AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಟಿಕೆಟ್​ಗಾಗಿ ಖುದ್ದು ಅರ್ಜಿ ಸಲ್ಲಿಸಿದ ಡಿಕೆ ಶಿವಕುಮಾರ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್​ ಟಿಕೆಟ್​ಗಾಗಿ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದಾರೆ.

Karnataka Assembly Election 2023: ಟಿಕೆಟ್​ಗಾಗಿ ಖುದ್ದು ಅರ್ಜಿ ಸಲ್ಲಿಸಿದ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
TV9 Web
| Edited By: |

Updated on:Nov 15, 2022 | 10:12 PM

Share

ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ((Karnataka Assembly Election 2023)) ಕಾಂಗ್ರೆಸ್​ ಟಿಕೆಟ್​ಗಾಗಿ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅರ್ಜಿ ಸಲ್ಲಿಸಿದ್ದಾರೆ. ಇಂದು(ನವೆಂಬರ್ 15) ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದ ಟಿಕೆಟ್​ಗಾಗಿ ಡಿಕೆ ಶಿವಕುಮಾರ್ ಅರ್ಜಿ ಹಾಕಿದರು. ಡಿಕೆಶಿ ಖುದ್ದು ಅರ್ಜಿ ಸಲ್ಲಿಸುವ ಮೂಲಕ ಇತರೆ ನಾಯಕರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಕಾಂಗ್ರೆಸ್​ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ ನಟಿ ಭಾವನಾ, ಹಾಲಿ ಶಾಸಕರ ಕ್ಷೇತ್ರಕ್ಕೆ ನಲಪಾಡ್ ಅರ್ಜಿ

ಕಾಂಗ್ರೆಸ್​ ಟಿಕೆಟ್​ಗಾಗಿ ಖುದ್ದು ಅಧ್ಯಕ್ಷರೇ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಸಂದೇಶ ನೀಡಿದ್ದಾರೆ. ಈ ಮೂಲಕ ಇತರೆ ಮೇಲ್ಪಂಕ್ತಿ ನಾಯಕರಿಗೂ ಸಹ ಟಿಕೆಟ್​ಗಾಗಿ ಅರ್ಜಿ ಹಾಕಲೇಬೇಕೆಂದ ಮೆಸೇಜ್ ನೀಡಿದ್ದಾರೆ. ಕ್ಷೇತ್ರದ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ನವೆಂಬರ್ 21ರ ವರೆಗೆ ಅವಕಾಶ ನೀಡಲಾಗಿದೆ. ಆದ್ರೆ, ಸಿದ್ದರಾಮಯ್ಯನವರು ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಇನ್ನೂ ಅಧಿಕೃತವಾಗಿಲ್ಲ. ಇದೀಗ ಡಿಕೆಶಿ ಅರ್ಜಿ ಹಾಕುವ ಮೂಲಕ ಕ್ಷೇತ್ರ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ನಡೆ ಬಹಿರಂಗಗೊಳಿಸಲು ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ನನ್ನ ಕ್ಷೇತ್ರ ಕ್ಲಿಯರ್​ ಇದೆ, ನೀವೆಲ್ಲಿಂದ ಸ್ಪರ್ಧಿಸುತ್ತೀರಿ ಎಂಬಂತೆ CLP ನಾಯಕ ಸಿದ್ದರಾಮಯ್ಯಗೆ KPCC ಅಧ್ಯಕ್ಷ ಡಿಕೆಶಿ ಸವಾಲು ಹಾಕಿದಂತಿದೆ. ಡಿಕೆ ಶಿವಕುಮಾರ್ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿರುವ ರಾಜ್ಯ ಕಾಂಗ್ರೆಸ್​ನಲ್ಲಿ ಹಲವು ನಾನಾ ಚರ್ಚೆಗಳಿಗೆ ಗ್ರಾಸವಾಗಿದೆ.

ಈಗಾಗಲೇ ಹಲವು ನಾಯಕರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳು ಟಿಕೆಟ್​ಗಾಗಿ ಡಿಡಿ ಹಣ ತುಂಬಿ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಕೆಲ ನಾಯಕರು ಐದು ಸಾವಿರ ರೂಪಾಯಿ ನೀಡಿ ಅರ್ಜಿ ಸ್ವೀಕರಿಸಿದ್ದು, ಇನ್ನೂ ಎರಡು ಲಕ್ಷ ರೂಪಾಯಿ ಡಿಡಿ ತುಂಬಿ ಅರ್ಜಿ ಹಾಕಿಲ್ಲ. ​

ಅರ್ಜಿ ಅವಧಿ  ವಿಸ್ತರಣೆ

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ  ಕಾಂಗ್ರೆಸ್​ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಮೊದಲು ಅರ್ಜಿ ಸಲ್ಲಿಕೆಗೆ ಇಂದು(ನವೆಂಬರ್ 15) ಕೊನೆ ದಿನವಾಗಿತ್ತು. ಆದ್ರೆ,  ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಅವರು ನವೆಂಬರ್ 21 ರ ವರೆಗೆ ವಿಸ್ತರಿಸಿದ್ದಾರೆ.

ಠೇವಣಿ ಬಾಂಡ್ ಸಲ್ಲಿಕೆ ಸಾಮಾನ್ಯ ಕಾರ್ಯಕರ್ತರಿಗೆ ತಲೆ ಬಿಸಿ ಉಂಟು ಮಾಡಿದೆ. ಪರಿಶಿಷ್ಟ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಒಂದು ಲಕ್ಷ ರೂ, ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಗಳು 2 ಲಕ್ಷ ರೂ. ಠೇವಣಿ ಬಾಂಡ್ ನೀಡಬೇಕಿದೆ. ಕೆಲವು ಕ್ಷೇತ್ರಗಳಲ್ಲಿ ಐದಾರು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಕೆಲವು ಕಡೆ ಹಾಲಿ ಶಾಸಕರಿರುವ ಕ್ಷೇತ್ರಗಳಿಗೂ ಸ್ಥಳೀಯ ನಾಯಕರು ಅರ್ಜಿ ಹಾಕಿರುವುದು ಕುತೂಹಲ ಮೂಡಿಸಿದೆ. ಕೆಲವು ನಾಯಕರು ತಾವು ಅರ್ಜಿ ಸಲ್ಲಿಸಿದ್ದು, ತಮ್ಮ ಕುಟುಂಬದ ಸದಸ್ಯರಿಂದಲೂ ಅರ್ಜಿ ಹಾಕಿಸಿದ್ದಾರೆ. ಇದರಿಂದ ಇದನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಗೆ ನಿಭಾಯಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:11 pm, Tue, 15 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ