AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡರನ್ನು ಮುಂದಿಟ್ಟುಕೊಂಡು ಭ್ರಷ್ಟಾಚಾರ: ಸಂಸದ ಜಿಎಂ ಸಿದ್ದೇಶ್ವರ್​ ವಿರುದ್ಧ ಕಾಂಗ್ರೆಸ್ ಮುಖಂಡ ದಿನೇಶ್ ಶೆಟ್ಟಿ ಆರೋಪ

ಬಿಜೆಪಿ‌ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್​​ ಜಾಧವ್ ಅವರನ್ನು ಮುಂದಿಟ್ಟುಕೊಂಡು ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ‌. ಇದನ್ನ ಕೆಲ ವರ್ಗಾವಣೆಯಾದ ಹಾಗೂ ನಿವೃತ್ತರಾದ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಮುಖಂಡರನ್ನು ಮುಂದಿಟ್ಟುಕೊಂಡು ಭ್ರಷ್ಟಾಚಾರ: ಸಂಸದ ಜಿಎಂ ಸಿದ್ದೇಶ್ವರ್​ ವಿರುದ್ಧ ಕಾಂಗ್ರೆಸ್ ಮುಖಂಡ ದಿನೇಶ್ ಶೆಟ್ಟಿ ಆರೋಪ
ಕಾಂಗ್ರೆಸ್ ಮುಖಂಡ ದಿನೇಶ್ ಶೆಟ್ಟಿ, ಸಂಸದ ಜಿ.ಎಂ.ಸಿದ್ದೇಶ್ವರ್​
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 16, 2023 | 9:08 PM

ದಾವಣಗೆರೆ: ಬಿಜೆಪಿ ಮುಖಂಡರನ್ನ ಮುಂದಿಟ್ಟುಕೊಂಡು ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರರಿಂದ (gm siddeshwar) ವ್ಯಾಪಕ‌ ಭ್ರಷ್ಟಾಚಾರ ಮಾಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಶೆಟ್ಟಿ (Dinesh Shetty) ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ‌ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್​​ ಜಾಧವ್ ಅವರನ್ನು ಮುಂದಿಟ್ಟುಕೊಂಡು ಸಂಸದ ಜಿಎಂ ಸಿದ್ದೇಶ್ವರ ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ‌. ಇದನ್ನ ಕೆಲ ವರ್ಗಾವಣೆಯಾದ ಹಾಗೂ ನಿವೃತ್ತರಾದ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ ಎಂದರು.

ನಿವೃತ್ತ ಅಧಿಕಾರಿಗಳು ನೀಡಿರುವ ಹಲವು ದಾಖಲೆಗಳು ನನ್ನ ಪೆನ್​ಡ್ರೈವ್​ನಲ್ಲಿದೆ. ಸಂಸದ ಜಿ.ಎಂ.ಸಿದ್ದೇಶ್ವರ್​​ ಜೊತೆಗೆ ಜಾಧವ್​ಗೂ ಪ್ರತ್ಯೇಕವಾಗಿ 10% ಕೊಡಬೇಕು. 1 ಕೆರೆ ಹೂಳೆತ್ತಲು 16 ಕೋಟಿ ರೂ. ಖರ್ಚು ಮಾಡಿದ್ದೇವೆಂದು ಹೇಳಿರುವುದೇ ಸಾಕ್ಷಿ. ದಾವಣಗೆರೆಗೆ ಕುಡಿವ ನೀರಿಗೆ ಆಸರೆಯಾದ ಕುಂದವಾಡ ಕೆರೆ 253 ಎಕರೆಯಿದೆ. ಕುಂದವಾಡ ಕೆರೆ ನಿರ್ವಹಣೆಗೆ 3.50 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳುತ್ತಾರೆ.

ಇದನ್ನೂ ಓದಿ: ನರಿಗಳು ಘೀಳಿಟ್ಟರೆ ಕಾಡಿನ ರಾಜ ಬೆದರುವುದು ಉಂಟಾ?: ವಿಪಕ್ಷಗಳ ಸಭೆಗೆ ಸಿಟಿ ರವಿ ವ್ಯಂಗ್ಯ

ಸ್ಮಾರ್ಟ್​ಸಿಟಿ ಯೋಜನೆಯಡಿ ಕೆರೆ ಹೂಳೆತ್ತಲು 16 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಇದೆಲ್ಲವೂ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್​ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ. ಅವರು ಭ್ರಷ್ಟಾಚಾರ ಮಾಡಿಲ್ಲವೆಂದರೆ ದಾವಣಗೆರೆ ದೇವತೆ ದುರ್ಗಾಂಭಿಕಾ ದೇವಸ್ಥಾನಕ್ಕೆ ಬಂದು ಗಂಟೆ ಬಡಿಯಲ್ಲಿ ಬಾರಿಸಲಿ. ಅಲ್ಲೇ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ದಿನೇಶ್ ಶೆಟ್ಟಿ ಸವಾಲು ಹಾಕಿದ್ದಾರೆ.

ಏಕರೂಪ ನಾಗರಿಕ ಕಾನೂನು ಜಾರಿಗೆ ಆಗ್ರಹ: ಸಹಿ ಸಂಗ್ರಹಕ್ಕೆ ಮುಂದಾದ‌ ಶ್ರೀರಾಮ ಸೇವೆ

ದೇಶದಲ್ಲಿ ಏಕರೂಪ ನಾಗರಿಕ ಕಾನೂನು ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಸಹಿ ಸಂಗ್ರಹಕ್ಕೆ ಶ್ರೀರಾಮ ಸೇವೆ ಮುಂದಾಗಿದೆ ಎಂದು ದಾವಣಗೆರೆಯಲ್ಲಿ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾಹಿತಿ ನೀಡಿದ್ದಾರೆ. ನಾಳೆಯಿಂದ ಇದೇ 28ರ ವರೆಗೆ ಸಹಿ ಸಂಗ್ರಹ ಅಭಿಯಾನ ನಡೆಯಲಿದೆ. ಇದಕ್ಕೆ ಶ್ರೀರಾಮ ಸೇನೆಯ ಪ್ರಮುಖ ಪ್ರಮೋದ ಮುತಾಲಿಕ ಚಾಲನೆ ನೀಡಲಿದ್ದಾರೆ ಎಂದರು.

ಇದನ್ನೂ ಓದಿ: ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುವೆ: ಮಾಜಿ ಸಚಿವ ವಿ ಸೋಮಣ್ಣ

ರಾಜ್ಯದಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನರ ಸಹಿ ಸಂಗ್ರಹಿಸಲಾಗುವುದು. ಹೀಗೆ ಸಂಗ್ರಹಿಸಿದ ಸಿಹಿಗಳ ದಾಖಲೆಗಳನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಲು‌ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:07 pm, Sun, 16 July 23

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ