ಮೊಳಕಾಲ್ಮೂರು ಕ್ಷೇತ್ರದ ‘ಕೈ’ ಟಿಕೆಟ್ ಫೈಟ್: ಆಕಾಂಕ್ಷಿಗಳಿಗೆ ಪ್ರಮಾಣ ಮಾಡಿಸಿದ ಡಿಕೆಶಿ

ಎಸ್​ಟಿ ಮೀಸಲು ಕ್ಷೇತ್ರವಾಗಿರುವ ಮೊಳಕಾಲ್ಮೂರು ಕ್ಷೇತ್ರದ ‘ಕೈ’ ಟಿಕೆಟ್ ಫೈಟ್ ಜೋರಾಗಿದೆ. ಇದಕ್ಕೆ ಡಿಕೆ ಶಿವಕುಮಾರ್ ಮಹತ್ವ ಘೋಷಣೆ ಮಾಡಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದ ‘ಕೈ’ ಟಿಕೆಟ್ ಫೈಟ್: ಆಕಾಂಕ್ಷಿಗಳಿಗೆ ಪ್ರಮಾಣ ಮಾಡಿಸಿದ ಡಿಕೆಶಿ
DK Shivakumar
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 13, 2022 | 8:43 PM

ಚಿತ್ರದುರ್ಗ: ವಿಧಾನಸಭಾ ಚುನಾವಣೆಯಲ್ಲಿ ತನ್ನದೇಯಾದ ವೈಶಿಷ್ಟ್ಯ ಹೊಂದಿರುವ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರಕ್ಕೆ ಈಗಿನಿಂದಲೇ ಕಾಂಗ್ರೆಸ್​ನಲ್ಲಿ ಟಿಕೆಟ್ ಫೈಟ್ ಏರ್ಪಟ್ಟಿದೆ.

ಮಾಜಿ ಶಾಸಕ ತಿಪ್ಪೇಸ್ವಾಮಿ ಮತ್ತು ಡಾ.ಯೋಗೇಶ್ ಬಾಬು ನಡುವೆ ಮುಂಬರುವ ವಿಧಾನಸಭೆ ಚುನಾವಣೆ ಟಿಕೆಟ್​ಗಾಗಿ ಪೈಪೋಟಿ ಶುರುವಾಗಿದೆ. ಇದು ಭಾರತ್ ಜೋಡೋ ಯಾತ್ರೆಯಲ್ಲಿ ಟಿಕೆಟ್ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಹತ್ವದ ಘೋಷಣೆ ಮಾಡಿದ್ದಾರೆ.

ನನಗೆ ರಾಜಕೀಯ ಸಾಕಾಗಿದೆ, ಮಗನಿಗೆ ಟಿಕೆಟ್ ಕೊಡಿಸುತ್ತೇನೆ: ಚುನಾವಣಾ ಕಣದಿಂದ ಹಿಂದೆ ಸರಿದ ಎಂಟಿಬಿ

ರಾಹುಲ್ ಗಾಂಧಿ ಭಾಷಣ ನಂತರ ಸಾರ್ವಜನಿಕವಾಗಿ ಮಾತನಾಡಿರುವ ಡಿಕೆ ಶಿವಕುಮಾರ್, ಇಬ್ಬರೂ (ತಿಪ್ಪೇಸ್ವಾಮಿ, ಡಾ.ಯೋಗೇಶ್ ಬಾಬು) ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಪ್ರಮಾಣ ಮಾಡಿದ್ದಾರೆ. ಪಕ್ಷ ಯಾವುದೇ ನಿರ್ಧಾರ ಕೈಗೊಂಡರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ಘೋಷಿಸಿದರು.

ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಶ್ರೀರಾಮುಲು ಅವರನ್ನು ಕಣಕ್ಕಿಳಿಸಿತ್ತು ಇದರಿಂದ ತಿಪ್ಪೇಸ್ವಾಮಿ ಟಿಕೆಟ್ ಸಿಗದಿದ್ದರಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್​ಗಾಗಿ ಕಸರತ್ತು ನಡೆಸಿದ್ದಾರೆ.

ಮತ್ತೊಂದೆಡೆ ಬಿಜೆಪಿಯಿಂದ ಶ್ರೀರಾಮುಲು ಅವರು ಕಣಕ್ಕಿಳಿಯುವುದು ಅನುಮಾನ. ಯಾಕಂದ್ರೆ ಶ್ರೀರಾಮುಲು ಅವರು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗವನ್ನು ಬಿಟ್ಟು ಬಳ್ಳಾರಿ ಜಿಲ್ಲೆ ಉಸ್ತುವಾರಿ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಿಂದ ಸ್ಪರ್ಧೆ ಮಾಡಿದರೆ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು ಎನ್ನುವುದು ಪ್ಪೇಸ್ವಾಮಿ, ಡಾ.ಯೋಗೇಶ್ ಬಾಬು ಲೆಕ್ಕಾಚಾರವಾಗಿದೆ. ಇದರಿಂದ ಟಿಕೆಟ್​ಗಾಗಿ ಪೈಪೋಟಿ ನಡೆಸಿದ್ದಾರೆ.

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ