Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲಿ ಮುಂದುವರಿದ ಭಿನ್ನಮತ: ದಳಪತಿಗಳಿಗೆ ತಲೆ ನೋವಾದ ಬಂಡಾಯ ನಾಯಕರ ನಡೆ

ಮಂಡ್ಯ ವಿಧಾನಸಭಾ ಕ್ಷೇತ್ರದ ಸರದಿಯಾಗಿದ್ದು, ದಳಪತಿಗಳ ಭದ್ರಕೋಟೆಯಲ್ಲಿ ಒಳ ಬೇಗುದಿ ಸ್ಪೋಟಗೊಂಡಿದೆ. ಹಾಲಿ ಶಾಸಕ ಎಂ. ಶ್ರೀನಿವಾಸ್ ವಿರುದ್ದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹಾಗೂ ಹಾಲಿ ಮನ್ಮೂಲ್ ಅಧ್ಯಕ್ಷ ಬಿ.ಆರ್ ರಾಮಚಂದ್ರ ಸಿಡಿದೆದ್ದಿದ್ದಾರೆ.

ಜೆಡಿಎಸ್​ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲಿ ಮುಂದುವರಿದ ಭಿನ್ನಮತ: ದಳಪತಿಗಳಿಗೆ ತಲೆ ನೋವಾದ ಬಂಡಾಯ ನಾಯಕರ ನಡೆ
ಶಾಸಕ ಎಂ.ಶ್ರೀನಿವಾಸ್​ರಿಂದ ಪ್ರಚಾರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 27, 2023 | 3:12 PM

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ವಿಧಾನಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ರಾಜ್ಯದ ಪ್ರಮುಖ ಪಕ್ಷಗಳು ಯಾತ್ರೆಗಳ ಮೂಲಕ ಮತದಾರರಿರುವಲ್ಲಿಯೇ ಹೋಗಿ ಮತಯಾಚಿಸುತ್ತಿದ್ದಾರೆ. ಸದ್ಯ ಕೆ.ಆರ್ ಪೇಟೆ, ಶ್ರೀರಂಗಪಟ್ಟಣ ಆಯ್ತು ಈಗ ಮಂಡ್ಯ (Mandya) ವಿಧಾನಸಭಾ ಕ್ಷೇತ್ರದ ಸರದಿಯಾಗಿದ್ದು, ದಳಪತಿಗಳ ಭದ್ರಕೋಟೆಯಲ್ಲಿ ಒಳ ಬೇಗುದಿ ಸ್ಪೋಟಗೊಂಡಿದೆ. ಹಾಲಿ ಶಾಸಕ ಎಂ. ಶ್ರೀನಿವಾಸ್ ವಿರುದ್ದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹಾಗೂ ಹಾಲಿ ಮನ್ಮೂಲ್ ಅಧ್ಯಕ್ಷ ಬಿ.ಆರ್ ರಾಮಚಂದ್ರ ಸಿಡಿದೆದ್ದಿದ್ದಾರೆ. ಒಂದೆಡೆ ಎಂ.ಶ್ರೀನಿವಾಸ್ ಪ್ರಚಾರ ನಡೆಸುತ್ತಿದ್ರೆ ರಾಮಚಂದ್ರ ಪ್ರತ್ಯೇಕವಾಗಿ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಈಗಾಗ್ಲೆ ಎಂ.ಶ್ರೀನಿವಾಸ್​ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಿಕೆಟ್ ಘೋಷಣೆ ಮಾಡಿದ್ದಾರೆ. ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿದ್ರು ಕೂಡ ರಾಮಚಂದ್ರ ಪತ್ನಿಯಿಂದ ಪ್ರತ್ಯೇಕ ಪ್ರಚಾರ ಮಾಡಲಾಗುತ್ತಿದೆ.

ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ ಅಭ್ಯರ್ಥಿ ಬದಲಾವಣೆ ಆಗುತ್ತೆಂಬ ಭರವಸೆ ಮೇಲೆ ರಾಮಂದ್ರ ಬೆಂಬಲಿಗರು ಪ್ರತ್ಯೇಕ ಪ್ರಚಾರಕ್ಕೆ ಇಳಿದಿದ್ದಾರೆ. ಟಿಕೆಟ್ ಕೈ ತಪ್ಪಿದ್ರೆ ಪಕ್ಷೇತರವಾಗಿ ಅಖಾಡಕ್ಕೆ ಇಳಿಯಲು ತೆರೆ ಮರೆಯಲ್ಲಿ ಕಸರತ್ತು ಕೂಡ ಮಾಡಲಾಗುತ್ತಿದೆ. ಸದ್ಯ ಇಷ್ಟೆಲ್ಲಾ ಸಂಗತಿಗಳಿಂದ ಜೆಡಿಎಸ್ ಭದ್ರಕೋಟೆಯಲ್ಲಿ ಬಂಡಾಯದ ಹೊಗೆ ಭುಗಿಲೆದಿದ್ದು, ದಳಪತಿಗಳಿಗೆ ಭಂಡಾಯ ನಾಯಕರ ನಡೆ ತಲೆ ನೋವಾಗಿಸಿದೆ.

ಇದನ್ನೂ ಓದಿ: ನನಗೆ ರಾಜಕೀಯವಾಗಿ ಅಗ್ನಿಪರೀಕ್ಷೆ ಇದೆ, ಅರ್ಥಮಾಡಿಕೊಳ್ಳಿ: ಹಾಸನದಲ್ಲಿ ಕುಮಾರಸ್ವಾಮಿ ಹೇಳಿಕೆ

ತಾರಕಕ್ಕೇರಿದ ಹಾಸನ ವಿಧಾನಸಭಾ ಕ್ಷೇತ್ರದ JDS​ ಟಿಕೆಟ್​ ಫೈಟ್​

ಇನ್ನು ಹಾಸನದಲ್ಲಿ ಜೆಡಿಎಸ್ ಟಿಕೆಟ್​ ಫೈಟ್ ತಾರಕಕ್ಕೇರಿದೆ. ನಿನ್ನೆ(ಫೆ. 26) ಸ್ವರೂಪ್ ಪರವಾಗಿ ಕುಮಾರಸ್ವಾಮಿಗೆ ಸಹಸ್ರಾರುಜನರು ಅಹವಾಲು ಸಲ್ಲಿಸಿದ್ದರು. ಆ ಹಿನ್ನೆಲೆ ಭವನಿ ರೇವಣ್ಣ ಬೆಂಬಲಿಗರು ಸೆಡ್ಡು ಹೊಡೆದಿದ್ದು, ಸಂಸದರ ನಿವಾಸದ ಎದುರು ಸಾವಿರಾರು ಜನರು ಜಮಾಯಿಸಿದ್ದಾರೆ. ಭವಾನಿ ರೇವಣ್ಣಗೆ ಹಾಸನ ಕ್ಷೇತ್ರದ ಟಿಕೆಟ್​ ನೀಡುವಂತೆ ಒತ್ತಾಯಿಸಲಾಗುತ್ತಿದೆ. ಭವಾನಿ ರೇವಣ್ಣ ಫೋಟೋ ಹಿಡಿದು ಘೋಷಣೆ ಹಾಕಲಾಗಿದೆ.

 ಸಾಮಾನ್ಯ ಕಾರ್ಯಕರ್ತನಿಗೆ ಹಾಸನದ ಟಿಕೆಟ್​: ಕುಮಾರಸ್ವಾಮಿ

ಕ್ಷೇತ್ರದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುವ ಶಕ್ತಿ ಕಾರ್ಯಕರ್ತರಿಗೆ ಇದೆ ಎಂದು ಹೆಚ್​.ಡಿ  ಕುಮಾರಸ್ವಾಮಿ ಹೇಳಿದ್ದರು. ಆ ಮಾತಿಗೆ ನಾನು ಬದ್ದನಾಗಿದ್ದೇನೆ. ಆದರೆ ಎಲ್ಲರೂ ಒಂದಾಗಿ ಹೋಗಬೇಕಿದೆ. ಯಾವುದೇ ಕಾರಣದಿಂದ ಒಡಕು ಇರಬಾರದು. ನಾನು ಕೈಗೊಳ್ಳುವ ತೀರ್ಮಾನಕ್ಕೆ ಒಂದೇ ಧ್ವನಿಯಾಗಿ ಇರಬೇಕು. ನಾವು ಉಳಿದಿರುವುದೆ ನಿಮ್ಮಂತ ಲಕ್ಷಾಂತರ ಕಾರ್ಯಕರ್ತರ ಬಲದಿಂದ, ಅದು ನನಗೆ ಗೊತ್ತಿದೆ. ಮತ್ತೊಮ್ಮೆ ಹಾಸನದ ನೆಲದಲ್ಲಿ ನಿಂತು ಹಾಸನದ ಟಿಕೆಟ್​ ಕಾರ್ಯಕರ್ತನಿಗೆ ಎಂದು ಹೇಳಿದರು.

ಹಾಸನ ಕ್ಷೇತ್ರದ ಜೆಡಿಎಸ್​ ಟಿಕೆಟ್ ವಿಚಾರವಾಗಿ ಫೈಟ್ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ನಾನು ಯಾವುದೇ ಕಾರಣಕ್ಕೂ ತಪ್ಪು ನಿರ್ಧಾರ ತೆಗೆದುಕೊಳ್ಳಲ್ಲ. ನಿಮ್ಮ ಛಲಕ್ಕೆ ಲೋಪ ಆಗಲು ನಾನು ಬಿಡುವುದಿಲ್ಲ. ನನ್ನ ಕಾರ್ಯಕರ್ತರನ್ನು ನಾನು ಬಿಟ್ಟುಕೊಡುವುದಿಲ್ಲ ಸಕಾರಾತ್ಮಕವಾಗಿ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೆಲವೇ ದಿನಗಳಲ್ಲಿ ಜೆಡಿಎಸ್‌ನ​ ಎರಡನೇ ಪಟ್ಟಿ ಪ್ರಕಟ ಆಗುತ್ತದೆ. ಎರಡನೇ ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಕೂಡ ಇರುತ್ತದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:12 pm, Mon, 27 February 23

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ