AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತಕುಮಾರ್ ಹೆಗಡೆಗೆ ಮಾನಸಿಕ ಸ್ಥಿಮಿತ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ

ಮಾನಸಿಕ ಸ್ಥಿರತೆ ಇರುವವರು ಈ ರೀತಿ ಮಾತನಾಡಲು ಹೋಗಲ್ಲ. ಬಹುಶಃ ಅವರ ನಾಯಕರಿಗೆ ಮಾತನಾಡಿದ್ದು ತಪ್ಪು ಅಂತಾ ಗೊತ್ತಾಗಿದೆ. ಕೂಡಲೇ ಅನಂತಕುಮಾರ್​ ಹೆಗಡೆ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅನಂತಕುಮಾರ್ ಹೆಗಡೆಗೆ ಮಾನಸಿಕ ಸ್ಥಿಮಿತ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ
ಡಿಸಿಎಂ ಡಿಕೆ ಶಿವಕುಮಾರ್
TV9 Web
| Edited By: |

Updated on: Jan 15, 2024 | 2:44 PM

Share

ಬೆಂಗಳೂರು, ಜನವರಿ 15: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ವಾಗ್ದಾಳಿ ನಡೆಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಹೆಗಡೆ ಅರೋಗ್ಯದ ಬಗ್ಗೆ ಅವರ ಮುಖಂಡರೇ ಕಾಳಜಿ ವಹಿಸಬೇಕು. ಮಾನಸಿಕ ಸ್ಥಿರತೆ ಇರುವವರು ಈ ರೀತಿ ಮಾತನಾಡಲು ಹೋಗಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಶಃ ಅವರ ನಾಯಕರಿಗೆ ಮಾತನಾಡಿದ್ದು ತಪ್ಪು ಅಂತಾ ಗೊತ್ತಾಗಿದೆ. ಕೂಡಲೇ ಅನಂತಕುಮಾರ್​ ಹೆಗಡೆ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಂಬಂಧ ಜನವರಿ 19ರಂದು ಸಂಜೆ 4ಕ್ಕೆ ಸಭೆ ಕರೆಯಲಾಗಿದೆ. ಅಂದು ಚುನಾವಣಾ ಸಮಿತಿಯ ಸಭೆ ನಡೆಯಲಿದೆ. ಲೋಕಸಭಾ ಅಭ್ಯರ್ಥಿ ಫೈನಲ್ ಸಂಬಂಧಿಸಿದಂತೆ ಸಭೆ ನಡೆಸಲಿದ್ದೇನೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಶೀಘ್ರ ಆಗಲಿದೆ. ಒಂದು ವೇಳೆ ಇವತ್ತು ಸಂಜೆ ಒಳಗಡೆ ಆದರೆ ನಿಮ್ಮ ಜೊತೆ ಮಾತನಾಡುತ್ತೇನೆ. ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ರಾಜಕಾರಣಿಗಳಿಗೂ ಒಂದೇ ಮಾನದಂಡ: ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತಕುಮಾರ್ ಹೆಗಡೆ ಏಕವಚನದಲ್ಲಿ ನಿಂದಿಸಿದ ಬಗ್ಗೆ ಉಡುಪಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದು, ಎಲ್ಲಾ ರಾಜಕಾರಣಿಗಳಿಗೂ ಒಂದೇ ಮಾನದಂಡ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರಧಾನಿ ಪ್ರಧಾನಿ ಮೋದಿ ಅವರನ್ನು ಎಷ್ಟು ಬಾರಿ ಏಕವಚನದಲ್ಲಿ ಬೈದಿಲ್ಲ? ಹಾಗಾದರೆ ಮೋದಿಯನ್ನು ಸಿದ್ದರಾಮಯ್ಯ ಏಕವಚನದಲ್ಲಿ ಬೈದದ್ದು ತಪ್ಪಲ್ವಾ? ಕಾಂಗ್ರೆಸ್ ಮುಖಂಡರೇ ಚರ್ಚೆ ಏಕಮುಖವಾಗಿ ಸಾಗಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ: ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದ ಪರಮೇಶ್ವರ್

ಕಾಂಗ್ರೆಸ್ ನಾಯಕರು ಏಕಮುಖವಾಗಿ ಮಾತನಾಡಬಾರದು. ಏಕವಚನದಲ್ಲಿ ಯಾರನ್ನೂ ಬೈಯ್ಯಬಾರದು ಎಂಬುದು ಸಾರ್ವತ್ರಿಕ ನಿಲುವು. ಮೋದಿಯನ್ನು ಏಕವಚನದಲ್ಲಿ ಬೈದ ಸಿದ್ದರಾಮಯ್ಯ ನಿಲುವನ್ನೂ ಅವರು ಖಂಡಿಸಬೇಕು. ಆಗ ಅವರು ಮಾಡಿದ ಖಂಡನೆಗಳಿಗೆ ಅರ್ಥ ಬರುತ್ತದೆ. ಸರ್ಜಿಕಲ್ ಸ್ಟ್ರೈಕ್ ಸಂದರ್ಭ ‘ಇವ ಗನ್ ತೆಗೆದುಕೊಂಡು ಹೋಗಿದ್ನಾ’ ಎಂದು ಸಿದ್ದರಾಮಯ್ಯ ಏಕವಚನದಲ್ಲಿ ನಿಂದಿಸಿದ್ದರು ಎಂದು ಕೋಟ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು