AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ

ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕೆ ವಿರೋಧ ಪಕ್ಷದ ನಾಯಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ, ಇತ್ತ ಡಿಕೆ ಶಿವಕುಮಾರ್, ಈ ಬಗ್ಗೆ ಏನು ಗೊತ್ತಿಲ್ಲದಂತೆ ಸೈಲೆಂಟ್ ಆಗಿದ್ದಾರೆ.

ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ
ಪರಮೇಶ್ವರ್-ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Nov 24, 2023 | 9:29 AM

Share

ಬೆಂಗಳೂರು, (ನವೆಂಬರ್ 24): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ (Karnataka Cabinet) ಗುರುವಾರ ಅನುಮೋದನೆ ನೀಡಿದೆ. ಈ ಬಗ್ಗೆ ಇಂದು(ನವೆಂಬರ್ 24) ಖುದ್ದು ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಈ ವಿಚಾರವನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ನಿನ್ನೆ ನಾನು ಸಚಿವ ಸಂಪುಟ ಸಭೆಗೆ ಹೋಗಲು ಆಗಲಿಲ್ಲ. ಈ ಬಗ್ಗೆ ಯಾರು ಮಾತನಾಡಬೇಕೋ ಅವರೇ ಮಾತನಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಈ ಬಗ್ಗೆ ತಮಗೆ ಏನು ಗೊತ್ತಿಲ್ಲ. ಅವರೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಸಮರ್ಥನೆ

ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಈ ಹಿಂದೆ ಸಿಬಿಐಗೆ ಕೊಡುವಾಗ ರಾಜಕೀಯ ಪ್ರೇರಿತ ಆಗಿರಲಿಲ್ವಾ? ಕಾನೂನಿನ ಚೌಕಟ್ಟಿನ ಇತಿಮಿತಿಯಲ್ಲಿ ಈ ನಿರ್ಧಾರ ಮಾಡಿದ್ದೇವೆ. ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಕೋರ್ಟ್​ಗೆ ಸಲ್ಲಿಸುತ್ತೇವೆ. ಮುಂದೆ ಸಿಬಿಐ, ನ್ಯಾಯಾಲಯ ಏನು ಮಾಡುತ್ತೋ ನೋಡೋಣ ಎಂದು ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ

ಕಾನೂನಿನ ಚೌಕಟ್ಟಿನಲ್ಲಿ ನಮ್ಮ ಇತಿಮಿತದಲ್ಲಿ ಮಾಡಿದ್ದೇವೆ. ನಮ್ ಅಡ್ವಕೇಟ್ ಜನರಲ್ ಕೂಡ ಹೇಳಿದಾರೆ. ಅವರು ಮಾಡಿದಾಗ ಒಂದು . ನಾವು ಮಾಡಿದಾಗ ಒಂದು ಆಗಿರಲ್ಲ. ಮುಂದೆ ಏನಾಗುತ್ತೆ ಎಂದು ಗೊತ್ತಿಲ್ಲ. ನಾವು ಕೋರ್ಟಿಗೆ ಸಬ್‌ಮಿಟ್ ಮಾಡುತ್ತೇವೆ, ಮುಂದೆ ಸಿಬಿಐ ಹಾಗೂ ಕೋರ್ಟ್ ಏನು ಮಾಡುತ್ತೆ ನೋಡೋಣ. ಮೊದಲೇ ಒಬ್ಬ ಎಂಎಲ್​ಎ ಅವರಿಗೆ ನಾವು ಯಾವುದೇ ಕೇಸ್ ನಲ್ಲಿ ಸ್ಪೀಕರ್ ಪರ್ ಮಿಶನ್ ತೆಗೆದುಕೊಳ್ಳಬೇಕು ಎನ್ನುವುದು ಇತ್ತು. ಅದನ್ನ ಮಾಡಬೇಕಾಗಿತ್ತು. ಅದನ್ನ ಮಾಡಿದ್ದರೆ ಈ ಪ್ರೊಸಿಜರ್ ಲ್ಯಾಪ್ಸ್ ಆಗುತ್ತಿರಲಿಲ್ಲ ಎಂದು ಸಮಜಾಯಿಷಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ