AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸುಳಿವು ನೀಡಿದ ದಿಗ್ವಿಜಯ ಸಿಂಗ್

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ (Congress president) ಸ್ಪರ್ಧಿಸುವ ಸುಳಿವು ನೀಡಿದರೆ ದಿಗ್ವಿಜಯ ಸಿಂಗ್. ಅಶೋಕ್ ಗೆಹ್ಲೋಟ್, ಶಶಿ ತರೂರ್ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಹೊತ್ತಿನಲ್ಲೇ ನಾನು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸುಳಿವು ನೀಡಿದ ದಿಗ್ವಿಜಯ ಸಿಂಗ್
Digvijaya Singh
TV9 Web
| Edited By: |

Updated on:Sep 21, 2022 | 5:32 PM

Share

ದೆಹಲಿ: ಕಾಂಗ್ರೆಸ್ ಅಧ್ಯಕ್ಷರ ತೀವ್ರ ಸ್ಪರ್ಧೆ ನಡೆಯುತ್ತಿದ್ದು ಅಶೋಕ್ ಗೆಹ್ಲೋಟ್ ಮತ್ತು ಶಶಿ ತರೂರ್ ಅವರೊಂದಿಗೆ ಸ್ಪರ್ಧೆಗೆ ಸೇರುವ ಸುಳಿವು ನೀಡುವ ಮೂಲಕ ದಿಗ್ವಿಜಯ ಸಿಂಗ್ ಇಂದು ಕಾಂಗ್ರೆಸ್ ಅಧ್ಯಕ್ಷ (Congress president) ಸ್ಥಾನದ ಪೈಪೋಟಿಗೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮುಂಚೂಣಿಯಲ್ಲಿರುವ ಅಶೋಕ್ ಗೆಹ್ಲೋಟ್ ಅವರು ಅಧಿಕಾರ ವಹಿಸಿಕೊಂಡರೆ ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನದಿಂದ ನಿಸ್ಸಂಶಯವಾಗಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ರಾಜಸ್ಥಾನದ ಉದಯಪುರದಲ್ಲಿ ನಡೆದ ನಾಯಕತ್ವ ಸಭೆಯಲ್ಲಿ ಕಾಂಗ್ರೆಸ್ ಒಬ್ಬ ವ್ಯಕ್ತಿ, ಒಂದು ಹುದ್ದೆ ಹೊಂದಿರಬೇಕು ಎಂದು ನಿರ್ಧಾರವಾಗಿದೆ. ಆದರೆ ಗೆಹ್ಲೋಟ್ ಅವರು ಇಂದು ಒಂದಲ್ಲ ಮೂರು ಹುದ್ದೆಯನ್ನು ಹೊಂದಬಹುದು ಎಂದು ಹೇಳಿದರು, ಅವರು ತಮ್ಮ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಿಲ್ಲ ಎಂದು ಹೇಳಲಾಗಿದೆ.

ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎರಡು ಹುದ್ದೆಯನ್ನು ಹೊಂದಬಹುದೇ ಎಂಬ ಬಗ್ಗೆ, ದಿಗ್ವಿಜಯ ಸಿಂಗ್ ಉದಯಪುರ ನಿರ್ಣಯವನ್ನು ಉಲ್ಲೇಖಿಸಿದರು. ಹಾಗಾಗಿ ಗೆಹ್ಲೋಟ್ ರಾಜೀನಾಮೆ ನೀಡಬೇಕೇ ಎಂದು ಕೇಳಿದಾಗ ಸಿಂಗ್ ಹೌದು ಎಂದು ಹೇಳಿದರು. ಎಲ್ಲರಿಗೂ ಸ್ಪರ್ಧಿಸುವ ಹಕ್ಕಿದೆ ಸೆ.30ರ ಸಂಜೆ (ನಾಮನಿರ್ದೇಶನಗಳ ಕೊನೆಯ ದಿನ) ಉತ್ತರ ನಿಮಗೆ ತಿಳಿಯುತ್ತದೆ ಎಂದು ಶ್ರೀ ಸಿಂಗ್ ಹೇಳಿದರು.ಈ ಸ್ಪರ್ಧೆಯಲ್ಲಿ ಗಾಂಧಿ ಕುಟುಂಬ ಇಲ್ಲ ಎಂಬುದಕ್ಕೆ ಯಾವುದೇ ಬೇಸರ ಇಲ್ಲ ಎಂದು ಅವರು ಎನ್‌ಡಿಟಿವಿಗೆ ತಿಳಿಸಿದರು.

ಯಾರು ಸ್ಪರ್ಧಿಸಲು ಬಯಸುತ್ತಾರೋ ಅವರು ಸ್ಪರ್ಧಿಸುವ ಹಕ್ಕು ಹೊಂದಿದ್ದಾರೆ. ಇಲ್ಲಿ ಒಬ್ಬರು ಸ್ಪರ್ಧಿಸುವುದಿಲ್ಲ ಎಂದಾಗ ಅವರನ್ನು ಬಲವಂತವಾಗಿ ಸ್ಪರ್ಧಿಸಿ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನಂತರ ರಾಜೀನಾಮೆ ನೀಡಿದ ಸ್ಥಾನಕ್ಕೆ ಮತ್ತೆ ಬರಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಕರೆತರಲು ಸಾಧ್ಯವಾಗದಿದ್ದರೆ ಮಾತ್ರ ಸ್ಪರ್ಧಿಸುವುದಾಗಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಗಾಂಧಿಯೇತರರನ್ನು ಉನ್ನತ ಸ್ಥಾನದಲ್ಲಿಟ್ಟುಕೊಂಡು ಕೆಲಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ನರಸಿಂಹರಾವ್ ಇದ್ದಾಗ ನಾವು ಕಾರ್ಯ ನಿರ್ವಹಿಸಲಿಲ್ಲವೇ?, ಈ ಹಿಂದೆ ಸೀತಾರಾಮ್ ಕೇಸರಿ ಇದ್ದಾಗ ಕೆಲಸ ಮಾಡಿರಲಿಲ್ಲವೇ ಎಂದು ಅವರು ಹೇಳಿದರು. ರಾಹುಲ್ ಗಾಂಧಿ ಕಾಂಗ್ರೆಸ್‌ನ ಮುಖವಾಗಿ ಉಳಿದಿದ್ದಾರೆ ಎಂದು ಸೂಚಿಸಿದಾಗ, ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ನಡೆಸುತ್ತಿರುವ 119 ಯಾತ್ರಿಗಳಲ್ಲಿ ಒಬ್ಬರು ಎಂದು ವ್ಯಂಗ್ಯವಾಡಿದರು.

Published On - 5:15 pm, Wed, 21 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ