಪರಿವಾರದ ಹಿನ್ನೆಲೆಯಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋಲಲು ಪರೋಕ್ಷವಾಗಿ ಶಾಂತನಾಯಕ್ ಕಾರಣ ಎಂದು ಆರೋಪಿಸಿದ್ದಾರೆ.

ಶಾಂತನಾಯಕ್ ವಿರುದ್ಧ ಆರೋಪಿಸಿ ಸರ್ಕಾರದ ಕಾರ್ಯದರ್ಶಿ ಅಜಯ್ ನಾಗಭೂಷಣ್ ಅವರಿಗೆ ದೂರು ಸಲ್ಲಿಸಿದ್ದಾರೆ. ಭೀಮಾನಾಯ್ಕ್ ಮತ್ತು ಪರಮೇಶ್ವರ್ ನಾಯ್ಕ್ ನಡುವಿನ ಜಟಾಪಟಿಯಿಂದಾಗಿ ಕೆಪಿಎಸ್​ಸಿ ಸದಸ್ಯರ ನೇಮಕಾತಿಯಲ್ಲಿ ಮತ್ತಷ್ಟು ಗೊಂದಲ ಉಂಟಾಗಿದ್ದು, ಇದೇ ಕಾರಣಕ್ಕೆ ಶಾಂತನಾಯಕ್ ಅವರ ನೇಮಕಾತಿಯನ್ನು ತಡೆಹಿಡಿಯಲು ಸರ್ಕಾರ ಸೂಚನೆ ನೀಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us