AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ಗೆ ಒಂದು ಅವಕಾಶ ಮಾಡಿಕೊಡಿ: ಪರೋಕ್ಷವಾಗಿ ಸಿಎಂ ಅಭ್ಯರ್ಥಿ ಎಂದ ಡಿಕೆ ಸುರೇಶ್​​

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಒಂದು ಅವಕಾಶ ಮಾಡಿಕೊಡಿ ಎಂದು ಹೇಳುವ ಮೂಲಕ ಜಿಲ್ಲೆಯಲ್ಲಿ ಮತ್ತೊಮ್ಮೆ ಡಿ.ಕೆ. ಶಿವಕುಮಾರ ಸಿಎಂ ಅಭ್ಯರ್ಥಿ ಎಂದು ಪರೋಕ್ಷವಾಗಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Mar 01, 2023 | 8:55 PM

Share

ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಅವರಿಗೆ ಒಂದು ಅವಕಾಶ ಮಾಡಿಕೊಡಿ ಎಂದು ಹೇಳುವ ಮೂಲಕ ಜಿಲ್ಲೆಯಲ್ಲಿ ಮತ್ತೊಮ್ಮೆ ಡಿ.ಕೆ. ಶಿವಕುಮಾರ ಸಿಎಂ ಅಭ್ಯರ್ಥಿ ಎಂದು ಪರೋಕ್ಷವಾಗಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಜಿಲ್ಲೆಯ  ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್​ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿ, ಹಾಸನ ಜಿಲ್ಲೆಯವರಿಗೆ ರಾಮನಗರದಲ್ಲಿ ರಾಜಕೀಯವಾಗಿ ಅವಕಾಶ ನೀಡಿದ್ದೇವೆ. ಕಳೆದ ಬಾರಿ ನಾವೇ ಅವರಿಗೆ ಸಿಎಂ ಆಗಲು ಬೆಂಬಲ ನೀಡಿದ್ದೆವು. ಈಗ ಡಿ.ಕೆ. ಶಿವಕುಮಾರ್​ ಸಿಎಂ ಆಗುವ ಅವಕಾಶವಿದೆ ಎಂದು ಪರೋಕ್ಷವಾಗಿ ಹೇಳಿದರು. ಹಾಸನ ಜಿಲ್ಲೆ ಜೆಡಿಎಸ್​ ಪಕ್ಷ ಭದ್ರಕೋಟೆ ಎಂಬ ಭಾವನೆ ಇದೆ. ಜಿಲ್ಲೆಯಲ್ಲಿ ಮತ್ತೆ ಶ್ರೀಕಂಠಯ್ಯ, ಪುಟ್ಟಸ್ವಾಮಿಗೌಡ ಕಾಲ ಪುನರಾವರ್ತನೆ ಮಾಡುವಂಥದ್ದನ್ನು ಎದುರು ನೋಡ್ತಿದ್ದೇವೆ ಎಂದರು.

ಜೆಡಿಎಸ್ ಶಾಸಕರು ಬಹಳಷ್ಟು ಗೊಂದಲ ಸೃಷ್ಟಿಮಾಡುತ್ತಿದ್ದಾರೆ. ಜೆಡಿಎಸ್​ಗೆ ನಮ್ಮ ಪಕ್ಷದ ಅಭ್ಯರ್ಥಿಗಳ ಬಗ್ಗೆ ಹೆಚ್ಚು ಚಿಂತಿಸುತ್ತಿದ್ದಾರೆ. ಹೆಚ್.ಡಿ.ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ್ದೀರಾ? ಹಾಸನದಲ್ಲಿ ಸೋತಾಗ ರಾಮನಗರದಲ್ಲಿ ನಮ್ಮ ಸಮಾಜ ಅವಕಾಶ ನೀಡಿದೆ. ಹೆಚ್.ಡಿ.ಕುಮಾರಸ್ವಾಮಿಯನ್ನು 2 ಬಾರಿ ಮುಖ್ಯಮಂತ್ರಿ ಮಾಡಿದ್ದೀರಿ. ಇಂದು ನಿಮಗೆ ಮತ್ತೊಂದು ಅವಕಾಶ ಬಂದಿದೆ. ಅದೇ ಸಮಾಜದ ಡಿ.ಕೆ.ಶಿವಕುಮಾರ್​ಗೆ ಒಮ್ಮೆ ಅವಕಾಶ ಮಾಡಿಕೊಡಿ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್​​, ಡಾ.ಜಿ.ಪರಮೇಶ್ವರ್​​ ನಡುವೆ ಗೊಂದಲವಿಲ್ಲ ಎಂದು ಡಿ.ಕೆ.ಸುರೇಶ್​ ಹೇಳಿದರು.

ಇದನ್ನೂ ಓದಿ: ಹಾಸನದಲ್ಲಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದ ಡಿಕೆ ಶಿವಕುಮಾರ್​, ದಳಪತಿಗಳಲ್ಲಿ ಮತ್ತಷ್ಟು ಟಿಕೆಟ್​ ಟೆನ್ಷನ್

ಜೆಡಿಎಸ್ ವಿರುದ್ಧ ವಾಗ್ದಾಳಿ ಮಾಡಿದ ಡಿಕೆ ಶಿವಕುಮಾರ್ 

ಡಿಕೆ ಶಿವಕುಮಾರ್​ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಎರಡು ಸಾವಿರ ಗುತ್ತಿಗೆದಾರರು ಇದ್ದರಂತೆ. ಈಗ ಅವರೆಲ್ಲಾ ಯಾರೋ ಇಬ್ಬರ ಕೈ ಕೆಳಗೆ ಮೇಸ್ತ್ರಿಗಳಾಗಿದಾರಂತೆ. ಇದಕ್ಕೆ ಕಾರಣ ಯಾರು ಎಂದು ಜೆಡಿಎಸ್ ವಿರುದ್ಧ ವಾಗ್ದಾಳಿ ಮಾಡಿದರು. ಇದನ್ನ ಬದಲಾವಣೆ ಮಾಡೋ ಅವಕಾಶ ನಿಮ್ಮ ಕೈಲಿದೆ. ಹೋರಾಟ ಮಾಡೋನಿಗೆ ಭಯ ಇರೋದಿಲ್ಲ. ಹಾಗಾಗಿ ಎಲ್ಲರೂ ಒಂದಾಗಿ ಹೋರಾಟ ಮಾಡಿ ಎಂದು ಕರೆ ನೀಡಿದರು. ನಾವು ಎಂಬತ್ತು ಜನ ಬೆಂಬಲ ಕೊಟ್ಟಿದ್ದಕ್ಕೆ ಕುಮಾರಣ್ಣ ಸಿಎಂ ಆದರು. ಆದರೆ ಬಾವು ಬೆಂಬಲ ಕೊಟ್ಟು ಸರ್ಕಾರ ಬಂದರೂ ನಮ್ಮನ್ನ ಜಿಲ್ಲೆಯಲ್ಲಿ ಹತ್ತಿರ ಸೇರಿಸಲಿಲ್ಲ ಎಂದು ಗೊತ್ತಾಯ್ತು.

ಇದನ್ನೂ ಓದಿ: Belagavi: ರೈತರ ರಕ್ತಹೀರಿ, ಸುಲಿಗೆ ಮಾಡಿ 6 ಸಾವಿರ ಕೊಟ್ಟಿದ್ದೇನೆ ಎನ್ನುವ ಮೋದಿ; ಸಿದ್ದರಾಮಯ್ಯ ಕಿಡಿ

ಹೊಳೆನರಸೀಪುರದಲ್ಲಿ ಜನರೇ ಬದಲಾವಣೆ ಬಯಸಿದಾರೆ. ಈ ಸರ್ಕಾರ ನುಡಿದಂತೆ ನಡೆಯಲಿಲ್ಲ, ಬಡವರ ಪರವಾಗಿ ಅಧಿಕಾರ ಮಾಡಲಿಲ್ಲ. ಈ ಸರ್ಕಾರ ಬರೋಕೆ ಕಾರಣ ಯಾರು ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ನಾವು ಕೊಟ್ಟ ಬೆಂಬಲವನ್ನು ಉಳಿಸಿಕೊಳ್ಳಲಿಲ್ಲ. ನಾವು ಒಂಚೂರು ವಂಚನೆ ಮಾಡಲಿಲ್ಲ, ಅವರು ಸರಿಯಾಗಿ ಆಡಳಿತ ಮಾಡಲಿಲ್ಲ. ದಂಡನಾಯಕ ಆದವನು ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕಿತ್ತು. ಆದರೆ ಅವರು ಮಾಡದೆ ಈ ಸರ್ಕಾರ ಅಧಿಕಾರಕ್ಕೆ ಬಂತು ಎಂದು ಕಿಡಿಕಾರಿದರು.

ಜನರ ಪರವಾಗಿ ಕೆಲಸ ಮಾಡಿದ್ದು, ಮಾಡೋದು ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿ ಯಾವತ್ತೂ ಜನರ ಬದುಕಿನ ಬದಲಾವಣೆ ಮಾಡೋ ಯೋಜನೆ ಮಾಡಿಲ್ಲ. ಹಾಗಾಗಿ ಕಾಂಗ್ರೆಸ್ ಬೆಂಬಲಿಸಿ. ಜೆಡಿಎಸ್​ ಬರಲ್ಲ ಓಟ್ ವೇಸ್ಟ್ ಮಾಡಿಕೊಳ್ಳಬಾರದು ಎಂದು ಜನರೇ ತೀರ್ಮಾನ ಮಾಡಿದಾರೆ. ಹಾಗಾಗಿ ಜೆಡಿಎಸ್​ಗೆ ಮತ ನೀಡಿ ನೀವು ನಿಮ್ಮ ಓಟ್ ವೇಸ್ಟ್ ಮಾಡಬೇಡಿ. ನಮ್ಮ ಪಕ್ಷಕ್ಕೆ ಮತ ನೀಡಿ ರೈತನ ಮಗನಿಗೆ ಅವಕಾಶ ಕೊಡಿ ಎಂದು ಡಿಕೆ ಶಿವಕುಮಾರ್​ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:55 pm, Wed, 1 March 23

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ