AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಡಿಕೆ ಶಿವಕುಮಾರ್​ ಡಿನ್ನರ್ ಮೀಟಿಂಗ್​ನಲ್ಲಿ ಪರಿಷತ್ ಸದಸ್ಯರ ಅಸಮಾಧಾನ

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ಈ ನಿಟ್ಟಿನಲ್ಲಿ ಮೂರು ಪಕ್ಷಗಳು ತಮ್ಮ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿವೆ. ಇದರ ಮಧ್ಯೆ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್​ ಒಂದರಲ್ಲಿ ವಿಧಾನಪರಿಷತ್​ನ ಕಾಂಗ್ರೆಸ್ ಸದಸ್ಯರ ಜೊತೆ ಡಿಸಿಎಂ ಡಿಕೆ ಶಿವಕುಮಾರ್​ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ಈ ವೇಳೆ ಅಸಮಾಧಾನ, ಅಹವಾಲುಗಳ ದೊಡ್ಡ ಪಟ್ಟಿಯನ್ನೇ ವಿಧಾನಪರಿಷತ್ ಸದ್ಯಸರು ಮುಂದಿಟ್ಟಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್​ ಡಿನ್ನರ್ ಮೀಟಿಂಗ್​ನಲ್ಲಿ ಪರಿಷತ್ ಸದಸ್ಯರ ಅಸಮಾಧಾನ
ಡಿಸಿಎಂ ಡಿಕೆ ಶಿವಕುಮಾರ್​​
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Feb 23, 2024 | 7:35 AM

ಬೆಂಗಳೂರು, ಫೆಬ್ರವರಿ 23: ನಗರದ ಖಾಸಗಿ ಹೋಟೆಲ್​ನಲ್ಲಿ ನಿನ್ನೆ ವಿಧಾನಪರಿಷತ್​ನ ಕಾಂಗ್ರೆಸ್ ಸದಸ್ಯರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಡಿನ್ನರ್ ಮೀಟಿಂಗ್​ ಮಾಡಿದ್ದಾರೆ. ಈ ವೇಳೆ ಪರಿಷತ್ ಸದಸ್ಯರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಹವಾಲುಗಳ ದೊಡ್ಡ ಪಟ್ಟಿಯನ್ನೇ ಪರಿಷತ್ ಸದಸ್ಯರು ಮುಂದಿಟ್ಟಿದ್ದಾರೆ. ರಾಜಕೀಯವಾಗಿ ಸ್ಥಾನಮಾನ ನೀಡದೆ ಕಡೆಗಣಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಿಗಮ ಮಂಡಳಿ ನೀಡದೆ, ಅನುದಾನವನ್ನೂ ನೀಡದಿದ್ದಕ್ಕೆ ತೀವ್ರ ಆಕ್ಷೇಪ ಹೊರಹಾಕಿದ್ದು, ರಾಜಕೀಯವಾಗಿ ಎಂಎಲ್​ಸಿಗಳನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡುವಂತೆ ಮನವಿ

ಲೋಕಸಭೆ ಚುನಾವಣೆ ಟಿಕೆಟ್ ಬಗ್ಗೆಯೂ ಎಂಎಲ್​ಸಿಗಳು ಚರ್ಚೆ ಮಾಡಿದ್ದಾರೆ. ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡುವಂತೆ ಪರಿಷತ್ ಸದಸ್ಯರು ಒತ್ತಾಯ ಮಾಡಿದ್ದು, ಸಚಿವರ ಮಕ್ಕಳಿಗೆ ಟಿಕೆಟ್ ನೀಡುವ ಬಗ್ಗೆ ಗಮನ ಹರಿಸಬೇಡಿ ಎಂದು ಮನವಿ ಕೂಡ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ ನಿರ್ಣಯ ಮಂಡಿಸಿದ ರಾಜ್ಯ ಸರ್ಕಾರ: ಸಿಡಿದೆದ್ದ ಬಿಜೆಪಿ

ಗಂಭೀರವಾಗಿ ಕೆಲಸ ಮಾಡುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ. ಶಾಸಕರಿಗೆ ಅನುದಾನ ನೀಡುವಂತೆ ತಮಗೂ ಅನುದಾನ ನೀಡಿ ಎಂದು ಆಗ್ರಹಿಸಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಪರಿಷತ್ ಸದಸ್ಯರಿಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ವಿಧೇಯಕ ಮಂಡಿಸುವಾಗ ಆಡಳಿತ ಪಕ್ಷದ ಸದಸ್ಯರ ಗೈರುಹಾಜರಿ ಬಗ್ಗೆ ಚರ್ಚೆ ಮಾಡಲಾಗಿದ್ದು, ಗೈರಾಗುತ್ತಿರುವ ಪರಿಷತ್ ಸದಸ್ಯರಿಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಇನ್ನು ವಿಧಾನಪರಿಷತ್​ನಲ್ಲಿ ವಿಧೇಯಕಗಳಿಗೆ ಹಿನ್ನಡೆ ಆಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಶಾಸಕರಂತೆ ಟಾರ್ಗೆಟ್ 20ಗೆ ಶ್ರಮಿಸುತ್ತಿರುವುದಾಗಿ ಎಂಎಲ್​ಸಿಗಳು ಮನವರಿಕೆ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷ 20 ಸ್ಥಾನ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ರಾಜಕೀಯ ಸ್ಥಾನಮಾನ ನೀಡುವಂತೆ ಡಿನ್ನರ್ ಮೀಟಿಂಗ್​ನಲ್ಲಿ ಡಿ.ಕೆ.ಶಿವಕುಮಾರ್​ಗೆ ಎಂಎಲ್​ಸಿಗಳು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಸನ್ನದ್ಧ: ಮತದಾನಕ್ಕೆ ಶಾಸಕರ ಬ್ಯಾಚ್ ರಚನೆ, ಅದಕ್ಕೆ ಓರ್ವ ಲೀಡರ್

ಲೋಕಸಭಾ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್​ನಲ್ಲಿ ಭಾರೀ ಕಸರತ್ತು ನಡೆಯುತ್ತಿದೆ. ಈ ಬಾರಿ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಭಾರೀ ಹಣಾಹಣಿ ನಡೆಯಲಿದ್ದು, ಗೆಲ್ಲುವ ಅಭ್ಯರ್ಥಿಗಳನ್ನು ಮೂರೂ ಪಕ್ಷಗಳು ಹುಡುಕಾಟ ನಡೆಸುತ್ತಿವೆ.

28 ಕ್ಷೇತ್ರಗಳ ಪೈಕಿ ಅತಿಹೆಚ್ಚು ಕ್ಷೇತ್ರ ಗೆಲ್ಲಲು ತಂತ್ರಗಾರಿಕೆ ರೂಪಿಸುತ್ತಿವೆ. ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್ ಕಳೆದ ಬಾರಿ ಆದ ಹೀನಾಯ ಸೋಲಿನಿಂದ ಪುಟಿದೇಳುವ ನಿಟ್ಟಿನಲ್ಲಿ ಅಳೆದು ತೂಗಿ ಅಭ್ಯರ್ಥಿ ಆಯ್ಕೆಗೆ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 am, Fri, 23 February 24

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್