AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ನೀಡಲಾಗದ ಸಿದ್ದರಾಮಯ್ಯ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ತೇಜಸ್ವಿ ಸೂರ್ಯ

ಅಕ್ಕಿ ನೀಡಲಾಗದೆ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ.

ಅಕ್ಕಿ ನೀಡಲಾಗದ ಸಿದ್ದರಾಮಯ್ಯ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ತೇಜಸ್ವಿ ಸೂರ್ಯ
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರನ್ನು ಭೇಟಿಯಾದ ಸಂಸದ ತೇಜಸ್ವಿ ಸೂರ್ಯ (ಎಡಚಿತ್ರ)
Rakesh Nayak Manchi
Rakesh Nayak Manchi|

Updated on: Jun 14, 2023 | 9:04 PM

Share

ಬೆಂಗಳೂರು: ಅಕ್ಕಿ ನೀಡಲಾಗದೆ ನರೇಂದ್ರ ಮೋದಿ (Narendra Modi) ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಆರೋಪಕ್ಕೆ ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (HD Deve Gowda) ಅವರ ಭೇಟಿ ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅಕ್ಕಿ ಯಾವುದೂ ನಿಲ್ಲುವುದಿಲ್ಲ. ಇದು ದ್ವೇಷದ ರಾಜಕಾರಣವಲ್ಲ, ಅ‌ಸಮರ್ಥ ರಾಜಕಾರಣ. ಈ ಹಿಂದೆಯೂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಘೋಷಿಸಿದ್ದರು. ಆಗಲೂ ಕೇಂದ್ರ ಸರ್ಕಾರದ ಅಕ್ಕಿಗೆ ತಮ್ಮ ಫೋಟೋ ಹಾಕಿಕೊಂಡಿದ್ದರು ಎಂದು ಹೇಳಿದರು.

ಕಾಂಗ್ರೆಸ್, ಬಿಜೆಪಿ ನಾಯಕರಲ್ಲಿ ಒಳ ಒಪ್ಪಂದ ವಿಚಾರವಾಗಿ ಮಾತನಾಡಿದ ತೇಜಸ್ವಿ ಸೂರ್ಯ, ಬಹಳಷ್ಟು ವಿಚಾರ ಚರ್ಚೆ ಮಾಡಲು ಪಕ್ಷದಲ್ಲಿ ಬಹಳಷ್ಟು ವೇದಿಕೆಗಳಿವೆ. ನಾನು ಈಗ ಪ್ರತಿಕ್ರಿಯೆ ನೀಡಿದರೆ ಅದು ಧಾರಾವಾಹಿ ರೀತಿ ಬೆಳೆಯುತ್ತದೆ. ಪಕ್ಷದ ವೇದಿಕೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. ಹೊಸಬರಿಗೆ ಟಿಕೆಟ್ ಕುರಿತಂತೆ ರಮೇಶ್ ಜಿಗಜಿಣಗಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೊಸಬರು, ಯುವಕರಿಗೆ ಟಿಕೆಟ್ ನೀಡದಿದರೆ ಪಕ್ಷ ಬೆಳೆಯುವುದು ಹೇಗೆ? ಸಮಾಜದಲ್ಲಿ ರಾಜಕೀಯ ಪರಿವರ್ತನೆ ಆಗುವುದು ಹೇಗೆ? ಎಂದರು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್​ ಷರತ್ತು: ಅಸಮಾಧಾನ ಹೊರಹಾಕಿದ ಸ್ವಪಕ್ಷದ ಶಾಸಕ ಶಾಮನೂರು ಶಿವಶಂಕರಪ್ಪ

ದೇವೇಗೌಡರು ಲೀವಿಂಗ್ ಲೆಜೆಂಡ್: ತೇಜಸ್ವಿ ಸೂರ್ಯ

ನಮೋ ವಿದ್ಯಾರ್ಥಿ ವೇತನ ಪ್ರತಿಭಾನ್ವಿತ ಮಕ್ಕಳಿಗೆ ಕೊಡುತ್ತಿದ್ದೇವೆ. ಒಂದು ಸಾವಿರ ಮಕ್ಕಳಿಗೆ ಕೊಟ್ಟಿದ್ದು ಮುಂದೆ ಹತ್ತು ಸಾವಿರ ಮಕ್ಕಳಿಗೆ ಕೊಡುವ ಉದ್ದೇಶವಿದೆ. ದೇವೇಗೌಡರಿಂದ ವಿದ್ಯಾರ್ಥಿ ವೇತನ ಕೊಡಿಸಬೇಕಾಗಿತ್ತು, ಆದ್ದರಿಂದ ಕೊಡಿಸಿದ್ದೇವೆ. ವಿದ್ಯಾ ನಿಧಿಯ ಚೆಕ್ ದೇವೇಗೌಡರು ನೀಡಿದ್ದಾರೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ದೇವೆಗೌಡರು ಲೀವಿಂಗ್ ಲೆಜೆಂಡ್. ಅವರು ನನ್ನ ಕ್ಷೇತ್ರದ ಮತದಾರರು. ಹಾಗಾಗಿ ಕ್ಷೇತ್ರದ ದೊಡ್ಡವರನ್ನು ಭೇಟಿಯಾಗಿ ನಾನು ಏನು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದೇನೆ. ಅಭಿಯಾನದ ಭಾಗವಾಗಿ ಭೇಟಿ ಮಾಡಿ ವರ್ಕ್ ರಿಪೋರ್ಟ್ ನೀಡಿದ್ದೇನೆ. ಮುಂದೆ ಎತ್ತರಕ್ಕೆ ಬೆಳೆಯುವಂತೆ ಆಶೀರ್ವಾದ ಮಾಡಿದ್ದಾರೆ. ಮುಂದೆ ಏನು ಮಾಡಬೇಕು ಎಂದು ಮಾರ್ಗದರ್ಶನ ಮಾಡಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ