AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದಿನವೇ ಬಿಜೆಪಿಗೆ ರಾಜಕೀಯ ನಿವೃತ್ತಿ ಸವಾಲು ಹಾಕಿದ ಡಿಕೆ ಶಿವಕುಮಾರ್

ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ’.. ದಿಕ್ಕು ತಪ್ಪಿದ ಸರ್ಕಾರ.. ತುಘಲಕ್ ದರ್ಬಾರಿನ ಸರ್ಕಾರ.. ಇದು ನೂರು ದಿನ ಪೂರೈಸಿರೋ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಪಡೆ ಕೊಟ್ಟಿರೋ ಬಿರುದುಗಳು.. ಶತಕ ಬಾರಿಸಿದ ಸಂಭ್ರಮದಲ್ಲಿರೋ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದ್ದು, ವೈಫಲ್ಯಗಳ ಸರಮಾಲೆಯ ಜಾರ್ಜ್‌ಶೀಟ್ ಬಿಡುಗಡೆ ಮಾಡಿದ್ದು ಇದಕ್ಕೆ ಇದೀಗ ಕಾಂಗ್ರೆಸ್ ತಿರುಗೇಟು ನೀಡಿದೆ. ಇನ್ನು ಡಿಕೆ ಶಿವಕುಮಾರ್ ಅವರು ರಾಜಕೀಯ ನಿವೃತ್ತಿ ಸವಾಲು ಹಾಕಿದ್ದಾರೆ

ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದಿನವೇ ಬಿಜೆಪಿಗೆ ರಾಜಕೀಯ ನಿವೃತ್ತಿ ಸವಾಲು ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Sunil MH
| Edited By: |

Updated on: Aug 30, 2023 | 11:14 AM

Share

ಮೈಸೂರು, (ಆಗಸ್ಟ್ 30): ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರೋ ರಾಜ್ಯ ಸರ್ಕಾರ(Karnataka Congress Government) ಇಂದು(ಆಗಸ್ಟ್ 30) ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ(BJP) ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ ಮಾಡಿದೆ. ಇದರಲ್ಲಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಡಿಕೆ ಶಿವಕುಮಾರ್(DK Shivakumar)​ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಇಂದು(ಆಗಸ್ಟ್ 30) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿಯವರು ಆರೋಪ ಸಾಬೀತು ಮಾಡಲಿ. ಇವರದ್ದನ್ನು ಬಿಚ್ಚೋ ಕಾಲ ಬರುತ್ತದೆ ಬಿಚ್ಚುತ್ತೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಸವಾಲು ಹಾಕುವ ಮೂಲಕ ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: Gruha Lakshmi Scheme Launch Live: ಕೆಂಪೇಗೌಡ ಏರ್​​ಪೋರ್ಟ್​ಗೆ ಆಗಮಿಸಿದ ರಾಹುಲ್ ಗಾಂಧಿ

ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮೊದಲ ಕ್ಯಾಬಿನೆಟ್​​ನಲ್ಲೇ ಎಲ್ಲಾ ಗ್ಯಾರಂಟಿ ಇತ್ಯರ್ಥ ಮಾಡಿದ್ದೇವೆ. ಬಿಜೆಪಿಯವರದ್ದು ಭರವಸೆ, ನಮ್ಮದು ಗ್ಯಾರಂಟಿ. ಇಂದು ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದು, ನಾಡಿನೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರ ಮನೆಗಳಲ್ಲಿ ಹೆಣ್ಣು ಮಕ್ಕಳು ಹಬ್ಬದ ಸಂಭ್ರಮದಲ್ಲಿದ್ದಾರೆ. 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ, ಸಿಎಂ ಸಿದ್ದರಾಮಯ್ಯ, ನಾನು ಚೆಕ್​ಗೆ ಸಹಿ ಹಾಕಿದ್ದು, ಯಜಮಾನಿಯರ ಬ್ಯಾಂಕ್​ ಖಾತೆಗೆ 2000 ರೂ ಹಣ ಜಮೆಯಾಗುತ್ತೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಕಿಕ್ಕಿಸಿ

Follow Us
Sunil MH
Sunil MH
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ