AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ

ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕೆ ವಿರೋಧ ಪಕ್ಷದ ನಾಯಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ, ಇತ್ತ ಡಿಕೆ ಶಿವಕುಮಾರ್, ಈ ಬಗ್ಗೆ ಏನು ಗೊತ್ತಿಲ್ಲದಂತೆ ಸೈಲೆಂಟ್ ಆಗಿದ್ದಾರೆ.

ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ
ಪರಮೇಶ್ವರ್-ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Nov 24, 2023 | 9:29 AM

Share

ಬೆಂಗಳೂರು, (ನವೆಂಬರ್ 24): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ (Karnataka Cabinet) ಗುರುವಾರ ಅನುಮೋದನೆ ನೀಡಿದೆ. ಈ ಬಗ್ಗೆ ಇಂದು(ನವೆಂಬರ್ 24) ಖುದ್ದು ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಈ ವಿಚಾರವನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ನಿನ್ನೆ ನಾನು ಸಚಿವ ಸಂಪುಟ ಸಭೆಗೆ ಹೋಗಲು ಆಗಲಿಲ್ಲ. ಈ ಬಗ್ಗೆ ಯಾರು ಮಾತನಾಡಬೇಕೋ ಅವರೇ ಮಾತನಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಈ ಬಗ್ಗೆ ತಮಗೆ ಏನು ಗೊತ್ತಿಲ್ಲ. ಅವರೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಸಮರ್ಥನೆ

ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಈ ಹಿಂದೆ ಸಿಬಿಐಗೆ ಕೊಡುವಾಗ ರಾಜಕೀಯ ಪ್ರೇರಿತ ಆಗಿರಲಿಲ್ವಾ? ಕಾನೂನಿನ ಚೌಕಟ್ಟಿನ ಇತಿಮಿತಿಯಲ್ಲಿ ಈ ನಿರ್ಧಾರ ಮಾಡಿದ್ದೇವೆ. ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಕೋರ್ಟ್​ಗೆ ಸಲ್ಲಿಸುತ್ತೇವೆ. ಮುಂದೆ ಸಿಬಿಐ, ನ್ಯಾಯಾಲಯ ಏನು ಮಾಡುತ್ತೋ ನೋಡೋಣ ಎಂದು ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ

ಕಾನೂನಿನ ಚೌಕಟ್ಟಿನಲ್ಲಿ ನಮ್ಮ ಇತಿಮಿತದಲ್ಲಿ ಮಾಡಿದ್ದೇವೆ. ನಮ್ ಅಡ್ವಕೇಟ್ ಜನರಲ್ ಕೂಡ ಹೇಳಿದಾರೆ. ಅವರು ಮಾಡಿದಾಗ ಒಂದು . ನಾವು ಮಾಡಿದಾಗ ಒಂದು ಆಗಿರಲ್ಲ. ಮುಂದೆ ಏನಾಗುತ್ತೆ ಎಂದು ಗೊತ್ತಿಲ್ಲ. ನಾವು ಕೋರ್ಟಿಗೆ ಸಬ್‌ಮಿಟ್ ಮಾಡುತ್ತೇವೆ, ಮುಂದೆ ಸಿಬಿಐ ಹಾಗೂ ಕೋರ್ಟ್ ಏನು ಮಾಡುತ್ತೆ ನೋಡೋಣ. ಮೊದಲೇ ಒಬ್ಬ ಎಂಎಲ್​ಎ ಅವರಿಗೆ ನಾವು ಯಾವುದೇ ಕೇಸ್ ನಲ್ಲಿ ಸ್ಪೀಕರ್ ಪರ್ ಮಿಶನ್ ತೆಗೆದುಕೊಳ್ಳಬೇಕು ಎನ್ನುವುದು ಇತ್ತು. ಅದನ್ನ ಮಾಡಬೇಕಾಗಿತ್ತು. ಅದನ್ನ ಮಾಡಿದ್ದರೆ ಈ ಪ್ರೊಸಿಜರ್ ಲ್ಯಾಪ್ಸ್ ಆಗುತ್ತಿರಲಿಲ್ಲ ಎಂದು ಸಮಜಾಯಿಷಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!