AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರದಲ್ಲೇ ಬಿಜೆಪಿ, ಜೆಡಿಎಸ್​ ಟೀಕೆಗಳಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್

ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೆವು, ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇನ್ನೂ ಎರಡು ಮೂರು ತಿಂಗಳಲ್ಲೇ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರ್ತೇವೆ ಎಂದರು.

ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರದಲ್ಲೇ ಬಿಜೆಪಿ, ಜೆಡಿಎಸ್​ ಟೀಕೆಗಳಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​
ಕಿರಣ್ ಹನುಮಂತ್​ ಮಾದಾರ್
|

Updated on:Jun 11, 2023 | 12:48 PM

Share

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Free Bus Travel For Women Scheme) ರಾಜ್ಯದಾದ್ಯಂತ ಚಾಲನೆ ಸಿಕ್ಕಿದೆ. ಇಂದು(ಜೂನ್ 11) ವಿಧಾನಸೌಧ ಮುಂಭಾಗ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ(Shakti yojana) ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D. K Shivakumar) ‘ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೆವು, ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ಈ ಕಾರ್ಯಕ್ರಮವು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿಲ್ಲ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಈ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ಜನರು ನಮ್ಮ ಮೇಲೆ ನಂಬಿಕೆ ಇಟ್ಟು ಅಧಿಕಾರ ಕೊಟ್ಟಿದ್ದು, ಈ ಮೂಲಕ ಅವರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.

ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತದೆ

ನಮ್ಮ ಸರ್ಕಾರ ನೀಡುತ್ತಿರುವ ಐದು ಗ್ಯಾರಂಟಿಗಳ ಬಗ್ಗೆ ಬಿಜೆಪಿ, ಜೆಡಿಎಸ್​​​ ಸ್ನೇಹಿತರು ಟೀಕೆಗಳ ಸುರಿಮಳೆಯನ್ನೇ ಸುರಿಸ್ತಿದ್ದಾರೆ. ವಿಪಕ್ಷಗಳಿಗೆ ಉತ್ತರ ನೀಡುವ ಸಾಮರ್ಥ್ಯ ನಮ್ಮ ಬಳಿ ಇಲ್ಲ. ಬಹಳ ಚರ್ಚೆ ಮಾಡಿಯೇ ನಾವು ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಇದರಿಂದ ನಮ್ಮ ರಾಜ್ಯ ದಿವಾಳಿ ಆಗುತ್ತೆಂದು ಬಿಜೆಪಿಯವರು ಹೇಳ್ತಿದ್ದಾರೆ, ಆದರೆ ಈಗ ಮಧ್ಯಪ್ರದೇಶದಲ್ಲಿರುವ ಅವರದ್ದೇ ಬಿಜೆಪಿ ಸರ್ಕಾರ ಅಲ್ಲಿನ ಮಹಿಳೆಯರಿಗೆ $1 ಸಾವಿರ ಕೊಡುವುದಾಗಿ ಹೇಳಿದ್ದಾರೆ. ಅದೇನೆ ಇರಲಿ ನಾವು ರಾಜ್ಯದ ಜನರಿಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ:ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ, ಬಸ್ ಹತ್ತುವ ಮುನ್ನ ಇದು ನಿಮ್ಮ ಬಳಿ ಇರ್ಬೇಕು

ಹೆಣ್ಣು ಕುಟುಂಬದ ಕಣ್ಣು ಅನ್ನೋ ಹಾಗೆ ಸರ್ಕಾರದ ಕಣ್ಣು ವಂದಿತ ಶರ್ಮ

ಇದೇ ವೇಳೆ ಮಾತನಾಡುತ್ತಾ ‘ಹೆಣ್ಣು ಕುಟುಂಬದ ಕಣ್ಣು ಅನ್ನೋ ಹಾಗೆ ಸರ್ಕಾರದ ಕಣ್ಣು ವಂದಿತ ಶರ್ಮ, ಜನರ ಸೇವೆ ಜನಾರ್ಧನ ಸೇವೆ ಜನರ ಕೆಲಸ ದೇವರ ಕೆಲಸ ಅಂತ ಕೆಂಗಲ್ ಹನುಮಂತಯ್ಯ ಬರೆಸಿದ್ದಾರೆ. ದೇಶಕ್ಕೆ ಇತಿಹಾಸ ಸ್ವಾತಂತ್ರ್ಯ ಬದಲಾವಣೆ ತಂದುಕೊಟ್ಟ ಪಕ್ಷ ನಮ್ಮದು. ಡಬಲ್ ಇಂಜಿನ್ ಸರ್ಕಾರ ಇದ್ದರೂ ಕೂಡ ನಮ್ಮ ಆಡಳಿತ, ನುಡಿ, ನಡೆ ಮೇಲೆ ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾವು ಕೇವಲ ಕೆಲಸಗಳ ಮೂಲಕವೇ ನಾವು ಉತ್ತರ ನೀಡ್ತೇವೆ. ಎರಡು ಮೂರು ತಿಂಗಳಲ್ಲೇ ಎಲ್ಲ ಗ್ಯಾರಂಟಿಗಳ ಜಾರಿಗೆ ತರ್ತೇವೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Sun, 11 June 23

ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!