AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜತೆ ಮೈತ್ರಿಗೆ ಇಬ್ರಾಹಿಂ ಅಸಮಾಧಾನ, ಕರೆ ಮಾಡಿ ಮುನಿಸು ಶಮನಕ್ಕೆ ಯತ್ನಿಸಿದ ದೇವೇಗೌಡ

ಬಿಜೆಪಿಯೊಂದಿಗೆ ದೋಸ್ತಿ ಬೆಳೆಸಿದ್ದಕ್ಕೆ ಜೆಡಿಎಸ್​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಮೈತ್ರಿಗೆ ವಿರೋಧಿಗೆ ಕೆಲವರು ಸಿಡಿದೆದ್ದಿದ್ದು, ಪಕ್ಷದಿಂದ ಆಚೆ ಹೋಗುತ್ತಿದ್ದಾರೆ. ಇದೀಗ ಸ್ವತಃ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಹ ಅಸಮಾಧಾನಗೊಂಡಿದ್ದು, ಪಕ್ಷ ತೊರೆಯುವ ಚಿಂತನೆ ನಡೆಸಿದ್ದಾರೆ. ಇದನ್ನು ಅರಿತ ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಇಬ್ರಾಹಿಂ ಅವರಿಗೆ ದೂರವಾಣಿ ಕರೆ ಮಾಡಿ ಮುನಿಸು ಶಮನಗೊಳಿಸಲು ಪ್ರಯತ್ನಿಸಿದ್ದಾರೆ.

ಬಿಜೆಪಿ ಜತೆ ಮೈತ್ರಿಗೆ ಇಬ್ರಾಹಿಂ ಅಸಮಾಧಾನ, ಕರೆ ಮಾಡಿ ಮುನಿಸು ಶಮನಕ್ಕೆ ಯತ್ನಿಸಿದ ದೇವೇಗೌಡ
ಕುಮಾರಸ್ವಾಮಿ, ಇಬ್ರಾಹಿಂ, ದೇವೇಗೌಡ
TV9 Web
| Edited By: |

Updated on: Oct 01, 2023 | 3:36 PM

Share

ಬೆಂಗಳೂರು, (ಅಕ್ಟೋಬರ್ 01): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿ (BJP And JDS alliance )ಭಾರಿ ಸದ್ದು ಮಾಡುತ್ತಿದೆ. ಆದ್ರೆ, ಆಯಾ ಪಕ್ಷದ ಕೆಲ ನಾಯಕರು ಈ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಬಿಜೆಪಿಯೊಂದಿಗೆ ದೋಸ್ತಿ ಬೆಳೆಸಿದ್ದಕ್ಕೆ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಮುಖ್ಯವಾಗಿ ಮುಸ್ಲಿಂ ಸಮುದಾಯದ ನಾಯಕರು ದೇವೇಗೌಡ-ಕುಮಾರಸ್ವಾಮಿ ನಡೆಗೆ ಸಿಡಿದೆದ್ದಿದ್ದು, ಒಬ್ಬೊಬ್ಬರೇ ಪಕ್ಷ ತೊರೆಯುತ್ತಿದ್ದಾರೆ. ಇನ್ನು ಮುಖ್ಯವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂದ ಸಹ ಅಸಮಾಧಾನಗೊಂಡಿದ್ದು, ಇದೀಗ ಖುದ್ದು ದೇವೇಗೌಡ ಅವರು ಅಖಾಡಕ್ಕಿಳಿದು ಇಬ್ರಾಹಿಂ ಮುಸಿಸು ಶಮನಕ್ಕೆ ಮುಂದಾಗಿದ್ದಾರೆ.

ಸಿ.ಎಂ. ಇಬ್ರಾಹಿ. ಅವರು ಬಿಜೆಪಿಯ ತತ್ವ ಸಿದ್ಧಾಂತರಗಳನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದುವರು. ಆದ್ರೆ, ಇದೀಗ ಹೆಚ್​ಡಿ ಕುಮಾರಸ್ವಾಮಿ ಹಾಗೂ ಹೆಚ್​ಡಿ ದೇವೇಗೌಡ ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಂಡಿದ್ದು, ಇಬ್ರಾಹಿಂ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ, ಇಬ್ರಾಹಿಂ ಅವರಿಗೆ ಕರೆ ಮಾಡಿ ಅಸಮಾಧಾನ ಶಮನಗೊಳಿಸಲು ಯತ್ನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜತೆ ಜೆಡಿಎಸ್​ ಮೈತ್ರಿಗೆ ಬಹುಪರಾಕ್, ತಮ್ಮದೇ ಮುಸ್ಲಿಂ ನಾಯಕರಿಗೆ ಟಾಂಗ್ ಕೊಟ್ಟ ಫಾರೂಕ್

ಇಂದು(ಅ,01) ಇಬ್ರಾಹಿಂಗೆ ದೂರವಾಣಿ ಕರೆ ಮಾಡಿದ ದೇವೇಗೌಡ್ರು, ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿ ಹೆಚ್​ಡಿ ಕುಮಾರಸ್ವಾಮಿ ತೋಟದ ಮನೆಯಲ್ಲಿ ನಡೆಯುವ ಸಭೆಗೆ ಬರುವಂತೆ ಆಹ್ವಾನ ಆಹ್ವಾನ ನೀಡಿದ್ದಾರೆ. ಆದ್ರೆ, ಇಬ್ರಾಹಿಂ ಅಸಮಾಧಾನಿತರ ಸಭೆಗೆ ಬರಲು ನಿರಾಕರಿಸಿದ್ದು, ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ಮಾತಾಡುತ್ತೇನೆ ಎಂದಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಇಬ್ರಾಹಿಂ ಜೆಡಿಎಸ್​ ತೊರೆಯುವ ಸಾಧ್ಯತೆಗಳು ಹೆಚ್ಚಿವೆ.

ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಹೆಚ್​ಡಿ ಕುಮಾರಸ್ವಾಮಿ ತೋಟದ ಮನೆಯಲ್ಲಿ ಅಸಮಾಧಾನಿತ ಶಾಸಕರುಗಳ ಸಭೆ ನಡೆದಿದೆ. ಈ ಸಭೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮುನಿಸಿಕೊಂಡಿದ್ದ ಶಾಸಕರು ಭಾಗಿಯಾಗಿದ್ದಾರೆ. ಮೈತ್ರಿಗೆ ಬಹಿರಂಗ ವ್ಯಕ್ತಪಡಿಸಿದ್ದ ಶಾಸಕರಾದ ಶರಣಗೌಡ ಕಂದಕೂರು, ಕರೆಮ್ಮ ನಾಯಕ್ ಸೇರಿದಂತೆ ಇನ್ನು ಹಲವರು ಈ ಸಭೆಯಲ್ಲಿ ಭಾಗಿಯಾಗಿದ್ದು, ಅಸಮಾಧಾನಿತರನ್ನು ಕುಮಾರಸ್ವಾಮಿ ಸಮಧಾನ ಮಾಡುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ