AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಸುರೇಶ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧಿಸಿದರೂ ಚಿಂತಿಲ್ಲ: ಮಂಗಳೂರಿನಲ್ಲಿ ಡಿಕೆ ಶಿವಕುಮಾರ್ ಖಡಕ್ ನುಡಿ

ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೂ ಮುನ್ನ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ವಿರುದ್ಧ ಜೆಡಿಎಸ್​​ನಿಂದ ಕುಮಾರಸ್ವಾಮಿ ಕಣಕ್ಕಿಳಿದರೂ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಜತೆಗೆ, ಮಂಗಳೂರಿನ ಅಭಿವೃದ್ಧಿಗೆ ಕಾಂಗ್ರೆಸ್ ತನ್ನದೇ ಆದ ಯೋಚನೆಗಳನ್ನು ಹೊಂದಿದೆ ಎಂದೂ ತಿಳಿಸಿದ್ದಾರೆ.

ಡಿಕೆ ಸುರೇಶ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧಿಸಿದರೂ ಚಿಂತಿಲ್ಲ: ಮಂಗಳೂರಿನಲ್ಲಿ ಡಿಕೆ ಶಿವಕುಮಾರ್ ಖಡಕ್ ನುಡಿ
ಡಿಕೆ ಶಿವಕುಮಾರ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Feb 19, 2024 | 3:56 PM

Share

ಮಂಗಳೂರು, ಫೆಬ್ರವರಿ 17: ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರದಿಂದ ಸಂಸದ ಡಿಕೆ ಸುರೇಶ್ ವಿರುದ್ಧವೇ ಸ್ಪರ್ಧಿಸಿದರೂ ಬೇಸರವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಮಂಗಳೂರಿನಲ್ಲಿ (Mangaluru) ಕಾಂಗ್ರೆಸ್ ಸಮಾವೇಶ ಮೈದಾನದ ಬಳಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ, ಕುಮಾರಸ್ವಾಮಿ ವಿರುದ್ಧವೇ ಸ್ಪರ್ಧಿಸಿದ್ದವನು ನಾನು. ನನ್ನ ಸಹೋದರನ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೂ ಆತನೇ ಗೆದ್ದಿದ್ದಾನೆ. ಬಿಜೆಪಿ, ಜೆಡಿಎಸ್ ನನ್ನ ಸಹೋದರನ ವಿರುದ್ಧ ಸ್ಪರ್ಧಿಸಿದ್ದಾಗಲೂ ಗೆದ್ದಿದ್ದಾನೆ. ಸುರೇಶ್ ದೆಹಲಿಯಲ್ಲಿ ಕೂರುವ ಎಂಪಿ ಅಲ್ಲ, ಹಳ್ಳಿಯ ಸಂಸದ ಎಂದು ಹೇಳಿದರು.

ದೇವೇಗೌಡ, ಕುಮಾರಸ್ವಾಮಿ ನಮ್ಮಲ್ಲಿ ಎಂಪಿ ಆಗಿದ್ದವರು. ಹಳೇ ಎಂಪಿಗಳು ಹಾಗೂ ಈ ಎಂಪಿ ವ್ಯತ್ಯಾಸ ಜನ ನೋಡಿದ್ದಾರೆ‌. ಬೆಂಗಳೂರು ಗ್ರಾಮಾಂತರದಲ್ಲಿ ಯಾರೇ ನಿಂತರೂ ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ರಾಜಕೀಯದಲ್ಲಿ ಯಾವುದೂ ಶಾಶ್ವತ ಹಾಗೂ ಅಸಾಧ್ಯವಲ್ಲ. ರಾಜಕಾರಣ ಸಾಧ್ಯತೆಗಳ ಕಲೆ, ಹೀಗಾಗಿ ಇಲ್ಲಿ ಬದಲಾವಣೆ ವಿಶ್ವಾಸವಿದೆ. ಹೀಗಾಗಿ ಮಂಗಳೂರಿನಲ್ಲಿ ಈ ಬಾರಿ ಸಮಾವೇಶ ಮಾಡುತ್ತಾ ಇದ್ದೇವೆ. ಈ ಭಾಗದಲ್ಲಿ ನಾವು ಗೆಲ್ಲುವ ಸಾಧ್ಯತೆ ಹೆಚ್ಚಿದೆ, ಹಾಗಾಗಿ ಸಮಾವೇಶ ಮಾಡುತ್ತಿದ್ದೇವೆ. ಇಲ್ಲಿ ನಿರುದ್ಯೋಗ ಇದೆ, ಇಲ್ಲಿನ ಜನ ಬೇರೆ ಕಡೆ ಉದ್ಯೋಗಕ್ಕೆ ಹೋಗುತ್ತಾ ಇದ್ದಾರೆ. ಇಲ್ಲಿನವರು ಸೌದಿ, ಬೆಂಗಳೂರು, ಮುಂಬೈ ಕಡೆ ಹೋಗುತ್ತಾ ಇದ್ದಾರೆ. ಇಲ್ಲಿ ಎಷ್ಟೇ ಶಿಕ್ಷಣ ಸಂಸ್ಥೆಗಳಿದ್ದರೂ ಮಕ್ಕಳು ಡ್ರಾಪ್ ಔಟ್ ಆಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ಮಂಗಳೂರಿನ ಅಭಿವೃದ್ಧಿಗೆ ಹೊಸ ಆಲೋಚನೆ ಇದೆ: ಡಿಕೆ ಶಿವಕುಮಾರ್

ಇಲ್ಲಿ (ಮಂಗಳೂರು) ಧರ್ಮ ರಾಜಕೀಯ ಇದೆ. ಬಿಜೆಪಿ ಅಭಿವೃದ್ಧಿ ಮಾಡುತ್ತಾ ಇಲ್ಲ. ಈ ಜಿಲ್ಲೆಯ ಬಗ್ಗೆ ನಾವು ಹೊಸ ಅಲೋಚನೆ ಮಾಡುತ್ತೇವೆ. ಉದ್ಯೋಗ ಸೃಷ್ಟಿಸುತ್ತೇವೆ, ಸಂಜೆ ಏಳು ಗಂಟೆ ಬಳಿಕ ಮಂಗಳೂರು ಡೆಡ್ ಸಿಟಿ ಆಗಿದೆ. ವ್ಯಾಪಾರ ವಹಿವಾಟು ನಡೆದು ಜನರಿಗೆ ಉದ್ಯೋಗ ಸಿಗಬೇಕು. ಇಲ್ಲಿನ ಬ್ಯಾಂಕ್​​ಗಳು ಕೂಡ ಇಲ್ಲಿಂದ ಬೇರೆ ಕಡೆ ಹೋಗುತ್ತಾ ಇವೆ. ಇಲ್ಲಿನ ಜನ ದೇವಸ್ಥಾನಗಳಲ್ಲಿ ಭಕ್ತಿಯಿಂದ ಇರುತ್ತಾರೆ. ಅದೇ ವ್ಯವಹಾರಗಳಲ್ಲೂ ಇರಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ, ದೇಶ ವಿಭಜನೆ ಬಗ್ಗೆ ಮಾತಾಡಿಲ್ಲ: ಡಿಕೆ ಸುರೇಶ್

ಜೆರೋಸಾ ಶಾಲೆ ವಿಚಾರದಲ್ಲಿ ಕಾನೂನು ರೀತಿಯಲ್ಲಿ ಪ್ರಕ್ರಿಯೆಗಳು ನಡೆಯಲಿವೆ. ಯಾರೇ ರಾಜಕೀಯ ಮಾಡಿದ್ದರೂ ಕಾನೂನು ಅದರ ಕೆಲಸ ಮಾಡಲಿದೆ. ಅವರು ಹೋರಾಟ ಮಾಡುತ್ತಾ ಇರಲಿ, ಕಾನೂನು ಕೆಲಸ ಮಾಡುತ್ತದೆ. ನಾನು ಪೊಲೀಸ್ ಕೆಲಸ ಮಾಡಲು ಆಗಲ್ಲ, ಪೊಲೀಸರು ಮಾಡುತ್ತಾರೆ. ನಮ್ಮ ರಾಜ್ಯಕ್ಕೆ ಅನ್ಯಾಯ ಆದಾಗ ಬಿಜೆಪಿ ಮಾತನಾಡಿಲ್ಲ. ಬಜೆಟ್​ನಲ್ಲಿ ದ.ಕ ಜಿಲ್ಲೆಗೂ ಕೊಟ್ಟಿದ್ದೇವೆ, ಮುಸ್ಲಿಮರಿಗೆ ಕೂಡಲೇ ಬಾರದಾ? ಬಿಜೆಪಿ ರಾಜಕಾರಣ ಮಾಡುತ್ತಾ ಇದೆ, ಅದು ಮಾಡಲಿ ಎಂದು ಡಿಕೆ ಶಿವಕುಮಾರ್ ಟೀಕಿಸಿದರು.

ಲೋಕಸಭೆ ಚುನಾವಣೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ನಾಲ್ಕು ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದೇವೆ. ಟೀಂ ಸರ್ವೇ ಬಳಿಕ ನೋಡೋಣ ಎಂದು ಅವರು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 am, Sat, 17 February 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ