AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದಿನವೇ ಬಿಜೆಪಿಗೆ ರಾಜಕೀಯ ನಿವೃತ್ತಿ ಸವಾಲು ಹಾಕಿದ ಡಿಕೆ ಶಿವಕುಮಾರ್

ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ’.. ದಿಕ್ಕು ತಪ್ಪಿದ ಸರ್ಕಾರ.. ತುಘಲಕ್ ದರ್ಬಾರಿನ ಸರ್ಕಾರ.. ಇದು ನೂರು ದಿನ ಪೂರೈಸಿರೋ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಪಡೆ ಕೊಟ್ಟಿರೋ ಬಿರುದುಗಳು.. ಶತಕ ಬಾರಿಸಿದ ಸಂಭ್ರಮದಲ್ಲಿರೋ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದ್ದು, ವೈಫಲ್ಯಗಳ ಸರಮಾಲೆಯ ಜಾರ್ಜ್‌ಶೀಟ್ ಬಿಡುಗಡೆ ಮಾಡಿದ್ದು ಇದಕ್ಕೆ ಇದೀಗ ಕಾಂಗ್ರೆಸ್ ತಿರುಗೇಟು ನೀಡಿದೆ. ಇನ್ನು ಡಿಕೆ ಶಿವಕುಮಾರ್ ಅವರು ರಾಜಕೀಯ ನಿವೃತ್ತಿ ಸವಾಲು ಹಾಕಿದ್ದಾರೆ

ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದಿನವೇ ಬಿಜೆಪಿಗೆ ರಾಜಕೀಯ ನಿವೃತ್ತಿ ಸವಾಲು ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಸುನಿಲ್​ ಎಮ್​ ಹೆಚ್​
| Edited By: |

Updated on: Aug 30, 2023 | 11:14 AM

Share

ಮೈಸೂರು, (ಆಗಸ್ಟ್ 30): ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರೋ ರಾಜ್ಯ ಸರ್ಕಾರ(Karnataka Congress Government) ಇಂದು(ಆಗಸ್ಟ್ 30) ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ(BJP) ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ ಮಾಡಿದೆ. ಇದರಲ್ಲಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಡಿಕೆ ಶಿವಕುಮಾರ್(DK Shivakumar)​ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಇಂದು(ಆಗಸ್ಟ್ 30) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿಯವರು ಆರೋಪ ಸಾಬೀತು ಮಾಡಲಿ. ಇವರದ್ದನ್ನು ಬಿಚ್ಚೋ ಕಾಲ ಬರುತ್ತದೆ ಬಿಚ್ಚುತ್ತೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಸವಾಲು ಹಾಕುವ ಮೂಲಕ ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: Gruha Lakshmi Scheme Launch Live: ಕೆಂಪೇಗೌಡ ಏರ್​​ಪೋರ್ಟ್​ಗೆ ಆಗಮಿಸಿದ ರಾಹುಲ್ ಗಾಂಧಿ

ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮೊದಲ ಕ್ಯಾಬಿನೆಟ್​​ನಲ್ಲೇ ಎಲ್ಲಾ ಗ್ಯಾರಂಟಿ ಇತ್ಯರ್ಥ ಮಾಡಿದ್ದೇವೆ. ಬಿಜೆಪಿಯವರದ್ದು ಭರವಸೆ, ನಮ್ಮದು ಗ್ಯಾರಂಟಿ. ಇಂದು ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದು, ನಾಡಿನೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರ ಮನೆಗಳಲ್ಲಿ ಹೆಣ್ಣು ಮಕ್ಕಳು ಹಬ್ಬದ ಸಂಭ್ರಮದಲ್ಲಿದ್ದಾರೆ. 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ, ಸಿಎಂ ಸಿದ್ದರಾಮಯ್ಯ, ನಾನು ಚೆಕ್​ಗೆ ಸಹಿ ಹಾಕಿದ್ದು, ಯಜಮಾನಿಯರ ಬ್ಯಾಂಕ್​ ಖಾತೆಗೆ 2000 ರೂ ಹಣ ಜಮೆಯಾಗುತ್ತೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಕಿಕ್ಕಿಸಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?