AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ

ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕೆ ವಿರೋಧ ಪಕ್ಷದ ನಾಯಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ, ಇತ್ತ ಡಿಕೆ ಶಿವಕುಮಾರ್, ಈ ಬಗ್ಗೆ ಏನು ಗೊತ್ತಿಲ್ಲದಂತೆ ಸೈಲೆಂಟ್ ಆಗಿದ್ದಾರೆ.

ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ
ಪರಮೇಶ್ವರ್-ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Nov 24, 2023 | 9:29 AM

Share

ಬೆಂಗಳೂರು, (ನವೆಂಬರ್ 24): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ (Karnataka Cabinet) ಗುರುವಾರ ಅನುಮೋದನೆ ನೀಡಿದೆ. ಈ ಬಗ್ಗೆ ಇಂದು(ನವೆಂಬರ್ 24) ಖುದ್ದು ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಈ ವಿಚಾರವನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ನಿನ್ನೆ ನಾನು ಸಚಿವ ಸಂಪುಟ ಸಭೆಗೆ ಹೋಗಲು ಆಗಲಿಲ್ಲ. ಈ ಬಗ್ಗೆ ಯಾರು ಮಾತನಾಡಬೇಕೋ ಅವರೇ ಮಾತನಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಈ ಬಗ್ಗೆ ತಮಗೆ ಏನು ಗೊತ್ತಿಲ್ಲ. ಅವರೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಸಮರ್ಥನೆ

ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಈ ಹಿಂದೆ ಸಿಬಿಐಗೆ ಕೊಡುವಾಗ ರಾಜಕೀಯ ಪ್ರೇರಿತ ಆಗಿರಲಿಲ್ವಾ? ಕಾನೂನಿನ ಚೌಕಟ್ಟಿನ ಇತಿಮಿತಿಯಲ್ಲಿ ಈ ನಿರ್ಧಾರ ಮಾಡಿದ್ದೇವೆ. ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಕೋರ್ಟ್​ಗೆ ಸಲ್ಲಿಸುತ್ತೇವೆ. ಮುಂದೆ ಸಿಬಿಐ, ನ್ಯಾಯಾಲಯ ಏನು ಮಾಡುತ್ತೋ ನೋಡೋಣ ಎಂದು ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ

ಕಾನೂನಿನ ಚೌಕಟ್ಟಿನಲ್ಲಿ ನಮ್ಮ ಇತಿಮಿತದಲ್ಲಿ ಮಾಡಿದ್ದೇವೆ. ನಮ್ ಅಡ್ವಕೇಟ್ ಜನರಲ್ ಕೂಡ ಹೇಳಿದಾರೆ. ಅವರು ಮಾಡಿದಾಗ ಒಂದು . ನಾವು ಮಾಡಿದಾಗ ಒಂದು ಆಗಿರಲ್ಲ. ಮುಂದೆ ಏನಾಗುತ್ತೆ ಎಂದು ಗೊತ್ತಿಲ್ಲ. ನಾವು ಕೋರ್ಟಿಗೆ ಸಬ್‌ಮಿಟ್ ಮಾಡುತ್ತೇವೆ, ಮುಂದೆ ಸಿಬಿಐ ಹಾಗೂ ಕೋರ್ಟ್ ಏನು ಮಾಡುತ್ತೆ ನೋಡೋಣ. ಮೊದಲೇ ಒಬ್ಬ ಎಂಎಲ್​ಎ ಅವರಿಗೆ ನಾವು ಯಾವುದೇ ಕೇಸ್ ನಲ್ಲಿ ಸ್ಪೀಕರ್ ಪರ್ ಮಿಶನ್ ತೆಗೆದುಕೊಳ್ಳಬೇಕು ಎನ್ನುವುದು ಇತ್ತು. ಅದನ್ನ ಮಾಡಬೇಕಾಗಿತ್ತು. ಅದನ್ನ ಮಾಡಿದ್ದರೆ ಈ ಪ್ರೊಸಿಜರ್ ಲ್ಯಾಪ್ಸ್ ಆಗುತ್ತಿರಲಿಲ್ಲ ಎಂದು ಸಮಜಾಯಿಷಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್