ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ

ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕೆ ವಿರೋಧ ಪಕ್ಷದ ನಾಯಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ, ಇತ್ತ ಡಿಕೆ ಶಿವಕುಮಾರ್, ಈ ಬಗ್ಗೆ ಏನು ಗೊತ್ತಿಲ್ಲದಂತೆ ಸೈಲೆಂಟ್ ಆಗಿದ್ದಾರೆ.

ಸಿಬಿಐ ಕೇಸ್ ವಾಪಸ್: ಈ ಬಗ್ಗೆ ಡಿಕೆ ಶಿವಕುಮಾರ್​ಗೆ ಗೊತ್ತಿಲ್ವಂತೆ, ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಇಲ್ಲಿದೆ
ಪರಮೇಶ್ವರ್-ಡಿಕೆ ಶಿವಕುಮಾರ್
Edited By:

Updated on: Nov 24, 2023 | 9:29 AM

ಬೆಂಗಳೂರು, (ನವೆಂಬರ್ 24): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ (Karnataka Cabinet) ಗುರುವಾರ ಅನುಮೋದನೆ ನೀಡಿದೆ. ಈ ಬಗ್ಗೆ ಇಂದು(ನವೆಂಬರ್ 24) ಖುದ್ದು ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಈ ವಿಚಾರವನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ನಿನ್ನೆ ನಾನು ಸಚಿವ ಸಂಪುಟ ಸಭೆಗೆ ಹೋಗಲು ಆಗಲಿಲ್ಲ. ಈ ಬಗ್ಗೆ ಯಾರು ಮಾತನಾಡಬೇಕೋ ಅವರೇ ಮಾತನಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಈ ಬಗ್ಗೆ ತಮಗೆ ಏನು ಗೊತ್ತಿಲ್ಲ. ಅವರೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಸಮರ್ಥನೆ

ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಈ ಹಿಂದೆ ಸಿಬಿಐಗೆ ಕೊಡುವಾಗ ರಾಜಕೀಯ ಪ್ರೇರಿತ ಆಗಿರಲಿಲ್ವಾ? ಕಾನೂನಿನ ಚೌಕಟ್ಟಿನ ಇತಿಮಿತಿಯಲ್ಲಿ ಈ ನಿರ್ಧಾರ ಮಾಡಿದ್ದೇವೆ. ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಕೋರ್ಟ್​ಗೆ ಸಲ್ಲಿಸುತ್ತೇವೆ. ಮುಂದೆ ಸಿಬಿಐ, ನ್ಯಾಯಾಲಯ ಏನು ಮಾಡುತ್ತೋ ನೋಡೋಣ ಎಂದು ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ

ಕಾನೂನಿನ ಚೌಕಟ್ಟಿನಲ್ಲಿ ನಮ್ಮ ಇತಿಮಿತದಲ್ಲಿ ಮಾಡಿದ್ದೇವೆ. ನಮ್ ಅಡ್ವಕೇಟ್ ಜನರಲ್ ಕೂಡ ಹೇಳಿದಾರೆ. ಅವರು ಮಾಡಿದಾಗ ಒಂದು . ನಾವು ಮಾಡಿದಾಗ ಒಂದು ಆಗಿರಲ್ಲ. ಮುಂದೆ ಏನಾಗುತ್ತೆ ಎಂದು ಗೊತ್ತಿಲ್ಲ. ನಾವು ಕೋರ್ಟಿಗೆ ಸಬ್‌ಮಿಟ್ ಮಾಡುತ್ತೇವೆ, ಮುಂದೆ ಸಿಬಿಐ ಹಾಗೂ ಕೋರ್ಟ್ ಏನು ಮಾಡುತ್ತೆ ನೋಡೋಣ. ಮೊದಲೇ ಒಬ್ಬ ಎಂಎಲ್​ಎ ಅವರಿಗೆ ನಾವು ಯಾವುದೇ ಕೇಸ್ ನಲ್ಲಿ ಸ್ಪೀಕರ್ ಪರ್ ಮಿಶನ್ ತೆಗೆದುಕೊಳ್ಳಬೇಕು ಎನ್ನುವುದು ಇತ್ತು. ಅದನ್ನ ಮಾಡಬೇಕಾಗಿತ್ತು. ಅದನ್ನ ಮಾಡಿದ್ದರೆ ಈ ಪ್ರೊಸಿಜರ್ ಲ್ಯಾಪ್ಸ್ ಆಗುತ್ತಿರಲಿಲ್ಲ ಎಂದು ಸಮಜಾಯಿಷಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us